Subscribe to Updates

    Get the latest creative news from FooBar about art, design and business.

    What's Hot

    ಕವಿ ಮಿತ್ರರು ಸಂಪದ ಸಾಲು ಪತ್ರಿಕೆ ವತಿಯಿಂದ ‘ಕವಿ ಗೋಷ್ಠಿ’ ಕಾರ್ಯಕ್ರಮ | ಜನವರಿ 18

    January 15, 2026

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ‘ಕಥಾಬಿಂದು ಪ್ರಕಾಶನ’

    January 15, 2026

    ಬೆಂಗಳೂರಿನಲ್ಲಿ ಕರ್ನಾಟಕ ಗಜಲ್ ಅಕಾಡೆಮಿಯಿಂದ ‘ಕನ್ನಡ ಗಜಲ್ ಕಮ್ಮಟ’ | ಜನವರಿ 18  

    January 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿ ಎಂ.ಜಿ.ಎಂ. ಕಾಲೇಜಿನಲ್ಲಿ 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ | ಡಿಸೆಂಬರ್ 28
    Book Release

    ಉಡುಪಿ ಎಂ.ಜಿ.ಎಂ. ಕಾಲೇಜಿನಲ್ಲಿ 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ | ಡಿಸೆಂಬರ್ 28

    December 26, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಹಾಗೂ ವಾದಿರಾಜ-ಕನಕದಾಸ ಸಾಹಿತ್ಯ ಮಂಥನ ಕೃತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ 28 ಡಿಸೆಂಬರ್ 2025ರ ಆದಿತ್ಯವಾರದಂದು ಉಡುಪಿ ಎಂ.ಜಿ.ಎಂ ಕಾಲೇಜು ಆವರಣದ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ) ಪರ್ಕಳ ಸಂಸ್ಥೆಗಳು ಸಂಘಟಿಸಿವೆ.

    ಬೆಳಿಗ್ಗೆ 9-30 ಗಂಟೆಗೆ ಈ ಕಾರ್ಯಕ್ರಮವನ್ನು ಹಿರಿಯ ವಿದ್ವಾಂಸರು, ವಿಶ್ರಾಂತ ಕುಲಪತಿಗಳೂ ಆದ ಡಾ. ಬಿ.ಎ. ವಿವೇಕ ರೈ ಕಾರ್ಯಕ್ರಮ ಉದ್ಘಾಟಿಸಿ ‘ವಾದಿರಾಜ ಕನಕದಾಸ ಸಾಹಿತ್ಯ ಮಂಥನ’ ಕೃತಿ ಬಿಡುಗಡೆ ಮಾಡಲಿದ್ದಾರೆ. ಕನಕ ಅಧ್ಯಯನ ಸಂಶೋಧನ ಪೀಠದ ಆಡಳಿತಾಧಿಕಾರಿಗಳಾದ ಡಾ. ಬಿ. ಜಗದೀಶ್ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಲಿದ್ದು, ಪೂರ್ಣಪ್ರಜ್ಞ ಕಾಲೇಜಿನ ಸಂಸ್ಕೃತ ವಿಭಾಗ ಮುಖ್ಯಸ್ಥರಾದ ಡಾ. ರಮೇಶ್ ಟಿ.ಎಸ್. ಇವರು ‘ವಾದಿರಾಜ –ಕನಕದಾಸ’ರ ಕುರಿತು ಉಪನ್ಯಾಸ ನೀಡಲಿದ್ದಾರೆ. 11-00 ಗಂಟೆಯಿಂದ ವಿಭಾ ಎಸ್. ನಾಯಕ್ ಮಂಗಳೂರು ಮತ್ತು ಬಳಗದವರಿಂದ ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮ ನಡೆಯಲಿದೆ.

    ಮಧ್ಯಾಹ್ನ 2-00 ಗಂಟೆಗೆ ವಾದಿರಾಜ ಕನಕದಾಸ ಕೀರ್ತನಾ ಸ್ಪರ್ಧಾ ವಿಜೇತರಿಂದ ಗಾಯನ ಪ್ರಸ್ತುತಿ. ಮಧ್ಯಾಹ್ನ ಗಂಟೆ 3-45ಕ್ಕೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ, ಮುಖ್ಯ ಅತಿಥಿಗಳಾಗಿ ಎಂ.ಜಿ.ಎಂ. ಪಿ.ಯು ಕಾಲೇಜಿನ ಶ್ರೀಮತಿ ಮಾಲತಿದೇವಿ ಉಪಸ್ಥಿತರಿರುವರು. ಸಂಜೆ 4-30 ಗಂಟೆಗೆ ಉಷಾ ರಾಮಕೃಷ್ಣ ಭಟ್ ಮತ್ತು ಬಳಗದವರಿಂದ ಕರ್ನಾಟಕ ಸಂಗೀತ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳುವುದು.

    baikady Book release competition Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನ ಅನುರಾಗ ವಠಾರದಲ್ಲಿ ಮೂರು ಕೃತಿಗಳ ಲೋಕಾರ್ಪಣಾ ಸಮಾರಂಭ | ಡಿಸೆಂಬರ್ 27
    Next Article ಒಡಿಯೂರು ಬೀದಿ ನಾಟಕ ಸ್ಪರ್ಧೆ | ಜನವರಿ 19 ಮತ್ತು 20
    roovari

    Add Comment Cancel Reply


    Related Posts

    ಕವಿ ಮಿತ್ರರು ಸಂಪದ ಸಾಲು ಪತ್ರಿಕೆ ವತಿಯಿಂದ ‘ಕವಿ ಗೋಷ್ಠಿ’ ಕಾರ್ಯಕ್ರಮ | ಜನವರಿ 18

    January 15, 2026

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ‘ಕಥಾಬಿಂದು ಪ್ರಕಾಶನ’

    January 15, 2026

    ಬೆಂಗಳೂರಿನಲ್ಲಿ ಕರ್ನಾಟಕ ಗಜಲ್ ಅಕಾಡೆಮಿಯಿಂದ ‘ಕನ್ನಡ ಗಜಲ್ ಕಮ್ಮಟ’ | ಜನವರಿ 18  

    January 15, 2026

    ಕೋಟ ಪಟೇಲರ ಮನೆ ಅಂಗಣದಲ್ಲಿ ಉಡುಪ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ಜನವರಿ 18

    January 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.