Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಾಸನಾಂಬ ಕಲಾಕ್ಷೇತ್ರದಲ್ಲಿ ‘22ನೇ ಕುವೆಂಪು ನಾಟಕೋತ್ಸವ 2023’ | ಡಿಸೆಂಬರ್ 28ರಿಂದ 31
    Drama

    ಹಾಸನಾಂಬ ಕಲಾಕ್ಷೇತ್ರದಲ್ಲಿ ‘22ನೇ ಕುವೆಂಪು ನಾಟಕೋತ್ಸವ 2023’ | ಡಿಸೆಂಬರ್ 28ರಿಂದ 31

    December 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹಾಸನ : ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಕ್ಕಳ ಸಂಸ್ಥೆಯಾದ ಬೆಂಗಳೂರಿನ ರಂಗಕಹಳೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳ್ಳಿ ಇದರ ಮಾರ್ಗದರ್ಶನದಲ್ಲಿ ‘22ನೇ ಕುವೆಂಪು ನಾಟಕೋತ್ಸವ 2023’ ಕುವೆಂಪು ಜನ್ಮದಿನೋತ್ಸವ, ವಿಚಾರ ಸಂಕಿರಣ, ಸಾಧಕರಿಗೆ ಗೌರವಾರ್ಪಣೆ, ಚಲನಚಿತ್ರ ಪ್ರದರ್ಶನ, ಕುವೆಂಪು ಗೀತಗಾಯನಗಳು ದಿನಾಂಕ 28-12-2023ರಿಂದ 31-12-2023ರವರೆಗೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 28-12-2023ರಂದು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಜನಪದ ವಿದ್ವಾಂಸರಾದ ಡಾ. ಹಂಪನಹಳ್ಳಿ ತಿಮ್ಮೇಗೌಡ ಇವರು ವಹಿಸಲಿದ್ದು, ಹಾಸನ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಸತ್ಯಭಾಮ ಸಿ. ಇವರು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿ. ಲಕ್ಷ್ಮಣ ಇವರ ನಿರ್ದೇಶನದಲ್ಲಿ ರಂಗಕಹಳೆ ತಂಡದವರಿಂದ ‘ಬೊಮ್ಮನಹಳ್ಳಿಯ ಕಿಂದರಿಜೋಗಿ’ ಮತ್ತು ಓಹಿಲೇಶ ಎಲ್. ನಿರ್ದೇಶನದಲ್ಲಿ ಗೌರಿಶಂಕರ ಸಾಂಸ್ಕೃತಿಕ ಕ್ರೀಡಾದತ್ತಿ ತಂಡದಿಂದ ‘ಮೋಡಣ್ಣನ ತಮ್ಮ’ ನಾಟಕ ಪ್ರದರ್ಶನ, ದಿನಾಂಕ 29-12-2023ರಂದು ಟಿ.ಎಂ. ಬಾಲಕೃಷ್ಣ ನಿರ್ದೇಶನದ ಬೆಂಗಳೂರಿನ ಬಿ.ಎಂ.ಟಿ.ಸಿ. ಸಾಂಸ್ಕೃತಿಕ ಕಲಾ ಕುಠೀರ ಅಭಿನಯಿಸುವ ‘ಯಮನ ಸೋಲು’ ಮತ್ತು ಸಿ. ಲಕ್ಷ್ಮಣ ನಿದರ್ಶನದ ರಂಗಕಹಳೆ ಕ್ರಿಯೇಷನ್ಸ್ ಅರ್ಪಿಸುವ ‘ನನ್ನ ಗೋಪಾಲ’ ಮಕ್ಕಳ ಚಲನ ಚಿತ್ರ ಪ್ರದರ್ಶನವಿದೆ. ದಿನಾಂಕ 30-12-2023ರಂದು ಬಾಲಕ ಕುವೆಂಪು ಕಿರುಚಿತ್ರ ಪ್ರದರ್ಶನ ಮತ್ತು ಮಾಲತೇಶ್ ವಿನ್ಯಾಸ, ನಿರ್ದೇಶನದ ಬೆಂಗಳೂರಿನ ಬಹುರೂಪಿ ತಂಡ ಅಭಿನಯಿಸುವ ‘ಸ್ಮಶಾನ ಕುರುಕ್ಷೇತ್ರ ನಾಟಕ ಪ್ರದರ್ಶನ.

    ದಿನಾಂಕ 31-12-2023ರಂದು ಸಮಾರೋಪ ಸಮಾರಂಭವು ಹಾಸನ ಜಿಲ್ಲೆಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀಯುತ ಜಿ. ಎಲ್. ಮುದ್ದೇಗೌಡ ಇವರ ಘನ ಉಪಸ್ಥಿತಿಯಲ್ಲಿ ನಡೆಯಲಿದೆ. ಸಂಜೆ 6 ಗಂಟೆಗೆ ಪ್ರತಿಭಾವಂತ ಮಕ್ಕಳಿಂದ ‘ಶ್ರೀ ಕುವೆಂಪು ಗೀತೆ ನಮನ’, ವಿದುಷಿ ಶ್ರೀಮತಿ ಶೈಲಜಾ ನಿರ್ದೇಶನದಲ್ಲಿ ಚನ್ನರಾಯಪಟ್ಟಣದ ನೃತ್ಯಾಂಜಲಿ ಕಲಾನಿಕೇತನ ತಂಡವರಿಂದ ಶ್ರೀ ಕುವೆಂಪು ಗೀತೆಯ ನೃತ್ಯ ರೂಪಕ ‘ಭೈರವಿ ನಾರಿ’ ಮತ್ತು ಛಾಯಾ ಭಾರ್ಗವಿ ಎಸ್.ಎಚ್. ನಿರ್ದೇಶನದ ಅದಮ್ಯ ರಂಗ ಸಂಸ್ಕೃತಿ ಟ್ರಸ್ಟ್ ತಂಡದವರಿಂದ ‘ಶೂದ್ರ ತಪಸ್ವಿ’ ಎಂಬ ನಾಟಕ ಪ್ರದರ್ಶನ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಯಶಸ್ವಿಯಾಗಿ ನಡೆದ ಎರಡನೇ ವರ್ಷದ ಕೊಡವ ಸಾಂಪ್ರದಾಯಿಕ ವಾಲಗತ್ತಾಟ್ ನಮ್ಮೆ 
    Next Article ಕೆ.ಎ.ಎಂ. ಅನ್ಸಾರಿಯವರ ಕೃತಿಗಳ ಅನಾವರಣ | ಡಿಸೆಂಬರ್ 28
    roovari

    Add Comment Cancel Reply


    Related Posts

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಕಲಾಂಗಣದಲ್ಲಿ ಕೊಂಕಣಿ ಕಾರ್ಯಕ್ರಮಗಳು

    June 4, 2025

    ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ‘ಕೂಸಿನ ಕಂಡೀರ’ ಪ್ರಥಮ ಪ್ರದರ್ಶನ

    June 4, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.