Subscribe to Updates

    Get the latest creative news from FooBar about art, design and business.

    What's Hot

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025

    ಬ್ಯಾರಿ ಜಾನಪದ ಕಥೆಗಳ ಇಂಗ್ಲೀಷ್ ಅನುವಾದಿತ ಕೃತಿ ಬಿಡುಗಡೆ

    May 22, 2025

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆಯಲ್ಲಿ ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ 
    Yakshagana

    ತೆಕ್ಕಟ್ಟೆಯಲ್ಲಿ ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ 

    September 8, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಮೆ, ತೆಕ್ಕಟ್ಟೆಯಲ್ಲಿ ಯಶಸ್ವೀ ಕಲಾವೃಂದ (ರಿ.)ಕೊಮೆ ತೆಕ್ಕಟ್ಟೆ ಇವರು ಪ್ರಸ್ತುತ ಪಡಿಸುವ ‘ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ’ಯನ್ನು ದಿನಾಂಕ 02-09-2023ರಂದು ಪ್ರಸಿದ್ಧ ಯಕ್ಷಗಾನ ಕಲಾವಿದ ಕೋಟ ಸುರೇಶ ಬಂಗೇರ ದೀವಟಿಕೆಗೆ ತೈಲವನ್ನು ಎರೆಯುವುದರ ಮೂಲಕ ಉದ್ಘಾಟಿಸಿದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಕರ್ನಾಟಕದ ಕರಾವಳಿಯಲ್ಲಿ ಹುಟ್ಟಿದ ಯಕ್ಷಗಾನ ಕಲೆ ದೇಶ ವಿದೇಶಗಳಲ್ಲೂ ತನ್ನ ವೈಶಿಷ್ಯತೆಯಿಂದ ಮೆರೆದಿದೆ. ತುತ್ತು ಅನ್ನಕ್ಕೂ ಗತಿ ಇಲ್ಲದ ಎಳೆವೆಯಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ನನ್ನಂತೆ ಅನೇಕರು ಕಾಲಿಟ್ಟಿದ್ದಾರೆ ಮತ್ತು ಪ್ರಸಿದ್ಧಿಯನ್ನು ಹೊಂದಿದ್ದಾರೆ. ಬದುಕಿಗಾಗಿ ರಂಗದಲ್ಲಿಯೇ ಯಕ್ಷ ಶಿಕ್ಷಣ ಪಡೆದು ಅದರಿಂದ ಬಂದ ಮೊತ್ತ ತಮ್ಮ ಜೀವನಕ್ಕೆ ಆ ಕಾಲದಲ್ಲಿ ಸಾಕಾಗದೇ ಇದ್ದರೂ ಅಂದಿನ ಶ್ರಮ ಇಂದು ಪ್ರತಿಫಲ ನೀಡಿದೆ. ಯಾಕೆಂದರೆ ದೇಶದಾದ್ಯಂತ ನಾವು ಯಕ್ಷಗಾನ ಕಲೆಯಿಂದ ಗುರುತಿಸಿಕೊಂಡಿದ್ದೇವೆ. ಯಕ್ಷಗಾನ ಕಲೆ ಪ್ರಾಥಮಿಕ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಬೇಕೇ ಬೇಕು. ಜೀವನದಲ್ಲಿ ಪುರಾಣ ಕಥೆಗಳನ್ನು ಅರಿಯುವುದಕ್ಕಾಗಿ ಮತ್ತು  ಜೀವನ ಪಕ್ವತೆಯನ್ನು ಹೊಂದುವುದಕ್ಕೆ ಯಕ್ಷಗಾನ ಕಲೆ ಅಗತ್ಯ ಬೇಕು. ಕಲಿಕೆಗೆ ಪ್ರಾತಿನಿಧ್ಯ ಕೊಡುವ ಸಂಸ್ಥೆ ಯಶಸ್ವೀ ಕಲಾವೃಂದದಲ್ಲಿ ಸಮರ್ಥ ಗುರುಗಳಿದ್ದು ಕಲಿಕೆಗಾಗಿ ಶ್ರಮಿಸುವ ಕಾರ್ಯವನ್ನು ಸರ್ವರೂ ಶ್ಲಾಘಿಸಲೇಬೇಕು.”

    ಗೌರವ ಅಭ್ಯಾಗತರಾಗಿ ಆಗಮಿಸಿದ ಕೊಮೆ ಕೊರವಡಿ ವಿವಿದೋದ್ಧೇಶ ಸಹಕಾರಿ ಸಂಘದ ಕಾರ್ಯ ನಿರ್ವಹಣಾಧಿಕಾರಿ ಗೋಪಾಲ ಪೂಜಾರಿ ಮಾತನಾಡಿ “ಕೊಮೆ ಎಂಬ ಚಿಕ್ಕ ಹಳ್ಳಿಯಲ್ಲಿ ಹುಟ್ಟಿದ ಈ ಸಂಸ್ಥೆ ಹಲವಾರು ಸಾಂಸ್ಕೃತಿಕ ಚಟುವಟಿಕೆಗಳಿಂದ ದೇಶ ವಿದೇಶಗಳಲ್ಲಿ ಹೆಸರು ಮಾಡಿದೆ. ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸುವ ಮೂಲಕ ಶಾಲಾ ಮಕ್ಕಳು ಪ್ರೇರಣೆಗೊಳಗಾಗಿ ಈ ಕಲೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಆಗಲೇ ಇವರ ಶ್ರಮಕ್ಕೆ ಫಲ ದೊರಕಿದಂತಾಗುವುದು” ಎಂದರು.

    ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸರಿತಾ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜು ಪೂಜಾರಿ, ಯಶಸ್ವೀ ಕಲಾವೃಂದದ ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು. ಶಾಲ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸೌಪರ್ಣಿಕ ಗಣ್ಯರನ್ನು ಸ್ವಾಗತಿಸಿ, ಅಧ್ಯಾಪಕಿ ಸುನೀತಾ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಯಶಸ್ವೀ ಕಲಾವೃಂದದ ಚಿಣ್ಣರ ಬಳಗ “ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ” ರಂಗದಲ್ಲಿ ಪ್ರದರ್ಶಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನಿಂದ ಯುರೋಪ್ ಯಕ್ಷಗಾನ ಅಭಿಯಾನ | ಸೆಪ್ಟೆಂಬರ್ 9ರಿಂದ 17ರವರೆಗೆ
    Next Article ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಬಂಟರ ಸಂಘಗಳ ‘ಬಂಟ ಕಲಾ ಸಂಭ್ರಮ’
    roovari

    Add Comment Cancel Reply


    Related Posts

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.