Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ “ಗಾಯಗಳು” ನಾಟಕ ಪ್ರದರ್ಶನ | ಸೆಪ್ಟೆಂಬರ್ 23ರಂದು
    Drama

    ಉಡುಪಿಯಲ್ಲಿ “ಗಾಯಗಳು” ನಾಟಕ ಪ್ರದರ್ಶನ | ಸೆಪ್ಟೆಂಬರ್ 23ರಂದು

    September 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸಾಂಸ್ಕೃತಿಕ ಸಂಘಟನೆ ರಥಬೀದಿ ಗೆಳೆಯರು (ರಿ.) ಉಡುಪಿ ಮತ್ತು ತಾಲ್ಲೂರು ತೋರಣ ಯೋಜನೆಯ ಭಾಗವಾದ ‘ಕರಾವಳಿ ಕಟ್ಟು’ ಇವರ ಆಶ್ರಯದಲ್ಲಿ ‘ನಿರ್ದಿಂಗತ’ ರಂಗ ತಂಡದಿಂದ ಕಥೆ, ಕವನ, ಕಾದಂಬರಿ, ನಾಟಕ ಹಾಗೂ ರಂಗರೂಪಕ ‘ಗಾಯಗಳು’ ಇದರ ಪ್ರದರ್ಶನ ದಿನಾಂಕ 23-09-2023ರ ಶನಿವಾರ ಸಂಜೆ ಗಂಟೆ 6.30ಕ್ಕೆ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಡಾ. ಶ್ರೀಪಾದ್ ಭಟ್ ನಿರ್ದೇಶನದ ಈ ನಾಟಕಕ್ಕೆ ಶ್ವೇತಾ ರಾಣಿ ಸಹ ನಿರ್ದೇಶಕಿಯಾಗಿ ಸಹಕರಿಸಿದ್ದಾರೆ.

    ನಾಟಕದ ಕುರಿತು :
    ಇಡೀಯ ಜಗತ್ತು ಯುದ್ಧೋನ್ಮದದಲ್ಲಿ ನರಳುತ್ತಿದೆ. ರಾಜಕಾರಣಿಗಳ, ಧರ್ಮ ಗುರುಗಳ ಮಾರುಕಟ್ಟೆಯ ದಲ್ಲಾಳಿಗಳ ಕೈಗಳು ಲೇಡಿ ಮ್ಯಾಕ್ ಬೆತ್ ನ ಕೈಗಳಂತೆ ಎಷ್ಟು ತೊಳೆದರೂ ತೊಡೆಯಲಾಗದ ರಕ್ತದ ಕಲೆಗಳಿಂದ ತೊಯ್ದಿದೆ. ಪುರುಷಾಹಂಕಾರದ ಈ ಗಾಯಗಳು ಮೇದಿನಿ ಮತ್ತು ಮಾನಿನಿಯರ ಕರುಳು ಕತ್ತರಿಸುತ್ತಿವೆ. ಮನುಷ್ಯರನ್ನೇ ವಿಭಜಿಸುವ ಮನುಷ್ಯತ್ವವನ್ನೇ ಅಣಕಿಸುವ ವರ್ಣಭೇದವಂತೂ ಇನ್ನೂ ಕ್ರೂರ. ಇವು ನಮಗೆ ನಾವೇ ಮಾಡಿಕೊಂಡ ಗಾಯಗಳು. ಇವುಗಳಿಗೆ ಮುಖಾಮುಖಿಯಾಗದೆ ನಮಗೆ ಬಿಡುಗಡೆ ಇಲ್ಲ. ಈ ನೆಲದ ತುಂಬಾ ಅಂಥ ಅಸಂಖ್ಯಾತ ಗಾಯಗಳ ಕಥೆಗಳಿವೆ. ಅವುಗಳಿಂದ ಯುದ್ಧ ಹಾಗೂ ಕೋಮು ಹಿಂಸೆಯ ಕಥನಗಳಲ್ಲಿ ಕೆಲವನ್ನು ಆಯ್ದು ಇಲ್ಲಿ ರಂಗಚಿತ್ರವಾಗಿಸುತ್ತಿದ್ದೇವೆ ಮತ್ತು ಈ ರಂಗಚಿತ್ರ  ಸಹಜವಾಗಿಯೇ ಮಹಿಳೆಯರ ನೋವಿನ ಸೊಲ್ಲುಗಳಾಗಿ ಪರಿಣಮಿಸಿವೆ. ಇದರಲ್ಲಿ ನಮ್ಮಿಂದ ಎಣಿಸಲಾಗದಷ್ಟು ಗಾಯದ ಕಥೆಗಳಿವೆ, ಎಣಿಸಲಾಗದ ಅಸಂಖ್ಯ ಕಥೆಗಳ ಬಗೆಗೂ ಸಹಾನುಭೂತಿ ಸಂತಾಪಗಳಿವೆ. ರಂಗಭೂಮಿಯಲ್ಲಿ ಆಸಕ್ತಿಯಿಂದ ತೊಡಗಿಕೊಳ್ಳಲೆತ್ನಿಸುತ್ತಿರುವ ರಂಗ ವಿದ್ಯಾರ್ಥಿಗಳ ಕಲಿಕಾ ಪಠ್ಯವಾಗಿಯೂ ಇದನ್ನು ಪ್ರಯೋಗಿಸಲಾಗುತ್ತಿದೆ. ಇಲ್ಲಿ ಕಥೆಗಳಿವೆ, ಕವನಗಳಿವೆ ನಾಟಕದ ಭಾಗಗಳಿವೆ, ಕಾದಂಬರಿಯ ಪುಟಗಳಿವೆ.

    ಸಮಕಾಲಿನ ಸಂದರ್ಭದಲ್ಲಿ ಈ ನಾಟಕ ಅತ್ಯಂತ ಮಹತ್ವ ಪಡೆದು ಕೊಳ್ಳುತ್ತದೆ. ಈ ನಾಟಕಕ್ಕೆ ತಮಗೆಲ್ಲಾ ರಥಬೀದಿ ಗೆಳೆಯರ ಆತ್ಮೀಯ ಆಮಂತ್ರಣವಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರು ಚಿತ್ಪಾವನ ಮಹಿಳಾ ಯಕ್ಷಗಾನ ಮಂಡಳಿಯಿಂದ ‘ಕೃಷ್ಣ ಲೀಲೆ – ಕಂಸ ವಧೆ’ | ಒಕ್ಟೋಬರ್ 02ರಂದು
    Next Article ಮಂಗಳೂರು ವಿ.ವಿ.ಯಲ್ಲಿ ‘ಗುರು ಜಯಂತಿ’ ಮತ್ತು ‘ನಾರಾಯಣಗುರು ಸಂಶೋಧನಾ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ನಟನ ರಂಗಶಾಲೆಯಿಂದ ‘ರಂಗಭೂಮಿ ಡಿಪ್ಲೋಮಾ’ಗೆ ಆಹ್ವಾನ | ಮೇ 25

    May 20, 2025

    ಲೇಖಕ, ಪ್ರಕಾಶನ, ರಂಗಕರ್ಮಿ ಡಾ. ರಮಾಕಾಂತ ಜೋಶಿ ನಿಧನ

    May 20, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಮಕ್ಕಳ ರಂಗ ಹಬ್ಬ’ | ಮೇ 20  

    May 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.