Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಂಸ್ಕಾರ ಭಾರತೀ ವತಿಯಿಂದ ‘ದೀಪಾವಳಿ ಕುಟುಂಬ ಮಿಲನ’ | ನವೆಂಬರ್ 25
    Cultural

    ಸಂಸ್ಕಾರ ಭಾರತೀ ವತಿಯಿಂದ ‘ದೀಪಾವಳಿ ಕುಟುಂಬ ಮಿಲನ’ | ನವೆಂಬರ್ 25

    November 24, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಲಲಿತ ಕಲೆಗಳ ಸಂವರ್ಧನೆಗಾಗಿ ಸಮರ್ಪಿತವಾದ ಅಖಿಲ ಭಾರತಿಯ ಸಂಘಟನೆಯಾದ ಸಂಸ್ಕಾರ ಭಾರತೀ ವತಿಯಿಂದ ‘ದೀಪಾವಳಿ ಕುಟುಂಬ ಮಿಲನ’ ಕಾರ್ಯಕ್ರಮವು ದಿನಾಂಕ 25-11-2023 ಶನಿವಾರದಂದು ಸಂಜೆ ಗಂಟೆ 4ಕ್ಕೆ ಶರವು ದೇವಸ್ಥಾನದ ಬಳಿಯಿರುವ ಬಾಳಂಭಟ್ ಹಾಲ್ ಇಲ್ಲಿ ನಡೆಯಲಿದೆ.

    ಸಂಜೆ ಗಂಟೆ 4ರಿಂದ ಸರಯೂ ಯಕ್ಷ ಬಳಗ, ಕೋಡಿಕಲ್ ಇವರಿಂದ ವರ್ಕಾಡಿ ರವಿ ಅಲೆವೂರಾಯ ಇವರ ನಿರ್ದೇಶನದಲ್ಲಿ ‘ಮಹರ್ಷಿ ವಾಲ್ಮೀಕಿ’ ಯಕ್ಷಗಾನ ಬಯಲಾಟ ಮತ್ತು ಶ್ರೀ ಬಾಲಕೃಷ್ಣ ಕತ್ತಲ್ಸಾರ್ ಮತ್ತು ಬಳಗದವರಿಂದ ‘ತುಳುನಾಡ ಬಲೀಂದ್ರ ಲೆಪ್ಪುದ ಪೊರ್ಲು’ ಪ್ರದರ್ಶನ ನಡೆಯಲಿದೆ.

    ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಇದರ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಕೆ. ಭಂಡಾರಿ ಅಡ್ಯಾರ್ ಇವರು ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಆರ್.ಕೆ. ಟ್ರಾವೆಲ್ಸ್ ಇದರ ಮಾಲಕರಾದ ಅಡ್ಯಾರ್ ಮಾಧವ ನಾಯ್ಕ್ ಭಾಗವಹಿಸಲಿರುವರು. ಬಾಳಂಭಟ್ ಮನೆತನದ ವೇದ ಸಂಸ್ಕೃತ ವಿದ್ವಾಂಸರಾದ ವಿದ್ವಾನ್ ಡಾ. ಸತ್ಯ ಕೃಷ್ಣ ಭಟ್ ಇವರು ಮುಖ್ಯ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ‘ಸಂಸ್ಕಾರ ಭಾರತೀ ಕಲಾ ಪುರಸ್ಕಾರ’ ಶ್ರೀ ತೋನ್ಸೆ ಪುಷ್ಕಳ ಕುಮಾರ್ (ಸಂಗೀತ), ಕರ್ನಾಟಕ ಕಲಾಶ್ರೀ ವಿದ್ವಾನ್ ಚಂದ್ರ ಶೇಖರ ನಾವಡ (ನೃತ್ಯ), ಶ್ರೀ ಶರತ್ ಕುಮಾರ್ ಕದ್ರಿ (ಯಕ್ಷಗಾನ), ಶ್ರೀ ಬಿ.ಕೆ. ಗಂಗಾಧರ್ ಕಿರೋಡಿಯನ್ (ನಾಟಕ) ಮತ್ತು ಶ್ರೀ ಬಾಲಕೃಷ್ಣ ಕತ್ತಲ್ಸಾರ್ (ಲೋಕಕಲಾ) ಇವರುಗಳಿಗೆ ಪ್ರದಾನ ಮಾಡಲಾಗುವುದು.

    ಸಂಸ್ಕಾರ ಭಾರತೀ ಇದರ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ತಮಗೆಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೇಷ್ಠ ಕಲಾವಿದ ವಿಠ್ಠಲ ರಾಮಮೂರ್ತಿಯವರಿಗೆ ಅಮೆರಿಕದ ಗೌರವ – ನವೆಂಬರ್ 5ಕ್ಕೆ ‘ವಿಠ್ಠಲ ರಾಮಮೂರ್ತಿ ದಿನ’
    Next Article ಮೈಸೂರಿನ ನಟನ ರಂಗಶಾಲೆಯಲ್ಲಿ ‘ಕಂಡಾಯದ ಕೋಳಿ’ | ನವಂಬರ್ 26
    roovari

    Add Comment Cancel Reply


    Related Posts

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಸಮಾರೋಪಗೊಂಡ ಪುತ್ರಕಾಮೇಷ್ಠಿ ತಾಳಮದ್ದಲೆ ಸಪ್ತಾಹ

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.