Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಕ್ಷಯ ಆ‌ರ್. ಶೆಟ್ಟಿಯವರ ‘ಪೆರ್ಗ’ ತುಳು ನಾಟಕ ಕೃತಿ ಮತ್ತು ‘ಹಿಡಿ ಅಕ್ಕಿಯ ಧ್ಯಾನ’ ಕನ್ನಡ ಕವನ ಸಂಕಲನ ಲೋಕಾರ್ಪಣೆ
    Book Release

    ಅಕ್ಷಯ ಆ‌ರ್. ಶೆಟ್ಟಿಯವರ ‘ಪೆರ್ಗ’ ತುಳು ನಾಟಕ ಕೃತಿ ಮತ್ತು ‘ಹಿಡಿ ಅಕ್ಕಿಯ ಧ್ಯಾನ’ ಕನ್ನಡ ಕವನ ಸಂಕಲನ ಲೋಕಾರ್ಪಣೆ

    October 21, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಅಕ್ಷಯ ಆ‌ರ್. ಶೆಟ್ಟಿಯವರ ‘ಪೆರ್ಗ’ ತುಳು ನಾಟಕ ಕೃತಿ ನಗರದ ಪ್ರೆಸ್‌ ಕ್ಲಬ್‌ನಲ್ಲಿ ದಿನಾಂಕ 12-10-2023ರಂದು ಅನಾವರಣಗೊಂಡಿತು.

    ಕೃತಿ ಬಿಡುಗಡೆಗೊಳಿಸಿದ ಹಾವೇರಿ ಜಾನಪದ ವಿವಿಯ ವಿಶ್ರಾಂತ ಉಪ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ, “ತುಳು ಸಾಹಿತ್ಯ ಕ್ಷೇತ್ರದಲ್ಲಿ ಕವನ ಸಂಕಲನ, ಕಥಾ ಸಂಕಲನ, ಕಾದಂಬರಿಗಳಿಗಿಂತಲೂ ತುಳು ನಾಟಕ ಕೃತಿಗಳು ಅಧಿಕ ಸಂಖ್ಯೆಯಲ್ಲಿ ಪ್ರಕಟಗೊಳ್ಳುವ ಮೂಲಕ ಅಪಾರ ಕೊಡುಗೆಯನ್ನು ನೀಡಿವೆ. ತುಳುವಿನಲ್ಲಿ 5000ಕ್ಕೂ ಅಧಿಕ ನಾಟಕಗಳು ರಚನೆಯಾಗಿದ್ದು, ಸುಮಾರು 1000ದಷ್ಟು ನಾಟಕ ಕೃತಿಗಳು ಪ್ರಕಟಗೊಂಡಿವೆ. 400ರಷ್ಟು ಕವನ ಸಂಕಲನ, 200ರಷ್ಟು ಕಥಾ ಸಂಕಲನ ಹಾಗೂ 75 ಕಾದಂಬರಿಗಳು ತುಳುವಿನಲ್ಲಿ ಪ್ರಕಟವಾಗಿವೆ. ನವ ಸಾಹಿತಿ, ಲೇಖಕರು ತುಳು ಸಂಸ್ಕೃತಿಯನ್ನು ಹೊಸ ರೀತಿಯ ಶೋಧನೆಯ ಮೂಲಕ ವರ್ತಮಾನದಲ್ಲಿ ಇತಿಹಾಸವನ್ನು ನಾಟಕ, ಕದಾಂಬರಿಗಳ ಮೂಲಕ ಕಟ್ಟಿಕೊಡುವ ಕಾರ್ಯವನ್ನು ನಡೆಸುತ್ತಿರುವುದು ಕಂಡು ಬರುತ್ತಿದೆ. ರತ್ನವರ್ಮ ಹೆಗ್ಗಡೆ ಹಾಗೂ ಎಸ್.ವಿ. ಪಣಿಯಾಡಿ ಅವರಿಂದ ತುಳು ನಾಟಕ ಕೃತಿಗಳಿಗೆ ಮನ್ನಣೆ ಸಿಗುತ್ತಿರುವ ಕಾರಣ ತುಳು ಸಂಸ್ಕೃತಿಯ ಅನಾವರಣಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದ ಅವರು, ‘ಪೆರ್ಗ’ ನಾಟಕ ಕೃತಿಯ ಮೂಲಕ ಲೇಖಕಿ ಪ್ರಕೃತಿ ಮತ್ತು ತುಳುನಾಡಿನ ಆರಾಧನೆಯ ಮಹತ್ವವನ್ನು ಸಾರುವ ಕಾರ್ಯ ಮಾಡಿದ್ದಾರೆ. ವಿವೇಕದಿಂದ ಕಟ್ಟಿ ಬೆಳೆಸಿದ್ದನ್ನು ವಿವೇಕದಿಂದ ಉಳಿಸುವ ಸಾರ ಈ ಕೃತಿಯಲ್ಲಿದೆ” ಎಂದು ಹೇಳಿದರು.

