Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಫೆಬ್ರವರಿ 21

    February 19, 2026

    ಉಜಿರೆಯಲ್ಲಿ ಧರಿತ್ರಿ ಭಿಡೆ ಮತ್ತು ಹಂಸಿನೀ ಭಿಡೆ ಸಹೋದರಿಯರ ಭರತನಾಟ್ಯ ರಂಗಪ್ರವೇಶ | ಫೆಬ್ರವರಿ 21

    February 19, 2026

    ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಚಿದಂಬರ ಬೈಕಂಪಾಡಿ ಆಯ್ಕೆ

    February 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಶ್ರೀರಾಮ ಕಾರುಣ್ಯ ಕಲಾಸಂಘ’ದ ದಶಮಾನೋತ್ಸವ 
    Yakshagana

    ‘ಶ್ರೀರಾಮ ಕಾರುಣ್ಯ ಕಲಾಸಂಘ’ದ ದಶಮಾನೋತ್ಸವ 

    August 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಡುಪಿ: ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಇವರ ಚಾತುರ್ಮಾಸ್ಯ ವ್ರತಾಚಾರಣೆಯ ಕಾರ್ಯಕ್ರಮದಲ್ಲಿ ಹಮ್ಮಿಕೊಂಡ ‘ಶ್ರೀರಾಮ ಕಾರುಣ್ಯ ಕಲಾಸಂಘ’ದ ದಶಮಾನೋತ್ಸವ ಕಾರ್ಯಕ್ರಮವು 08 ಆಗಸ್ಟ್ 2024ರಂದು ಭಟ್ಕಳದ  ಕರಿಕಲ್ಲಿನ ಧ್ಯಾನ ಮಂದಿರದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಯಕ್ಷಗಾನ ಪರಂಪರೆಯ ಉಳಿವು ಹಾಗೂ ಬೆಳವಣಿಗೆಗೆ ಧಾರ್ಮಿಕ ಸಂಸ್ಥೆಗಳ ಸಹಕಾರ ಅತ್ಯಗತ್ಯ. ಯಕ್ಷಗಾನ ಪ್ರದರ್ಶನಕ್ಕೆ ಸ್ವಾಮೀಜಿ ಅವಕಾಶ ನೀಡಿರುವುದಲ್ಲದೆ ಸಾಧಕ ಕಲಾವಿದರನ್ನು ಸನ್ಮಾನಿಸಿರುವುದು ಪ್ರಶಂಸನೀಯ. ಯಕ್ಷಗಾನ ಕಲೆಗೆ ಕೇವಲ ಕಲಾವಿದರು ಹಾಗೂ ಪ್ರೋತ್ಸಾಹಕರಿದ್ದರೆ ಸಾಲದು. ಕಲೆಯನ್ನು ಆಸ್ವಾದಿಸುವ ಮನಸ್ಸುಗಳು ಅಗತ್ಯ.” ಎಂದರು.
    ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ “ಬದುಕಿನಲ್ಲಿ ಆನಂದ ಹಾಗೂ ಸುಖ ಪ್ರಾಪ್ತಿಗೆ ಧರ್ಮ ಪಾಲಿಸಬೇಕು. ಚಾತುರ್ಮಾಸ್ಯದ 50 ದಿನಗಳಲ್ಲಿ 50 ಯಕ್ಷಗಾನ ಪ್ರದರ್ಶನ ಏರ್ಪಡಿಸುವ ಚಿಂತನೆ ನಡೆಸಿದ್ದೇವೆ.” ಎಂದರು.
    ಇದೇ ಸಂದರ್ಭದಲ್ಲಿ ಯಕ್ಷಗಾನ ಸಂಘಟಕ ಬಿ. ಜನಾರ್ದನ ಅಮ್ಮುಂಜೆ ಹಾಗೂ ಕಲಾವಿದ ಪಂಜ ಗುಡ್ಡಪ್ಪ ಸುವರ್ಣ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ದಯಾನಂದ ಪಿ. ಬೆಳಾಲ್, ಕೃಷ್ಣ ನಾಯ್ಕ ಭಟ್ಕಳ, ವಿಠಲ ನಾಯ್ಕ, ಎಂ.ಎಸ್.ನಾಯ್ಕ, ಭಾಗವತ ಗಿರೀಶ್ ರೈ ಕಕ್ಕೆಪದವು ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಪುರಭವನದಲ್ಲಿ ‘ಸನಾತನ ನೃತ್ಯೋತ್ಸವ’ | ಆಗಸ್ಟ್ 17
    Next Article ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಸುಪ್ರಭಾ ಕಲ್ಕೂರ್ ಇವರ ನೃತ್ಯ ಪ್ರದರ್ಶನ | ಆಗಸ್ಟ್ 19
    roovari

    Comments are closed.

    Related Posts

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    ಡಾ. ನಿತ್ಯಾನಂದ ಬಿ. ಶೆಟ್ಟಿ ಇವರ ‘ಅಳವು ಅರಿಯದ ಭಾಷೆ’ ಪುಸ್ತಕ ಲೋಕಾರ್ಪಣೆ

    February 16, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.