Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನೇಶನಲ್ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ
    Literature

    ನೇಶನಲ್ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

    November 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಹಕ್ಲಾಡಿಯ ಸರಕಾರಿ ಪ್ರೌಢಶಾಲೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ವಿಸ್ತರಣಾ ಉಪನ್ಯಾಸ ಮಾಲಿಕೆಯ 5ನೇ ಉಪನ್ಯಾಸ ಕಾರ್ಯಕ್ರಮವು ಬಾರ್ಕೂರಿನ ನೇಶನಲ್ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 16-11-2023ರಂದು ನಡೆಯಿತು.
    ಕಾರ್ಯಕ್ರಮದಲ್ಲಿ ‘ಕನಕದಾಸರ ಕೃತಿಗಳಲ್ಲಿ ಭಕ್ತಿಭಾವದ ಪರಿಕಲ್ಪನೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಪೂರ್ಣಪ್ರಜ್ಞ ಸಂಧ್ಯಾಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಪ್ರಜ್ಞಾಮಾರ್ಪಳ್ಳಿ ಮಾತನಾಡಿ “ಕನಕದಾಸರು ಸಾರಸ್ವತ ಲೋಕ ಕಂಡ ಅಪೂರ್ವ ಕವಿ, ಚಿಂತಕ, ದಾರ್ಶನಿಕ ಎಲ್ಲವೂ. ಅವರು ದಾಸಪರಂಪರೆಯಲ್ಲಿ ಭಿನ್ನಸ್ಥಾನವನ್ನು ಪಡೆಯಲು ಪ್ರಮುಖ ಕಾರಣ ಅವರು ಕೇವಲ ಕೀರ್ತನಕಾರರಾಗಿರದೆ ನಾಲ್ಕು ಅಮೂಲ್ಯ ಕೃತಿಗಳನ್ನು ನೀಡಿರುವುದು. ಕಾವ್ಯಪ್ರಭೇದಗಳ ಅರಿವು ಕನಕದಾಸರಿಗಿತ್ತು. ಭಕ್ತಿಯ ಪರಾಕಾಷ್ಠೆಯೇ ಕನಕದಾಸರ ಕೀರ್ತನೆಗಳ ಹೆಗ್ಗುರುತೆನ್ನಬಹುದು. ‘ಮೋಹನ ತರಂಗಿಣಿ’ ಕನಕದಾಸರ ವಿಭಿನ್ನ ಕೃತಿ. ಅದು ವಿಜಯನಗರದ ಸಮಕಾಲೀನ ಚಿಂತನೆಗಳನ್ನು ತನ್ನೊಳಗೆ ಸೇರಿಸಿಕೊಂಡಿದೆ. ಭಾವಾಭಿವ್ಯಕ್ತಿಯ ದೃಷ್ಟಿಯಿಂದ ನೋಡಿದಾಗ ಕನಕದಾಸರಿಗೆ ವಿಜಯನಗರದ ವೈಭವದ ಬಗೆಗಿದ್ದ ಅಭಿಮಾನ ಮತ್ತು ಗೌರವದ ವಿವರಣೆಯು ವರ್ಣನಾತೀತವೆನಿಸುತ್ತದೆ. ಭಾಮಿನಿ ಷಟ್ಪದಿಯಲ್ಲಿರುವ ‘ಹರಿಭಕ್ತಿಸಾರ’ ನಮಗೆ ಹಿತವೆನಿಸುವುದು ಅದರೊಳಗೆ ಅಡಗಿರುವ ಭಕ್ತನ ಶರಣಾಗತಿಯ ಕಾರಣದಿಂದ, ‘ರಾಮಧಾನ್ಯಚರಿತೆ’ಯಲ್ಲಿ ಕನಕದಾಸರ ಸಾಮಾಜಿಕ ಪ್ರಜ್ಞೆ ಅವರ ನಿಜವಾದ ನಿಲುವುಗಳು, ಅವರ ಬದುಕು ಮತ್ತು ಸಮಾಜದ ಸಂಬಂಧ ಹೇಗಿತ್ತು ಎಂಬುದರ ಪೂರ್ಣ ವಿವರವಿದೆ. ಕನಕದಾಸರ ಕೀರ್ತನೆಗಳನ್ನು ಗಮನಿಸಿದಾಗ ಕನಕದಾಸರ ನಿಜವಾದ ಹರಿಭಕ್ತಿ ಅನಾವರಣಗೊಳ್ಳುತ್ತದೆ. ಕನಕದಾಸರು ಬದುಕಿದಂತೆ ಬರೆದವರು, ಬರೆದಂತೆ ಬದುಕಿದವರು. ಅವರ ಕೃತಿಗಳಲ್ಲಿ ಬರುವ ಭಾವವು ನಮ್ಮನ್ನು ಭಕ್ತಿ ಸಾಗರದೊಳಗೆ ಮುಳುಗೇಳುವಂತೆ ಮಾಡಬಲ್ಲುದು” ಎಂದರು.
    ನೇಶನಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೊಟ್ರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕನಕದಾಸ ಅಧ್ಯಯನ ಸಂಶೋಧನಾ ಪೀಠದ ಆಡಳಿತಾಧಿಕಾರಿ ಡಾ. ಜಗದೀಶ್ ಬಿ. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತಾಡಿದರು. ಬಾರಕೂರು ವಿದ್ಯಾಧಿವರ್ಧಿನಿ ಸಂಘದ ಆಡಳಿತಾಧಿಕಾರಿ ಪ್ರೊ. ಆರ್ಟಿಬೋಲ್ಡ್ ಪುರ್ಟಾಡೋ ಉಪಸ್ಥಿತರಿದ್ದರು. ಶ್ರೀ ಮಾರುತಿ ಕೆ.ಪಿ. ಕನಕದಾಸರ ಕುರಿತು ರಚಿಸಿದ ಕವನವನ್ನು ವಾಚಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಜ್ಯೋತಿ ಕಾರ್ಯಕ್ರಮ ನಿರ್ವಹಿಸಿ, ಸಹ ಶಿಕ್ಷಕಿ ಶ್ರೀಮತಿ ಹೇಮಾವತಿ ಪಿ.ಎಸ್. ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಣಿ ಕೃಷ್ಣಸ್ವಾಮಿ ಅಕಾಡಮಿಯಿಂದ ಪೇಜಾವರ ಶ್ರೀ ವಿಜಯಾನಂದ ರಾವ್ ಇವರಿಗೆ ಶ್ರದ್ಧಾಂಜಲಿ | ದಶಂಬರ 1
    Next Article ನಾಟ್ಯ ವಿಮರ್ಶೆ | ಲಿಖಿತಳ ಚೈತನ್ಯಪೂರ್ಣ ಹೆಜ್ಜೆ-ಗೆಜ್ಜೆಯ ಸುಮ್ಮಾನ
    roovari

    Add Comment Cancel Reply


    Related Posts

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025

    ‘ನುಡಿ ತೋರಣ’ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಬೆಂಗಳೂರು ಇದರ ತ್ರೈವಾರ್ಷಿಕ ಸಾಹಿತ್ಯ ಸಮಾವೇಶ -2025 | ಜೂನ್ 29

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.