Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಜನಪ್ರಿಯ ರಂಗಭೂಮಿ ನಟ ಯಶವಂತ ಸರದೇಶಪಾಂಡೆ

    June 13, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

    June 13, 2025

    ಲೋಕಾರ್ಪಣೆಗೊಂಡ ‘ಬ್ಯಾರಿ ಬಾಸೆ ಪಡಿಕೋರು’ ಕೃತಿ

    June 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರೊ. ಬಿ.ಎ. ವಿವೇಕ ರೈ ಅವರೊಡನೆ ‘ಸರಳ ವಿರಳ ಸಲ್ಲಾಪ’
    Literature

    ಪ್ರೊ. ಬಿ.ಎ. ವಿವೇಕ ರೈ ಅವರೊಡನೆ ‘ಸರಳ ವಿರಳ ಸಲ್ಲಾಪ’

    January 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಾಸರಗೋಡಿನ ಸಾಂಸ್ಕೃತಿಕ ಸಂಸ್ಥೆಯಾದ ‘ರಂಗ ಚಿನ್ನಾರಿ’ಯು ಮಂಗಳೂರಿನ ‘ರಂಗಸಂಗಾತಿ’ ಸಹಕಾರದಲ್ಲಿ ಆಯೋಜಿಸಿದ ಪ್ರೊ. ಬಿ.ಎ. ವಿವೇಕ ರೈ ಅವರೊಡನೆ ‘ಸರಳ ವಿರಳ ಸಲ್ಲಾಪ’ ಕಾರ್ಯಕ್ರಮವು ದಿನಾಂಕ 13-01-2024ರ ಶನಿವಾರದ ಸಂಜೆ ನಡೆಯಿತು.
    ಪ್ರೊ. ವಿವೇಕ ರೈಯವರ ಮನೆ ‘ಸುಯಿಲ್’ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರೈಯವರಿಗೆ ತೀರಾ ಆಪ್ತರಾದ ಸುಮಾರು 25 ಸಮಾನ ಮನಸ್ಕರೊಡನೆ ಎರಡು ಗಂಟೆಗಳ ಕಾಲ ನಡೆದ ಅನೌಪಚಾರಿಕ ಮಾತು ಸಂವಾದ ಇದಾಗಿತ್ತು.

    ಆರಂಭದಲ್ಲಿ ಕಾಸರಗೋಡು ಚಿನ್ನಾ ಕಾರ್ಯಕ್ರಮ ಆಯೋಜಿಸಲು ಕಾರಣ ಹಾಗೂ ಅದರ ರೂಪುರೇಷೆಗಳನ್ನು ತಿಳಿಸಿದರು. ಡಾ. ನಾ.ದಾ.ಶೆಟ್ಟಿ ಬಂದ ಎಲ್ಲರನ್ನೂ ಸಭೆಗೆ ಪರಿಚಯಿಸಿದರು. ವಿವೇಕ ರೈಯವರು ಬೇರೆ ಬೇರೆ ಕಾಲಘಟ್ಟದಲ್ಲಿ ಬರೆದ ನಾಲ್ಕು ಕವನಗಳನ್ನು ಡಾ. ಧನಂಜಯ ಕುಂಬ್ಳೆ, ಡಾ. ಮೀನಾಕ್ಷಿ ರಾಮಚಂದ್ರ, ಡಾ. ಅಕ್ಷಯ ಶೆಟ್ಟಿ ಹಾಗೂ ಡಾ. ನಾ.ದಾ. ಶೆಟ್ಟಿ ವಾಚನ ಮಾಡಿದರು. ಪ್ರತಿಯೊಂದು ಕವನ ರಚನೆಯ ಸಂದರ್ಭದ ವಿಶೇಷತೆಗಳನ್ನು ಪ್ರೊಫೆಸರ್ ವಿವೇಕ ರೈ ವಿವರಿಸಿದರು.

    ಪ್ರೊಫೆಸರ್ ಅವರ ಬಗ್ಗೆ ಡಾ. ನರಸಿಂಹ ಮೂರ್ತಿ.ಆರ್, ಡಾ. ಲಕ್ಷ್ಮೀನಾರಾಯಣ ಭಟ್ಟ, ಡಾ. ಸುಬ್ಬಣ್ಣ ರೈ ಹಾಗೂ ವಿವೇಕ ರೈಯವರ ಕಿರಿಯ ಸಹೋದರ ಉಲ್ಲಾಸ ರೈ ಮಾತನಾಡಿದರು. ಇಡೀ ಕಾರ್ಯಕ್ರಮವನ್ನು ಅತಿ ಗಂಭೀರತೆಯಿಂದ ಪಾರುಮಾಡಿ ಅತ್ಯಂತ ಸ್ವಾರಸ್ಯಕರವಾಗಿಸಿದ ಚಿನ್ನಾ ಕಾಸರಗೋಡು ತಮ್ಮ ವಿದ್ಯಾರ್ಥಿ ದೆಸೆಯ ದಿನಗಳು, ನಂತರ ಹಿರಿಯ ವಿದ್ವಾಂಸರು ಹಾಗೂ ಕಲಾವಿದರೊಡನೆ ಒಡನಾಡಿದ ಘಟನೆಗಳನ್ನು ಹಂಚಿಕೊಂಡರು. ಎಲ್ಲಾ ಸದಸ್ಯರು ಸಂವಾದದಲ್ಲಿ ಪಾಲ್ಗೊಂಡರು. ರಂಗ ಸಂಗಾತಿಯ ಶಶಿರಾಜ್ ರಾವ್ ಕಾವೂರು ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಗಿನ ಕವಿ ಸಾಹಿತಿಗಳ ಪರಿಚಯ ಮಾಲಿಕೆ – ಚೆಟ್ಟೋಳಿರ ಶರತ್ ಸೋಮಣ್ಣ
    Next Article ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದಿಂದ ‘ಅಮೃತ ನಮನ’
    roovari

    Add Comment Cancel Reply


    Related Posts

    ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ವಿವೇಕ ವಾಣಿ -46 ಕಾರ್ಯಕ್ರಮ

    June 13, 2025

    ಲಕ್ಷ್ಮೀನಾರಾಯಣ ಕಾರಂತರಿಗೆ ತುಳುಕೂಟದ ವತಿಯಿಂದ ಅಭಿನಂದನೆ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    ‘ಯಶೋ ಮಾಧ್ಯಮ-2025’ ಪ್ರಶಸ್ತಿಗೆ ಕಿರಣ್ ಮಂಜನಬೈಲು ಆಯ್ಕೆ

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.