    ‘ಹಿಡಿ ಅಕ್ಕಿಯ ಧ್ಯಾನ’ ಕನ್ನಡ ಕವನ ಸಂಕಲನವನ್ನು ಬಿಡುಗಡೆಗೊಳಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಪ್ರತಿಕ್ರಿಯಿಸಿ, “ಸೃಜನಶೀಲ ಸಾಹಿತ್ಯವು ತನ್ನದೇ ಆದ ಭಾವವನ್ನು ಕಟ್ಟಿಕೊಡುವ ಧ್ಯಾನದ ಸಾಹಿತ್ಯವಾಗುವುದು ಬಹು ಮುಖ್ಯ. ನಮ್ಮಲ್ಲಿ ಕವಿತೆಗಳಿಗೆ ಕೊರತೆ ಇಲ್ಲ. ಆದರೆ ಧ್ಯಾನದಲ್ಲಿ ಅರಳುವ ಕವಿತೆಗಳು ವಿರಳವಾಗುತ್ತಿರುವ ಸಂದರ್ಭದಲ್ಲಿ ಅಕ್ಷಯ ಅವರ ಕವನಗಳು ಗಮನ ಸೆಳೆಯುತ್ತವೆ” ಎಂದರು.

    ಅಕ್ಷಯ ಆರ್. ಶೆಟ್ಟಿ ಅವರು ಸ್ನಾತಕೋತ್ತರ ವಿದ್ಯಾಭ್ಯಾಸದ ವೇಳೆ ‘ನನ್ನ ಹಾದಿ’ ಕವನ ಸಂಕಲನದ ಮೂಲಕ ಸಾಹಿತ್ಯ ರಚನೆ ಆರಂಭಿಸಿದ್ದರು. ಅವರ 2ನೇ ಕವನ ಸಂಕಲಕ್ಕೆ ಮುಂಬೈಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಏರ್ಪಡಿಸಲಾಗಿದ್ದ ಸುಶೀಲಮ್ಮ ದತ್ತಿ ಪ್ರಶಸ್ತಿ ದೊರಕಿದೆ. ಕಳೆದ ವರ್ಷ ‘ದೆಂಗ’ ತುಳು ಕಾದಂಬರಿ ಉಡುಪಿ, ತುಳುಕೂಟ ಏರ್ಪಡಿಸಿದ್ದ ಎಸ್.ಯು. ಪಣಿಯಾಡಿ ಪ್ರಶಸ್ತಿ ಪಡೆದಿದೆ. ಕಾರ್ಯಕ್ರಮದಲ್ಲಿ ಆಕೃತಿ ಆಶಯ ಪಬ್ಲಿಕೇಶನ್‌ನ ಕಲ್ಲೂರು ನಾಗೇಶ್ ಉಪಸ್ಥಿತರಿದ್ದರು. ಕೃತಿಕಾರರಾದ ಅಕ್ಷಯ್‌ ಆರ್. ಶೆಟ್ಟಿ ಸ್ವಾಗತಿಸಿ, ನರೇಶ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.

    ಪುಸ್ತಕದ ಪ್ರತಿಗಳು ನವ ಕರ್ನಾಟಕ ಪ್ರಕಾಶನ, ಸ್ಕೂಲ್ ಬುಕ್ ಕಂಪೆನಿ ಹಾಗೂ ಮಂಗಳೂರಿನ ಸಾಹಿತ್ಯ ಕೇಂದ್ರದಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಲೇಖಕಿ ಅಕ್ಷಯಾ.ಆರ್. ಶೆಟ್ಟಿ – 7760308562 ಇವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಚೈತನ್ಯ ಅಶ್ವತ್ಥಪುರ ಇದರ ವತಿಯಿಂದ ಡಾ. ಎಂ. ಪ್ರಭಾಕರ ಜೋಶಿಯವರಿಗೆ ಸನ್ಮಾನ
    Next Article ಗೋವಿಂದದಾಸ ಕಾಲೇಜಿನಲ್ಲಿ “ಕಾರಂತರ ಪುಸ್ತಕ ಪ್ರಪಂಚ” ಪುಸ್ತಕ ಪ್ರದರ್ಶನ
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.