Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದೇಶಹಳ್ಳಿ ಜಿ.ನಾರಾಯಣರ ಜನ್ಮದಿನಾಚಾರಣೆ 
    Literature

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದೇಶಹಳ್ಳಿ ಜಿ.ನಾರಾಯಣರ ಜನ್ಮದಿನಾಚಾರಣೆ 

    September 7, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ದೇಶಹಳ್ಳಿ ಜಿ.ನಾರಾಯಣ ಇವರ 100ನೆಯ ಜನ್ಮದಿನದ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 02-09-2023 ರಂದು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

    ಈ ವೇಳೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಇವರು “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ತ್ರೈವಾರ್ಷಿಕ ಮತ್ತು ಪಂಚವಾರ್ಷಿಕ ಯೋಜನೆಗಳ ಮೂಲಕ ಪರಿಷತ್ತಿನ ಅಭಿವೃದ್ಧಿಗೆ ಕಾರಣೀಕರ್ತರಾಗಿ, ಪರಿಷತ್ತಿನಲ್ಲಿ ಒಂದು ಹೊಸ ಶಕೆ ಪ್ರಾರಂಭಿಸಿದವರು ದೇಶಹಳ್ಳಿ ಜಿ.ನಾರಾಯಣರು. 1969 ರಿಂದ 1978ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಶ್ರೀಯುತರು ಕನ್ನಡ ನಾಡು ನುಡಿಗೆ ಅಪಾರ ಸೇವೆಯನ್ನು ಸಲ್ಲಿಸಿದ್ದರು. ಇವರು 1942ರಲ್ಲಿ `ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿʼ ಭಾಗವಹಿಸಿ ಸೆರೆಮನೆ ಸೇರಿದ್ದರು. 1957ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾಗಿದ್ದ ನಾರಾಯಣ ಅವರು 1964ರಲ್ಲಿ  ಬೆಂಗಳೂರಿನ ಮೇಯರಾಗಿ ಸೇವೆ ಸಲ್ಲಿಸಿದವರು. ಕನ್ನಡ ಪತ್ರಿಕಾ ಅಕಾಡೆಮಿ ಅಧ್ಯಕ್ಷ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದ ಅವರು ನಿರಂತರ ಕನ್ನಡ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸದಾ ಹಾಸ್ಯ ಭರಿತ ಮಾತುಗಳಂದ ಜನರನ್ನು ಸೇರಿಸುವ ಮೂಲಕ ಮಹಾನ್‌ ಸಂಘಟಕರಾಗಿದ್ದರು.”ಎಂದು ಹೇಳಿದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ ಮಾತನಾಡಿ “ಶ್ರೇಷ್ಠ ಸಂಘಟಕರೂ, ಸಾಮಾಜಿಕ ಕಾರ್ಯಕರ್ತರೂ ಆಗಿದ್ದ ಜಿ.ನಾರಾಯಣರು ಅವರು ಸಾಹಿತಿಗಳು ಮತ್ತು ವಿದ್ವಾಂಸರೂ ಅಲ್ಲದೆ ಸ್ವತಃ ಪತ್ರಕರ್ತರೂ ಆಗಿದ್ದರು. ಪರಿಷತ್ತಿನ ಪ್ರಗತಿ ಕಾರ್ಯಗಳಿಗೆ ವಿನೂತನ ಯೋಜನೆಗಳನ್ನು ರೂಪಿಸಿ ಅದರಂತೆ ಯೋಜನಾಬದ್ಧವಾಗಿ ಕೆಲಸಮಾಡಿ ಹೆಸರಾದವರು. ಅವರ ಕಾಲದಲ್ಲಿ ನಡೆಸಿದ ಬಹುತೇಕ ಕಾರ್ಯಕ್ರಮಗಳಲ್ಲೆಲ್ಲಾ ಐತಿಹಾಸಿಕವಾಗಿದ್ದವು. 1975ನೇ ವರ್ಷವನ್ನು ಯುನೆಸ್ಕೊ ಅಂತರರಾಷ್ಟ್ರೀಯ ಮಹಿಳಾ ವರ್ಷವೆಂದು ಘೋಷಿಸಿದಾಗ ಪರಿಷತ್ತಿನಲ್ಲಿ 200ಗೋಷ್ಠಿಗಳನ್ನು ನಡೆಸಿ, 25ಮಹಿಳಾ ಸಾಹಿತಿಗಳ ಪುಸ್ತಕಗಳನ್ನು ಪ್ರಕಟಿಸಿ, ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಸಿದ್ದರು”ಎಂದು ಹೇಳಿದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ ಮತ್ತು ಡಾ.ಪದ್ಮಿನಿ ನಾಗರಾಜು, ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಮ್‌. ಪಟೇಲ್‌ ಪಾಂಡು, ವಿಶೇಷ ಕರ್ತವ್ಯಾಧಿಕಾರಿ ಶ್ರೀ ಚಿಕ್ಕತಿಮ್ಮಯ್ಯ ಹಾಗೂ ಪರಿಷತ್ತಿನ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಪುಷ್ಪನಮನವನ್ನು ಸಲ್ಲಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿ ಬೈಲೂರಿನಲ್ಲಿ ತೆಂಕುತಿಟ್ಟು ಯಕ್ಷಗಾನ ಚಂಡೆ ಮದ್ದಳೆ ತರಬೇತಿ ತರಗತಿ 
    Next Article ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ‘ಶ್ರೀ ಕೃಷ್ಣ ಸಂಧಾನ’
    roovari

    Add Comment Cancel Reply


    Related Posts

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿಯವರಿಗೆ ಗೌರವ ಸಮರ್ಪಣೆ

    June 12, 2025

    ಕವನ | ಮುಂಗಾರು ಮಳೆ

    June 12, 2025

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.