ಮಂಗಳೂರು : ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮಂಗಳೂರು ಇದರ 17ನೇ ವಾರ್ಷಿಕೋತ್ಸವವನ್ನು ದಿನಾಂಕ 07 ಜುಲೈ 2025ರಂದು ಸಂಜೆ 6-00 ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ (ಪರಿಗಣಿತ) ವಿಶ್ವ ವಿದ್ಯಾಲಯದ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹೆಗ್ಗೋಡಿನ ಜನಮನದಾಟ ಪ್ರಸ್ತುತ ಪಡಿಸುವ ಗಣೇಶ್ ಎಂ. ಹೆಗ್ಗೋಡು ಇವರ ನಿರ್ದೇಶನದಲ್ಲಿ ಪೂರ್ಣ ಚಂದ್ರ ತೇಜಸ್ವಿಯವರ ಕಥೆಯಾಧಾರಿತ ‘ಮಾಯಾ ಮೃಗ’ ಮತ್ತು ಬೂಕರ್ ವಿಜೇತೆ ಬಾನು ಮುಷ್ತಾಕ್ ಇವರ ಕಥೆಯಾಧಾರಿತ ‘ಎದೆಯ ಹಣತೆ’ ಎಂಬ ಕನ್ನಡ ನಾಟಕಗಳ ಪ್ರದರ್ಶನ ನಡೆಯಲಿದೆ. ಇದೇ ಸಂದರ್ಭದಲ್ಲಿ ಹಿರಿಯ ರಂಗನಟ ಲಕ್ಷ್ಮಣ ಕುಮಾರ್ ಮಲ್ಲೂರು ಇವರಿಗೆ ‘ರಂಗ ಭಾಸ್ಕರ ಪ್ರಶಸ್ತಿ ಪ್ರದಾನ ಮಾಡಲಾಗುವುದು.