Subscribe to Updates

    Get the latest creative news from FooBar about art, design and business.

    What's Hot

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ತುಮಕೂರಿನ ಶ್ರೀ ಕೃಷ್ಣ ಮಂದಿರದಲ್ಲಿ ‘ಸುವರ್ಣ ಪರ್ವ -10’ | ಜೂನ್ 07

    June 3, 2025

    ಮಂಗಳೂರು ರೋಟರಿಯಲ್ಲಿ ಕಾಸರಗೋಡು ಚಿನ್ನಾರ ನಗೆಯ ಸಂಜೆ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ‘ಹರಿಕಥಾ ಸ್ಪರ್ಧೆ’ | ಡಿಸೆಂಬರ್ 31
    Competition

    ಮಂಗಳೂರಿನ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ‘ಹರಿಕಥಾ ಸ್ಪರ್ಧೆ’ | ಡಿಸೆಂಬರ್ 31

    December 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಹರಿಕಥಾ ಪರಿಷತ್ (ರಿ.) ಮಂಗಳೂರು ಇದರ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಎಂಟನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ ‘ಹರಿಕಥಾ ಸ್ಪರ್ಧೆ’ಯು ದಿನಾಂಕ 31-12-2023ರಂದು ಕದ್ರಿ ಮಲ್ಲಿಕಟ್ಟೆಯ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ಅಪರಾಹ್ನ ಗಂಟೆ 1.30ಕ್ಕೆ ಉದ್ಘಾಟನೆಗೊಳ್ಳಲಿದೆ.

    ಹರಿಕಥಾ ಪರಿಷತ್ (ರಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ. ಮಹಾಬಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ವಿಜಯ ಬ್ಯಾಂಕಿನ ನಿವೃತ್ತ ಸೀನಿಯರ್ ಮ್ಯಾನೇಜರ್ ಲಯನ್ ಶ್ರೀ ಸುಂದರ ಶೆಟ್ಟಿ ಬೆಟ್ಟಂಪಾಡಿಯವರು ಉದ್ಘಾಟಿಸಲಿದ್ದಾರೆ.

    ಅಪರಾಹ್ನ ಗಂಟೆ 2ರಿಂದ ಈ ಸ್ಪರ್ಧೆಯಲ್ಲಿ ಉದಯೋನ್ಮುಖ ಕಥಾ ಕೀರ್ತನ ಪ್ರತಿಭೆಗಳಾದ ಕಾಟುಕುಕ್ಕೆಯ ಕು. ಅಭಿಜ್ಞಾ ಭಟ್, ಬಂದ್ಯೋಡಿನ ಮಾ. ಸಾತ್ವಿಕ್ ಕೃಷ್ಣ ತುಂಗ, ಉಪ್ಪಳದ ಕು. ಪೂಜಾ ವಾಸುದೇವ ಐತಾಳ, ಪುತ್ತೂರಿನ ಕು. ದೇವಿಕಾ ಕೆ., ಮಂಗಳೂರಿನ ಕು. ಶ್ರದ್ಧಾ ಗುರುದಾಸ್, ಕಾರ್ಕಳದ ಕು. ಅನನ್ಯಾ ಘಾಟಕ್, ಪುತ್ತೂರಿನ ಕು. ಆಪ್ತ ಚಂದ್ರಮತಿ ಮುಳಿಯ ಮತ್ತು ನೀರ್ಚಾಲು ಕು. ಭಾವನಾ ನಾಯಕ್ ಇವರುಗಳು ಭಾಗವಹಿಸಲಿರುವರು. ಸಂಜೆ ಗಂಟೆ 6.30ರಿಂದ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleರಾಮಕೃಷ್ಣ ಮಠದಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಡಿಸೆಂಬರ್ 30
    Next Article ಸನಾತನ ಸಂಗೀತ ನೃತ್ಯೋತ್ಸವದಲ್ಲಿ ‘ಮಂಜುನಾದ’ ಮತ್ತು ‘ಭರತನಾಟ್ಯ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ಖಿದ್ಮಾ ಫೌಂಡೇಶನ್ ಇದರ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ

    June 2, 2025

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.