ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ 119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ದಿನಾಂಕ 27 ಜೂನ್ 2026ರಂದು ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡ ಇಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಇವರು ವಹಿಸಿದ್ದು, ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್. ಮಾತನಾಡುತ್ತಾ, “ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಲು ಓದುವ ಚಟು ವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಪೂರಕ” ಎಂದು ತಿಳಿಸಿದ್ದಾರೆ. ಅತಿಥಿಗಳಾಗಿ ಹಿರಿಯ ಬರಹಗಾರರಾದ ಎನ್. ಸುಬ್ರಾಯ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಚಂದ್ರ ಶೆಟ್ಟಿ ಇವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿ, ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕವಾಗಿ ಮಾತಾಡಿ ಎಲ್ಲರನ್ನು ಸ್ವಾಗತಿಸಿದರು.

