Subscribe to Updates

    Get the latest creative news from FooBar about art, design and business.

    What's Hot

    ಕವಿ ಮಿತ್ರರು ಸಂಪದ ಸಾಲು ಪತ್ರಿಕೆ ವತಿಯಿಂದ ‘ಕವಿ ಗೋಷ್ಠಿ’ ಕಾರ್ಯಕ್ರಮ | ಜನವರಿ 18

    January 15, 2026

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ‘ಕಥಾಬಿಂದು ಪ್ರಕಾಶನ’

    January 15, 2026

    ಬೆಂಗಳೂರಿನಲ್ಲಿ ಕರ್ನಾಟಕ ಗಜಲ್ ಅಕಾಡೆಮಿಯಿಂದ ‘ಕನ್ನಡ ಗಜಲ್ ಕಮ್ಮಟ’ | ಜನವರಿ 18  

    January 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನಲ್ಲಿ ಷಷ್ಠಿ ಮಹೋತ್ಸವದ ಪ್ರಯುಕ್ತ ‘ಸಾಹಿತ್ಯ ಗಾನ ನೃತ್ಯ ವೈಭವ’ ಕಾರ್ಯಕ್ರಮ
    Bharathanatya

    ಕಾಸರಗೋಡಿನಲ್ಲಿ ಷಷ್ಠಿ ಮಹೋತ್ಸವದ ಪ್ರಯುಕ್ತ ‘ಸಾಹಿತ್ಯ ಗಾನ ನೃತ್ಯ ವೈಭವ’ ಕಾರ್ಯಕ್ರಮ

    January 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಾಸರಗೋಡು ಜಿಲ್ಲೆಯ ಪುರಾಣ ಪ್ರಸಿದ್ಧ ದೇವಸ್ಥಾನವಾದ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ಸನ್ನಿಧಿಯಲ್ಲಿ ದಿನಾಂಕ 18-12-2023ರ ಸೋಮವಾರದಂದು ಷಷ್ಠಿ ಮಹೋತ್ಸವವು ಅತ್ಯಂತ ಭಕ್ತಿ ಶ್ರದ್ಧೆಯಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಹಸ್ರಾರು ಭಗವದ್ಭಕ್ತರು ಭಾಗವಹಿಸಿ ಶ್ರೀ ದೇವರ ಸೇವೆಗೈದು ಅನ್ನ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು. ಈ ಮಹೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10.00 ಘಂಟೆಯಿಂದ ಮಧ್ಯಾಹ್ನ 12.00 ಘಂಟೆಯ ತನಕ ದೇವಸ್ಥಾನದ ಮಯೂರ ಮಂಟಪದಲ್ಲಿ ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಸಂಸ್ಥೆಯ ವತಿಯಿಂದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮವು ದೇವಸ್ಥಾನದ ಆಡಳಿತ ವರ್ಗದವರಾದ ಶ್ರೀ ಶ್ರೀಧರ ಮಾಸ್ಟರ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸುವುದರ ಮೂಲಕ ಆರಂಭಗೊಂಡು ಬಹಳ ವಿಜೃಂಭಣೆಯಿಂದ ನಡೆದು ನೆರೆದಿರುವ ಸಾವಿರಾರು ಪ್ರೇಕ್ಷಕರ ಮನ ಸೂರೆಗೊಂಡಿತು.

    ಡಾ. ವಾಣಿಶ್ರೀ ಕಾಸರಗೋಡು ಅವರು ಸಾಹಿತ್ಯ ಪ್ರಸ್ತುತಿ ಸಹಿತ ಕಾರ್ಯಕ್ರಮದ ಸಮಗ್ರ ನಿರೂಪಣೆ ಮಾಡಿದರು. ಸಂಸ್ಥೆಯ ಅಪ್ರತಿಮ ಕಲಾವಿದರಾದ ಗುರುರಾಜ್ ಕಾಸರಗೋಡು, ಜ್ಞಾನ ರೈ ಪುತ್ತೂರು, ವರ್ಷಾ ಶೆಟ್ಟಿ, ಆಜ್ಞಾ ರೈ ಪುತ್ತೂರು, ಸನುಷಾ ಸುಧಾಕರನ್, ನವ್ಯಶ್ರೀ ಕುಲಾಲ್, ದಿಯಾ ಸುಕೇಶ್ ಗಟ್ಟಿ, ಉಷಾ ಸುಧಾಕರನ್, ಮಧುಲತಾ ಮನೋಜ್, ಶ್ರೀರಕ್ಷಾ ಸರ್ಪಂಗಳ, ಆರಾಧ್ಯ ಎಸ್. ಭಟ್, ಹರೀಶ್ ಪಂಜಿಕಲ್ಲು ಮುಂತಾದವರು ವೈವಿದ್ಯಮಯ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಕೊನೆಗೆ ಸಂಸ್ಥೆಯ ವತಿಯಿಂದ ಪುತ್ತೂರಿನ ಖ್ಯಾತ ಉದ್ಯಮಿ ಶ್ರೀ ಜಯರಾಮ್ ರೈ ಕುರಿಯ ಹಾಗೂ ಶ್ರೀ ಶ್ರೀಧರ್ ಮಾಸ್ಟರ್ ಉಪಸ್ಥಿತಿಯಲ್ಲಿ ಭಾಗವಹಿಸಿದ ಎಲ್ಲಾ ಕಲಾವಿದರಿಗೆ ಗೌರವ ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು. ದೇವಸ್ಥಾನದ ವತಿಯಿಂದ ಕಾರ್ಯಕ್ರಮ ನಡೆಸಿಕೊಟ್ಟ ಸಂಸ್ಥೆಯ ಅಧ್ಯಕ್ಷರು ಡಾ. ವಾಣಿಶ್ರೀ ಕಾಸರಗೋಡು ಹಾಗೂ ಗುರುರಾಜ್ ಕಾಸರಗೋಡು ಅವರನ್ನು ಶ್ರೀ ದೇವರ ಪ್ರಸಾದ ನೀಡಿ ಹರಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಸಂಪನ್ಮೂಲ ವ್ಯಕ್ತಿ ಡಾ. ಸುರೇಶ ನೆಗಳಗುಳಿಯರಿಂದ ವಿದ್ಯಾರ್ಥಿಗಳಿಗಾಗಿ ‘ವಿಶೇಷ ಪ್ರೇರಣಾ ಕಾರ್ಯಾಗಾರ’
    Next Article ರಘು ಇಡ್ಕಿದುರವರ ‘ಎಲ್ಲವೂ ಬದಲಾಗುತ್ತದೆ’ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಮಂಗಳೂರಿನ ರಾಮಕೃಷ್ಣ ಮಠದ ಅಮೃತ ಭವನದಲ್ಲಿ ‘ಆರಾಧನೋತ್ಸವ 2026’ | ಜನವರಿ 17 ಮತ್ತು 18

    January 15, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026

    ಪುತ್ತೂರಿನಲ್ಲಿ ‘ಕುಮಾರವ್ಯಾಸ ಜಯಂತಿ’ ಆಚರಣೆಯ ಪ್ರಯುಕ್ತ ಗಮಕ ವಾಚನ- ವ್ಯಾಖ್ಯಾನ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.