Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಡೆಂಗೋಡ್ಲು ಪ್ರಶಸ್ತಿಗೆ ಕವನಸಂಕಲನಗಳ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 15
    Awards

    ಕಡೆಂಗೋಡ್ಲು ಪ್ರಶಸ್ತಿಗೆ ಕವನಸಂಕಲನಗಳ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 15

    January 12, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ನಾಡಿನ ಹಿರಿಯ ಕವಿ ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತವಾದ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿಗೆ ಕವನ ಸಂಕಲನಗಳನ್ನು ಕಳುಹಿಸಲು ಕೊನೆಯ ದಿನಾಂಕ 15-03-2024. ಕಳುಹಿಸಬೇಕಾದ ವಿಳಾಸ – ಆಡಳಿತಾಧಿಕಾರಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂ.ಜಿ.ಎಂ. ಕಾಲೇಜು ಆವರಣ, ಉಡುಪಿ 576102.

    ಕಾವ್ಯ ಪ್ರಕಟಣೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ 10,000/- ರೂಪಾಯಿಗಳ ಒಂದು ವಾರ್ಷಿಕ ಬಹುಮಾನವನ್ನು ನೀಡಲಾಗುತ್ತದೆ. ಹಸ್ತಪ್ರತಿ ಹಂತದಲ್ಲಿರುವ 40ಕ್ಕೆ ಕಡಿಮೆ ಇಲ್ಲದ, 50ಕ್ಕಿಂತ ಹೆಚ್ಚಿಲ್ಲದ ಕನ್ನಡ ಕವಿತೆಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ಕೊಡಲಾಗುವುದು. ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನು ಆಯ್ಕೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ ಬ್ಲಾಗ್ https://govindapairesearch.blogspot.com ಅಥವಾ ದೂರವಾಣಿ ಸಂಖ್ಯೆ – 9448868868, 9480575783. ಕಛೇರಿ: 0820 -2521159 ಸಂಪರ್ಕಿಸಬಹುದು.

    ಬಹುಮಾನದ ಉಳಿದ ನಿಯಮಗಳು ಹೀಗಿವೆ:-
    1. ಕಳೆದ ಐದು ವರ್ಷಗಳಲ್ಲಿ ಬರೆದ ಕನ್ನಡ ಕವಿತೆಗಳು, ಬಿಡಿಯಾಗಿ ಪತ್ರಿಕೆಗಳಲ್ಲಿ ಪೂರ್ವ ಪ್ರಕಟಿತವಾದುವು ಇರಬಹುದು, ಹೊಸದಾಗಿ ರಚಿತವಾದುವೂ ಇರಬಹುದು.
    2. ತಮ್ಮ ಕವನ ಸಂಕಲನದಲ್ಲಿ ಕನಿಷ್ಠ 40 ಕವನಗಳು ಇರಲೇಬೇಕು.
    3. ಕವನ ಸಂಕಲನದ ಹೆಸರನ್ನು ಹೊರಭಾಗದಲ್ಲಿ ಸ್ಪಷ್ಟವಾಗಿ ನಮೂದಿಸಿರಬೇಕು.
    4. ತಮ್ಮ ಕವನಗಳು ಯಾವುದೇ ಕವನಸಂಕಲನದಲ್ಲಿ ಈ ಮೊದಲು ಪ್ರಕಟಗೊಂಡಿರಬಾರದು.
    5. ಸ್ಪರ್ಧೆಯಲ್ಲಿ ಭಾಗವಹಿಸುವವರ ಹೆಸರು ಮತ್ತು ವಿಳಾಸಗಳು ಪ್ರತ್ಯೇಕ ಹಾಳೆಯಲ್ಲಿರಬೇಕು ಹೊರತು ಕವನ ಸಂಕಲನದ ಯಾವ ಭಾಗದಲ್ಲೂ ಇರಕೂಡದು (ಇದ್ದಲ್ಲಿ ಕವನ ಸಂಕಲನವನ್ನು ತಿರಸ್ಕರಿಸಲಾಗುವುದು).
    6. ಕವನ ಸಂಕಲನವನ್ನು ಮರಳಿ ಪಡೆಯಲಿಚ್ಛಿಸುವವರು ಸಾಕಷ್ಟು ಅಂಚೆ ಚೀಟಿಯನ್ನು ಅಂಟಿಸಿದ ಲಕೋಟೆಯನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು.
    7. ಲೇಖಕರು ತಮ್ಮ ಕವನಗಳ ಸಂಗ್ರಹದ ಒಂದು ನಕಲು ಪ್ರತಿಯನ್ನು (ಬೆರಳಚ್ಚು ಮಾಡಿದ) 2024 ಮಾರ್ಚ್ 15ರ ಒಳಗೆ ಸಮಿತಿಯ ವಿಳಾಸಕ್ಕೆ ಕಳುಹಿಸತಕ್ಕದ್ದು. ಮೇ ತಿಂಗಳಲ್ಲಿ ಸಮಿತಿಯು ತನ್ನ ನಿರ್ಣಯವನ್ನು ಕರ್ನಾಟಕದ ಪತ್ರಿಕೆಗಳಲ್ಲಿ ಜಾಹೀರುಗೊಳಿಸುತ್ತದೆ.
    8. ಬಹುಮಾನಕ್ಕಾಗಿ ಆಯ್ಕೆಯಾದ ಕವನ ಸಂಕಲನವವನ್ನು–ಡೆಮ್ಮಿ 1/8, 1/12 ಅಥವಾ 1/8 ಆಕಾರದಲ್ಲಿ ಮುದ್ರಿಸಬೇಕು.
    9. ಆಯ್ಕೆ ಸಮಿತಿ ತೀರ್ಮಾನ ಪ್ರಕಟವಾದ ಎರಡು ತಿಂಗಳ ಒಳಗಾಗಿ ಮುದ್ರಣ ಮುಗಿದು 12 ಪ್ರತಿಗಳು ಸಮಿತಿಯ ವಶ ಸೇರತಕ್ಕದ್ದು. (ಅದಕ್ಕಿಂತ ವೇಳೆ ಮೀರಿದರೆ ಸಮಿತಿ ಇನ್ನಾರಿಗಾದರೂ ಈ ಬಹುಮಾನ ನೀಡಬಹುದು).
    10. ಸಂಗ್ರಹದ ಮುದ್ರಣ ಪ್ರಕಟಣೆ ಲೇಖಕರೇ ಮಾಡಬೇಕೆಂದೇನೂ ಇಲ್ಲ. ಆದರೆ ಬೇರೆ ಪ್ರಕಾಶಕರು ಮಾಡಿದರೆ ಬಹುಮಾನದ ಮೊತ್ತ ಲೇಖಕರಿಗೆ ಮಾತ್ರವೇ ಸಲ್ಲುತ್ತದೆ.
    11. ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನ.

    Share. Facebook Twitter Pinterest LinkedIn Tumblr WhatsApp Email
    Previous Article‘ಬಿ.ಜಿ.ಎಂ. ಜೀವಮಾನ ಸಾಧನಾ ಪ್ರಶಸ್ತಿ’ ಪ್ರದಾನ ಹಾಗೂ ಚಿತ್ರಕಲಾ ಸ್ಪರ್ಧೆ | ಜನವರಿ 14ರಂದು
    Next Article ಡಾ. ಎಚ್. ವಿಶ್ವನಾಥ್ ಮತ್ತು ಇಂದಿರಾ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.