Subscribe to Updates

    Get the latest creative news from FooBar about art, design and business.

    What's Hot

    ಪುರಭವನದಲ್ಲಿ ಕಮಲಾಂಜಲಿ 2025 ಕೀರ್ತಿ ಶೇಷ ಕಮಲ ಭಟ್ ಸಂಸ್ಕರಣೆ – ಅಭಿನಂದನಾ ಕಾರ್ಯಕ್ರಮ.

    August 18, 2025

    ಭರತಾಂಜಲಿಯ ತ್ರಿಂಶತ್ ಪ್ರಯುಕ್ತ ‘ನೃತ್ಯ ರತ್ನ ಶೋಧ’ ಭರತನಾಟ್ಯ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 31

    August 18, 2025

    ಮೈಸೂರಿನಲ್ಲಿ ಉದ್ಘಾಟನೆಗೊಂಡ ‘ನಿರಂತರ ಸಹಜ ರಂಗ – 2025’ ಶಿಬಿರ

    August 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಖಿಲ ಭಾರತ ಕೊಂಕಣಿ ರಜತ ಸಮ್ಮೇಳನದ ಲಾಂಛನ ಬಿಡುಗಡೆ
    Literature

    ಅಖಿಲ ಭಾರತ ಕೊಂಕಣಿ ರಜತ ಸಮ್ಮೇಳನದ ಲಾಂಛನ ಬಿಡುಗಡೆ

    October 6, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಕ್ತಿನಗರ : 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭವು ವಿಶ್ವ ಕೊಂಕಣಿ ಕೇಂದ್ರದಲ್ಲಿ ದಿನಾಂಕ 04-10-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಂಕಣಿ ಕವಿ ಟೈಟಸ್ ನೊರೊನ್ಹಾ ಇವರು ಮಾತನಾಡುತ್ತಾ “ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬಗಳಾಗಿವೆ. 1939ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶ್ರುತಿ ಅಖಿಲ ಭಾರತ ಕೊಂಕಣಿ ಪರಿಷತ್‌ ಈವರೆಗೆ ದೇಶದ ವಿವಿಧ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕೊಂಕಣಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗಿದೆ. ದಿನಾಂಕ 04-11-2023 ಮತ್ತು 05-11-2023ರಂದು ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ ಸುಮಾರು 800 ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ವಿನಾಯತಿ ನೀಡಲಾಗಿದೆ. ಪ್ರತಿನಿಧಿಗಳಿಗೆ ವಸತಿ, ಊಟದ ವ್ಯವಸ್ಥೆ ಮಾಡಲಾಗಿದ್ದು, ಆನ್ ಲೈನ್ ಮೂಲಕ ನೋಂದಣಿ ಆರಂಭಿಸಲಾಗಿದೆ ಎಂದು ಹೇಳಿದರು.

    ಸಂತ ಅಲೋಶಿಯಸ್ ಕಾಲೇಜಿನ ಕೊಂಕಣಿ ಸಂಸ್ಥೆಯ ಸಂಚಾಲಕ ಖ್ಯಾತ ಕಲಾವಿದ ಪಿಂಟೊ ವಾಮಂಜೂರ್ ಅವರು ಸಮ್ಮೇಳನದ ಲಾಂಛನವನ್ನು ತಯಾರಿಸಿದ್ದಾರೆ. 1974ರಲ್ಲಿ ಕರ್ನಾಟಕದಲ್ಲಿ, ಕೊಂಕಣಿ ಭಾಷಾ ಮಂಡಳದ ಸ್ಥಾಪನೆಗಾಗಿ ಶ್ರಮಿಸಿದ ಹಿರಿಯ ಪತ್ರಕರ್ತ ಮತ್ತು ವಿಮಲಾ ವಿ. ಪೈ ಜೀವನ ಸಿದ್ಧಿ ಪ್ರಶಸ್ತಿ ಪುರಸ್ಕೃತ ಫಾ. ಮಾರ್ಕ್ ವಾಲ್ಡ‌ರ್ ಸಮ್ಮೇಳನದ ಲಾಂಛನ ಅನಾವರಣಗೊಳಿಸಿದರೆ, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಮಾಹಿತಿ ಪುಸ್ತಕ ಲೋಕಾರ್ಪಣೆ ಮಾಡಿದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ಗೋಕುಲದಾಸ ಪ್ರಭು ನೋಂದಣಿ ಪುಸ್ತಕ ಬಿಡುಗಡೆ ಮಾಡಿದರು.

    ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷರಾದ ಆಲ್ವಿನ್ ಡಿ’ಸೋಜಾ ಪಾನೀರ್ ಕ್ಯೂ ಆರ್ ಕೋಡ್ ಮೂಲಕ ಆನ್ ಲೈನ್ ನೋಂದಣಿಗೆ ವಿದ್ಯುಕ್ತ ಚಾಲನೆ ನೀಡಿದರು. ಅಖಿಲ ಭಾರತ ಕೊಂಕಣಿ ಪರಿಷತ್‌ ಅಧ್ಯಕ್ಷ ಅರುಣ್ ಉಭಯ್‌ಕ‌ರ್ ಮೊದಲಾದವರು ಉಪಸ್ಥಿತರಿದ್ದರು. ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಎಚ್.ಎಂ. ಪೆರ್ನಾಲ್ ಸ್ವಾಗತಿಸಿ ಸಾಹಿತ್ಯ ಅಕಾಡೆಮಿ ಹೊಸದಿಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ, ಕೊಂಕಣಿ ಭಾಷಾ ಮುಖ್ಯಸ್ಥ ಮೆಲ್ವಿನ್ ರೊಡ್ರಿಗಸ್ ನಿರೂಪಿಸಿ, ವಿಶ್ವಕೊಂಕಣಿ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ತ ಬಂಟ್ವಾಳ್‌ಕರ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ’ಕ್ಕೆ ಪುಸ್ತಕಗಳ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 1
    Next Article ಮೈಸೂರಿನ ನಟನದಲ್ಲಿ ‘ಗಂಗಾವತರಣ’ | ಅಕ್ಟೋಬರ್ 8ಕ್ಕೆ
    roovari

    Add Comment Cancel Reply


    Related Posts

    ವಿವೇಕಾನಂದ ಕಾಲೇಜಿನಲ್ಲಿ ವಿವೇಕ ಸ್ಮೃತಿ 19ನೇ ಅವತರಣಿಕೆ

    August 18, 2025

    ಸಂಸ್ಕಾರ ಭಾರತೀ ವತಿಯಿಂದ ‘ನಟರಾಜ ಪೂಜನ್’ | ಆಗಸ್ಟ್ 19

    August 18, 2025

    ಕಲಾಂಗಣ್ ನಲ್ಲಿ ‘ಕೊಂಕಣಿ ಮಾನ್ಯತಾ ದಿನಾಚರಣೆ -2025’ | ಆಗಸ್ಟ್ 20

    August 18, 2025

    Book review | ‘IRU’ -the Remarkable Life of Irawathi Karve

    August 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.