Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಳ್ಳಾಲ ಕಸಾಪದಿಂದ ‘ಕನ್ನಡ ಕಲರವ’ ಉಪನ್ಯಾಸ ಕಾರ್ಯಕ್ರಮ
    Literature

    ಉಳ್ಳಾಲ ಕಸಾಪದಿಂದ ‘ಕನ್ನಡ ಕಲರವ’ ಉಪನ್ಯಾಸ ಕಾರ್ಯಕ್ರಮ

    August 18, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಳ್ಳಾಲ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ದ.ಕ. ಉಡುಪಿ ಜಿಲ್ಲೆ, ಸೈಂಟ್ ಜೋಸೆಫ್ ಜೋಯ್ ಲ್ಯಾಂಡ್ ಹೈಸ್ಕೂಲ್, ಕೊಲ್ಯ, ಸೋಮೇಶ್ವರ ಇವರ ಸಂಯುಕ್ತ ಸಹಯೋಗದೊಂದಿಗೆ ಸೈಂಟ್ ಜೋಸೆಫ್ ಜೋಯ್ ಲ್ಯಾಂಡ್ ಹೈಸ್ಕೂಲ್ ಸಭಾಂಗಣದಲ್ಲಿ ದಿನಾಂಕ 11-08-2023ರಂದು ‘ಕನ್ನಡ ಕಲರವ’ ಕಾರ್ಯಕ್ರಮವನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಸತೀಶ್ ನಾಯಕ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

    ಈ ಕಾರ್ಯಕ್ರಮದಲ್ಲಿ ಭಾಷಾ ಬಾಂಧವ್ಯ ಮತ್ತು ಸಾಮರಸ್ಯ ಚಿಂತನ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡಿದ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಯೋಗೀಶ್ ಕೈರೋಡಿಯವರು “ಮಾನವನ ವಿಕಾಸಕ್ಕೆ ಭಾಷೆಯೇ ಕೀಲಿಕೈ. ಬಹುಭಾಷೆಗಳ ಕಲಿಕೆ ಮತ್ತು ಭಾಷಿಕರ ನಡುವಿನ ಬಾಂಧವ್ಯ ಹಾಗೂ ಸಾಮರಸ್ಯದ ಬದುಕು ಸಮಾಜದ ನೆಮ್ಮದಿಯನ್ನು ಹೆಚ್ಚಿಸುತ್ತದೆ. ಸಾಮರಸ್ಯವನ್ನು ಕದಡುವ ವಿಷಯಗಳನ್ನು ಕೆದಕಬಾರದು. ಭಾಷೆ ಬೆಳೆಯುವುದು ಸಮೂಹದ ಜೊತೆಗಿನ ಸಂವಹನದೊಂದಿಗೆ. ಭಾಷೆಯ ಬಗೆಗಿನ ದುರಭಿಮಾನ ಸಲ್ಲದು. ನಾಡಗೀತೆಯಲ್ಲಿ ಹೇಳಿರುವ ಸೋದರ ಭಾವದ ಮನೋಭಾವವು ಎಲ್ಲರಲ್ಲೂ ಜಾಗೃತವಾಗಬೇಕು. ಕನ್ನಡ ಭಾಷೆಯು ಬೇರೆ ಭಾಷೆಯ ಜೊತೆಗೆ ಕೊಡುಕೊಳ್ಳುವಿಕೆಯೊಂದಿಗೆ ಒಡನಾಡುವ ಕೊಂಡಿಯಾಗಬೇಕು” ಎಂದು ಅಭಿಪ್ರಾಯಪಟ್ಟರು.

    ಉಳ್ಳಾಲ ತಾಲೂಕು ಕಸಾಪ ಘಟಕದ ಅಧ್ಯಕ್ಷರಾದ ಡಾ. ಧನಂಜಯ ಕುಂಬ್ಳೆ ಅವರು ಅಧ್ಯಕ್ಷತೆಯನ್ನು ವಹಿಸಿ “ಕರಾವಳಿಯಲ್ಲಿ ಸಾಮರಸ್ಯದ ಬೇರುಗಳು ಗಟ್ಟಿಯಾಗಿವೆ. ಅದನ್ನು ಕೆಡಿಸುವ ಮಾತುಗಳಿಗೆ ಕಿವಿಕೊಡದೆ ಎಲ್ಲ ಭಾಷೆ, ಜಾತಿ ಧರ್ಮ ವಿಚಾರಗಳ ಒಳಿತನ್ನು ಸ್ವೀಕಾರ ಮಾಡಿ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಕಾರ್ಯದರ್ಶಿಗಳಾಗಿರುವ ದೀಪಕ್ ರಾಜ್, ಉಪಾಧ್ಯಕ್ಷರಾಗಿರುವ ಮುರಳೀಧರ ಕಾಮತ್, ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ಭಟ್, ಉಳ್ಳಾಲ ತಾಲೂಕು ಘಟಕದ ಕಾರ್ಯದರ್ಶಿಗಳಾಗಿರುವ ಎಡ್ವರ್ಡ್ ಲೋಬೋ, ಕೋಶಾಧಿಕಾರಿಗಳಾಗಿರುವ ಲಯನ್ ಚಂದ್ರಹಾಸ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿಗಳಾದ ಶ್ರೀ ರವೀಂದ್ರ ರೈ ಕಲ್ಲಿಮಾರು ಸ್ವಾಗತಿಸಿದರು. ಸಂಚಾಲಕರಾದ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

    ಕಾರ್ಯಕ್ರಮದಲ್ಲಿ ತೋನ್ಸೆ ಸಾಂಸ್ಕೃತಿಕ ತರಬೇತಿ ಕೇಂದ್ರ ಕೊಲ್ಯ ಸೋಮೇಶ್ವರ ಇದರ ಸಹಕಾರದೊಂದಿಗೆ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ‘ಸೌಹಾರ್ದ ಸಂಗೀತ’ ಕಾರ್ಯಕ್ರಮ ನಡೆಯಿತು. ಕನ್ನಡ,  ತುಳು, ಬ್ಯಾರಿ, ಕೊಂಕಣಿ, ಹಿಂದಿ ಭಾಷೆಗಳ ಗೀತಗಾಯನವನ್ನು ತೋನ್ಸೆ ಪುಷ್ಕಳ ಕುಮಾರ್, ಮುರಳೀಧರ ಕಾಮತ್, ಹುಸೇನ್ ಕಾಟಿಪಳ್ಳ, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ರೋನಿ ಕ್ರಾಸ್ತಾ, ವೈಷ್ಣವಿ, ಪರಮೇಶ್ವರಿ ಅವರು  ನಡೆಸಿಕೊಟ್ಟರು. ಪ್ರಕಾಶ್ ಕುಂಬ್ಳೆ ಅವರು ಕೀಬೋರ್ಡ್, ದೀಪಕ್ ರಾಜ್ ಉಳ್ಳಾಲ್ ಅವರು ತಬ್ಲಾದಲ್ಲಿ, ನವಗಿರಿ ಗಣೇಶ್ ಅವರು ರಿದಂ ಪ್ಯಾಡ್ ನಲ್ಲಿ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಯಕ್ಷ ಅಭಿಮಾನಿ ಬಳಗದಿಂದ “ಕುಂಭ ಸಂಭವ, ಉಭಯ ಕುಲ ಬಿಲ್ಲೋಜ” ಬಯಲಾಟ | ಸೆಪ್ಟೆಂಬರ್ 23ರಂದು
    Next Article ಉಡುಪಿಯಲ್ಲಿ ಅಖಂಡ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ‘ಸಮ್ಮೇಳನ’ 
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.