Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ಸಂತಾಪ ಸಭೆ
    Literature

    ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ಸಂತಾಪ ಸಭೆ

    January 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ದಿನಾಂಕ 06-01-2024 ರಂದು ನಿಧನರಾದ ತುಳುನಾಡ ಹಿರಿಯ ಸಾಹಿತಿ, ವಿದ್ವಾಂಸ ಡಾ. ಅಮೃತ ಸೋಮೇಶ್ವರರ ನಿಧನದ ಬಗ್ಗೆ ಸಂತಾಪ ಸಭೆ ದಿನಾಂಕ 08-01-2024ರಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ನಡೆಯಿತು.

    ಸಭೆಯಲ್ಲಿ ಅಮೃತ ಸೋಮೇಶ್ವರ ಅವರ ವಿದ್ಯಾರ್ಥಿಯಾದ ಡಾ. ಪಾದೇಕಲ್ಲು ವಿಷ್ಣು ಭಟ್ಟ ಮಾತನಾಡಿ “ತುಳುನಾಡ ಹಿರಿಯ ಸಾಹಿತಿ, ವಿದ್ವಾಂಸ ಡಾ. ಅಮೃತ ಸೋಮೇಶ್ವರ ಅವರ ನಿಧನ ಸಾಹಿತ್ಯ ಲೋಕಕ್ಕೆ ಅಪಾರ ನಷ್ಟ ಉಂಟುಮಾಡಿದೆ. ಸೋಮೇಶ್ವರ ಅವರು ಕಾದಂಬರಿಕಾರರಾಗಿ, ಅನುವಾದಕರಾಗಿ, ಕಥಾಸಂಕಲನ, ಕವನ ಸಂಕಲನ, ರೇಡಿಯೋ ರೂಪಕ, ಧ್ವನಿಸುರುಳಿಗೆ ಸಾಹಿತ್ಯ, ನಾಟಕ, ಯಕ್ಷಗಾನ ಪ್ರಸಂಗಗಳು, ಯಕ್ಷಗಾನ ಕೃತಿಗಳು, ಗಾದೆಗಳು, ಶಬ್ದಕೋಶ, ವಚನ ಸಾಹಿತ್ಯ, ಪಾಡ್ದನ ಸಂಗ್ರಹ ಹೀಗೆ ಹತ್ತು ಹಲವು ನೆಲೆಗಳಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಿದವರು. ಅವರು ಕೈಯಾಡಿಸದ ಕ್ಷೇತ್ರವೇ ಇಲ್ಲವೆಂದು ಹೇಳಬಹುದಾದಷ್ಟು ವಿಶಾಲವಾದ ಕಾರ್ಯಕ್ಷೇತ್ರ ಅವರದ್ದಾಗಿತ್ತು.” ಎಂದರು.

    ಪ್ರೊ. ಮುರಳೀಧರ ಉಪಾಧ್ಯಾಯರು ಮಾತನಾಡಿ ಸೋಮೇಶ್ವರ ಅವರು ಪ್ರಾಧ್ಯಾಪಕರಾಗಿದ್ದಾಗ ಹೇಗೆ ವಿದ್ಯಾರ್ಥಿಗಳನ್ನು ಹುರಿದುಂಬಿಸುತ್ತಿದ್ದರು ಮತ್ತು ಅವರ ಪುಸ್ತಕಗಳಲ್ಲಿ ಬರೆಯಲ್ಪಟ್ಟ ಹಾಗೂ ಸಂದರ್ಶನಗಳಲ್ಲಿ ಉಲ್ಲೇಖಗೊಂಡಿರುವ ಕೆಲವು ಘಟನೆಗಳನ್ನು ಪ್ರಸ್ತಾಪಿಸುವುದರ ಮೂಲಕ ಅವರ ಆತ್ಮಕ್ಕೆ ಸದ್ಗತಿಯನ್ನು ಕೋರಿದರು.

    ಡಾ. ಸುಬ್ಬಣ್ಣಯ್ಯ ಕೋಟಿಗದ್ದೆ ಅವರು ಅಮೃತರ ವಿದ್ಯಾರ್ಥಿಯಾಗಿ ಜೀವನದ ತಮ್ಮ ಅನುಭವಗಳನ್ನು ಹಂಚಿಕೊಂಡರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ “ಬೃಹತ್ ಕೋಶ ತುಳುನಿಘಂಟು ರಚನಾ ಸಮಿತಿಯ ಸದಸ್ಯರೂ ಆಗಿದ್ದ ಅವರಿಗೆ ಕೇಂದ್ರದ ಮೂಲಕ ಕೊಡಮಾಡುವ ರಾಷ್ಟ್ರಕವಿ ಗೋವಿಂದಪೈ ಪ್ರಶಸ್ತಿಯೂ ಲಭಿಸಿದೆ. ಇವರ ಅಗಲುವಿಕೆ ತುಂಬಾ ನೋವನ್ನುಂಟುಮಾಡಿದೆ” ಎಂದರು. ವೇದಿಕೆಯಲ್ಲಿ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀ ನಾರಾಯಣ ಕಾರಂತ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಉಪಸ್ಥಿತರಿದ್ದರು. ಸಭೆಯಲ್ಲಿ ಶ್ರೀ ಫಣಿರಾಜ್, ಶ್ರೀ ಗಂಗಾಧರ ಕಿದಿಯೂರು, ಶ್ರೀ ನಾಗೇಶ್ ಉದ್ಯಾವರ ಮುಂತಾದವರು ಹಾಜರಿದ್ದರು.

     

    Share. Facebook Twitter Pinterest LinkedIn Tumblr WhatsApp Email
    Previous Articleಕೋಟ ಸುರೇಶ್ ಅವರಿಗೆ ‘ಶ್ರೀನಿವಾಸ ಉಡುಪ’ ಪ್ರಶಸ್ತಿ
    Next Article ಮಂಗಳೂರಿನಲ್ಲಿ ನೀನಾಸಂ ತಿರುಗಾಟ ನಾಟಕೋತ್ಸವ | ಜನವರಿ 12 ಮತ್ತು 13
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.