Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಕೆ.ಇ.ಎ. ಪ್ರಭಾತ್ ರಂಗಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕದ 25ನೇ ಪ್ರದರ್ಶನ | ಜನವರಿ 25
    Drama

    ಬೆಂಗಳೂರಿನ ಕೆ.ಇ.ಎ. ಪ್ರಭಾತ್ ರಂಗಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕದ 25ನೇ ಪ್ರದರ್ಶನ | ಜನವರಿ 25

    January 16, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಪ್ರವರ ಥಿಯೇಟರ್ ಪ್ರಸ್ತುತ ಪಡಿಸುವ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕದ 25ನೇ ಪ್ರದರ್ಶನವನ್ನು ದಿನಾಂಕ 25 ಜನವರಿ 2025ರಂದು ಸಂಜೆ ಗಂಟೆ 7-00ಕ್ಕೆ ಬೆಂಗಳೂರಿನ ಬಸವೇಶ್ವರನಗರ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿರುವ ಕೆ.ಇ.ಎ. ಪ್ರಭಾತ್ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಈ ನಾಟಕದ ನಿರ್ವಹಣೆ ಅಜಯ್ ಕುಮಾರ್ ಮಾಡಿದ್ದು, ಸಂಗೀತ ಅಕ್ಷಯ್ ಭೊಂಸ್ಲೆ ಮತ್ತು ಬೆಳಕಿನ ವಿನ್ಯಾಸ ಮಂಜು ನಾರಾಯಣ್ ಮತ್ತು ಸೂರ್ಯ ಸಾಥಿ ನೀಡಿದ್ದು, ಕರಣಂ ಪವನ್ ಪ್ರಸಾದ್ ರಂಗ ರೂಪ ಹಾಗೂ ಹನು ರಾಮಸಂಜೀವ ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9686869676. ಪ್ರವೇಶ ದರ ರೂ.200/- ಆಗಿರುತ್ತದೆ.

    ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ಕೃತಿಯು ಮಹಾಕವಿ ಕುವೆಂಪು ಇವರ ಜೀವನದ ಹಲವು ಮಹತ್ವದ ಅಧ್ಯಾಯಗಳನ್ನು ಒಳಗೊಂಡಿದೆ. ಒಂದರ್ಥದಲ್ಲಿ ತೇಜಸ್ವಿಯವರು ಹುಟ್ಟಿದಲ್ಲಿಂದ ಇಲ್ಲಿಯವರೆಗಿನ ಕುವೆಂಪುರವರ ಕಥೆ, ಹಾಗೆಯೇ ಇದು ತೇಜಸ್ವಿಯವರ ಆತ್ಮಕಥೆಯ ಹಲವು ಅಧ್ಯಾಯಗಳೆಂದೂ ಹೇಳಬಹುದು. ಕುವೆಂಪು, ಕನ್ನಡ ಸಾಂಸ್ಕೃತಿಕ ಚರಿತ್ರೆಯಲ್ಲಿ ವಹಿಸಿದ ಮಹತ್ವಪೂರ್ಣ ಪಾತ್ರದಿಂದಾಗಿ ಇವು ಕನ್ನಡ ಸಾಂಸ್ಕೃತಿಕ ಚರಿತ್ರೆಯ ಬಹುಮುಖ್ಯ ಅಧ್ಯಾಯಗಳೂ ಆಗಿದೆ. ಇದೆಲ್ಲದರ ಜೊತೆಗೆ ಇದೊಂದು ಅತಿಸುಂದರ ಕಾದಂಬರಿಯಂಥ ಕಲಾಕೃತಿ. ಇದರಲ್ಲಿ ಚಿತ್ರಿತವಾಗಿರುವ ಕುವೆಂಪುರವರ ವ್ಯಕ್ತಿತ್ವ ಮತ್ತು ಅವರ ಸುತ್ತ ಅರಳಿರುವ ಅನೇಕ ಪಾತ್ರಗಳು ಕನ್ನಡ ಸಾಹಿತ್ಯದಲ್ಲಿನ ಅನನ್ಯ ದಾಖಲೆ.

    drama
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ಸಾಂಸ್ಕೃತಿಕ ಕಲೆಗಳ ಆಗರ ಹೊನ್ನಪ್ಪ ಭಾಗವತರ್
    Next Article ಅಖಿಲ ಕರ್ನಾಟಕ ಕವಿ-ಕಾವ್ಯ ಸಮ್ಮೇಳನದ ಲಾಂಛನ ಮತ್ತು ಆಹ್ವಾನ ಪತ್ರಿಕೆ ಬಿಡುಗಡೆ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    ತೆಕ್ಕಟ್ಟೆಯಲ್ಲಿ ಯಶಸ್ವಿ ಪ್ರದರ್ಶನಕಂಡ “ಸೂರ್ಯ ಚಂದ್ರ” ಮಕ್ಕಳ ನಾಟಕ

    June 6, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಕಲಾಂಗಣದಲ್ಲಿ ಕೊಂಕಣಿ ಕಾರ್ಯಕ್ರಮಗಳು

    June 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.