Subscribe to Updates

    Get the latest creative news from FooBar about art, design and business.

    What's Hot

    ಅಮೃತ ಸೋಮೇಶ್ವರರ ನಾಟಕಗಳ ಅನುವಾದ ಕೃತಿ ಬಿಡುಗಡೆ | ಜನವರಿ 14

    January 12, 2026

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    January 12, 2026

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ‘ಕಥಾ ಕಮ್ಮಟ’ 
    Literature

    ಉಡುಪಿಯಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ‘ಕಥಾ ಕಮ್ಮಟ’ 

    November 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಎಂ.ಜಿ.ಎಂ. ಕಾಲೇಜು, ಕನ್ನಡ ಸಾಹಿತ್ಯ ಸಂಘ, ಐಕ್ಯೂಎಸಿ ಮತ್ತು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ‘ಕಥಾ ಕಮ್ಮಟ’ ಕಾರ್ಯಕ್ರಮವು ದಿನಾಂಕ 16-11-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಪ್ರೊ. ಮುರಳೀಧರ ಉಪಾಧ್ಯ ಮಾತನಾಡಿ “ಕನ್ನಡದಲ್ಲಿ ಹಲವು ಲೇಖಕರು ಅತ್ಯುತ್ತಮ ಕಥೆಗಳನ್ನು ಬರೆದು ನಾಡಿನ ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಗೊಳಿಸಿ, ಕನ್ನಡಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಮಾಸ್ತಿ, ಶಿವರಾಮ ಕಾರಂತರು, ಲಂಕೇಶ್, ಅನಂತಮೂರ್ತಿ, ವೈದೇಹಿ ಇಂಥವರ ಕಥೆಗಳನ್ನು ವಿದ್ಯಾರ್ಥಿಗಳು ಓದಬೇಕು. ಇಂತಹ ಕಮ್ಮಟಗಳ ಮೂಲಕ ವಿದ್ಯಾರ್ಥಿಗಳು ಮುಂದೆ ಒಳ್ಳೆಯ ಕಥೆಗಾರರು ಆಗಲು ಸಾಧ್ಯ” ಎಂದು ಹೇಳಿದರು.

    ವೇದಿಕೆಯಲ್ಲಿ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ  ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, ಎಂ.ಜಿ.ಎಂ. ಕಾಲೇಜು ಐಕ್ಯೂಎಸಿ ಮುಖ್ಯಸ್ಥೆ ಪ್ರೊ. ಶೈಲಜ, ಕಸಾಪ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಭಂಡಾರಿ ಉಪಸ್ಥಿತರಿದ್ದರು.

    ಎಂ.ಜಿ.ಎಂ. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಪುತ್ತಿ ವಸಂತ್ ಕುಮಾರ್ ಸ್ವಾಗತಿಸಿ, ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ನಿರೂಪಿಸಿದರು. ಕಸಾಪ ತಾಲೂಕು ಘಟಕಾಧ್ಯಕ್ಷ ರವಿರಾಜ್ ಎಚ್.ಪಿ. ಪ್ರಾಸ್ತಾವಿಕಾಗಿ ಮಾತನಾಡಿ, ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಶ್ರೀ ಶಂಕರಶ್ರೀ ಸಭಾಭವನದಲ್ಲಿ “ಧನ್ವಂತರಿ ಭಾಗ-2” ಪುಸ್ತಕ ಲೋಕಾರ್ಪಣೆ
    Next Article ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಸಾಂಸ್ಕೃತಿಕ ಉತ್ಸವ ‘ಸೆಲೆಸ್ತಿಯಾ-2023’
    roovari

    Add Comment Cancel Reply


    Related Posts

    ಅಮೃತ ಸೋಮೇಶ್ವರರ ನಾಟಕಗಳ ಅನುವಾದ ಕೃತಿ ಬಿಡುಗಡೆ | ಜನವರಿ 14

    January 12, 2026

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.