Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಮೃಚ್ಛಕಟಿಕ’ | ಆಗಸ್ಟ್ 01

    July 28, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ‘ಬನ್ನಂಜೆ ಉಡುಪಿ ನಮನ’ | ಆಗಸ್ಟ್ 03

    July 28, 2025

    ಮಂಗಳೂರಿನ ಉರ್ವಸ್ಟೋರ್ ತುಳು ಭವನದಲ್ಲಿ ಚಿತ್ರಕಲಾ ಸ್ಪರ್ಧೆ | ಆಗಸ್ಟ್ 03

    July 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿಟ್ಲದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ‘ಗಡಿನಾಡ ಕವಿ ಭಾವ ಸಂಗಮ’
    Literature

    ವಿಟ್ಲದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ‘ಗಡಿನಾಡ ಕವಿ ಭಾವ ಸಂಗಮ’

    October 29, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾ೦ಬ ಆಂಜನೇಯ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ‘ಗಡಿನಾಡ ಕವಿ ಭಾವಸಂಗಮ’ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 22-10-2023 ರಂದು ನಡೆಯಿತು.
    ಕವಿಗೋಷ್ಠಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ “ಸಮಾಜದ ಒಳಿತು ಕೆಡುಕುಗಳ ಮೇಲೆ ಸಾಹಿತ್ಯ ಅಗಾಧ ಪರಿಣಾಮ ಬೀರುತ್ತದೆ. ಉತ್ತಮ ಸಾಹಿತ್ಯ ಸಾರ್ವಕಾಲಿಕವಾಗಿ ಜನಮಾನಸದಲ್ಲಿ ಉಳಿಯುತ್ತದೆ. ವಿದ್ಯಾರ್ಥಿಗಳು ಸಾಹಿತ್ಯದತ್ತ ಚಿತ್ತ ಹರಿಸಬೇಬೇಕು” ಎಂದು ತಿಳಿಸಿದರು.
    ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ ಯುವಕವಿ ಹಾಗೂ ಉಪನ್ಯಾಸಕರಾದ ಬಾಲಕೃಷ್ಣ ಬೇರಿಕೆ ಮಾತನಾಡಿ “ನಿರಂತರ ಪರಿಶ್ರಮ, ಆಸಕ್ತಿ, ಅಧ್ಯಯನ, ಮಹಾನ್ ಕವಿಗಳ ಸಾಹಿತ್ಯ ಮಂಥನ ಭವಿಷ್ಯದ ಸಾಹಿತಿಗಳಿಗೆ ಪ್ರೇರಕವಾಗಿದೆ. ಶ್ರದ್ಧಾ ಕೇಂದ್ರಗಳಲ್ಲಿ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಕ್ಕಾಗ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಸಾಧ್ಯವಿದೆ” ಎಂದರು. ನಾರಾಯಣ ನಾಯ್ಕ ಕುದುಕ್ಕೊಳಿ, ವಿಷ್ಣುಗುಪ್ತ ಪುಣಚ, ವನಜಾಕ್ಷಿ ಚಂಬ್ರಕಾನ, ಸುಶ್ಮಿತಾ ಕುಕ್ಕಾಜೆ, ದೀಕ್ಷಿತ್ ಮಾಣಿಲ, ಅನುರಾಧ ಪಳನೀರು, ನವ್ಯಶ್ರೀ ಕಾಮಜಾಲು ಕವನ ವಾಚಿಸಿದರು. ಹಿರಿಯ ಸಾಹಿತಿ ಸುಂದರ ಬಾರಡ್ಕ ಉಪಸ್ಥಿತರಿದ್ದರು.
    ಯುವ ಸಾಹಿತಿ ಉದಯ ಭಾಸ್ಕರ್ ಸುಳ್ಯ ಹಾಗೂ ಕವಯತ್ರಿ ಸುಜಾತ ಮಾಣಿಮೂಲೆ ಕವನಗಳ ವಿಮರ್ಶೆ ನಡೆಸಿದರು. ಮಾಣಿಲ ಗ್ರಾಮ ಪ೦ಚಾಯತ್ ಅಧ್ಯಕ್ಷ ಶ್ರೀಧರ ಬಾಳೆಕಲ್ಲು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು.
    ದೇವಿಪ್ರಸಾದ್ ಕುಕ್ಕಾಜೆ ಸ್ವಾಗತಿಸಿ, ಸಾಹಿತಿ ಜಯ ಮಣಿಂಯಪಾರೆ ಕಾರ್ಯಕ್ರಮ ನಿರೂಪಿಸಿ, ರವಿ ಎಸ್.ಎಂ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದಿಂದ ‘ಸಂಸ್ಕೃತಿ ಚಿಂತನ’ ಕಾರ್ಯಕ್ರಮ
    Next Article ‘ಮಕ್ಕಳ ಕಲಾ ಲೋಕ’ದಿಂದ ಮಕ್ಕಳ ಸಾಹಿತ್ಯ ಸಮ್ಮೇಳನ | ಡಿಸೆಂಬರ್ 6ರಂದು
    roovari

    Add Comment Cancel Reply


    Related Posts

    ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ‘ಬನ್ನಂಜೆ ಉಡುಪಿ ನಮನ’ | ಆಗಸ್ಟ್ 03

    July 28, 2025

    ಸಿರಿಬಾಗಿಲು ಪ್ರತಿಷ್ಠಾನದಲ್ಲಿ ತೆಂಕುತಿಟ್ಟು ಯಕ್ಷಗಾನ ಹಿಮ್ಮೇಳ ಕಲಾವಿದರ ಶಿಬಿರ

    July 28, 2025

    ಶ್ರೀ ಕ್ಷೇತ್ರದಲ್ಲಿ ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

    July 28, 2025

    ‘ಪತ್ತುಮುಡಿ’ ಸಭಾಭವನದಲ್ಲಿ ತುಳುಕೂಟದಿಂದ ಪುಸ್ತಕ ಬಿಡುಗಡೆ ಮತ್ತು ಸನ್ಮಾನ

    July 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.