Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರ್ಗಾನದ ಕುಂದೇಶ್ವರ ಕ್ಷೇತ್ರದಲ್ಲಿ ರಕ್ಷಿತ್‌ ಪಡ್ರೆಗೆ ‘ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ’
    Awards

    ಹಿರ್ಗಾನದ ಕುಂದೇಶ್ವರ ಕ್ಷೇತ್ರದಲ್ಲಿ ರಕ್ಷಿತ್‌ ಪಡ್ರೆಗೆ ‘ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ’

    January 27, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ: ಕಾರ್ಕಳ ಹಿರ್ಗಾನದ ಕುಂದೇಶ್ವರ ಕ್ಷೇತ್ರ ವಾರ್ಷಿಕ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್‌ ಪಡ್ರೆಗೆ ‘ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ’ಯನ್ನು ದಿನಾಂಕ 22-01-2024ರ ಸೋಮವಾರದಂದು ಪ್ರದಾನ ಮಾಡಲಾಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ವಿ. ಸುನಿಲ್‌ ಕುಮಾರ್‌ ಮಾತನಾಡಿ “ಧಾರ್ಮಿಕ ಕಾರ್ಯಕ್ರಮಗಳ ಜೊತೆಯಲ್ಲಿ ನಾಟಕ ಮತ್ತು ಯಕ್ಷಗಾನದ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಕುಂದೇಶ್ವರದಿಂದ ಕಲೆಗೆ ಪ್ರೋತ್ಸಾಹ ನೀಡುವ ಕೆಲಸ ಆಗುತ್ತಿದೆ.” ಎಂದರು.

    ಯಕ್ಷಗಾನ ಕಲಾವಿದ ರಕ್ಷಿತ್‌ ಪಡ್ರೆಗೆ ಪ್ರಶಸ್ತಿಯನ್ನು ಪ್ರದಾನಮಾಡಿ ಮಾತನಾಡಿದ ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ “ ನಿರಂತರವಾಗಿ ಶ್ರೇಷ್ಠ ಕಲಾವಿದರನ್ನು ಗುರುತಿಸಿ ‘ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ’ಯನ್ನು ಪ್ರದಾನ ಮಾಡುತ್ತಾ ಬಂದಿರುವ ಕುಂದೇಶ್ವರ ಕ್ಷೇತ್ರದ ಆಡಳಿತ ಮಂಡಳಿ ಈ ಬಾರಿ ಯಕ್ಷಗಾನದಲ್ಲಿ ವಿಶೇಷ ಸಾಧನೆ ಮಾಡಿದ ರಕ್ಷಿತ್‌ ಪಡ್ರೆಗೆ ಪ್ರಶಸ್ತಿ ನೀಡುವ ಮೂಲಕ ಯುವ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದೆ.“ ಎಂದರು.

    ಮುಖ್ಯ ಅತಿಥಿಯಾಗಿ ಆಗಮಿಸಿದ ಕದ್ರಿ ನವನೀತ ಶೆಟ್ಟಿ ಮಾತನಾಡಿ “60 ವರ್ಷಗಳ ಹಿಂದೆ ಸೀನು ಸೀನರಿಯ ವಿಶಿಷ್ಟ ಯಕ್ಷಗಾನ ಮಂಗಳೂರಲ್ಲಿ ನಡೆಯುತ್ತಿತ್ತು. ಇದನ್ನು ಮತ್ತೆ ರಂಗದಲ್ಲಿ ತರಬೇಕು ಎಂದು ಕಲಾ ಬಳಗ ಯೋಚಿಸಿದಾಗ ಸಮರ್ಥ ಯಕ್ಷಗುರು ರಕ್ಷಿತ್‌ ಪಡ್ರೆ ಅದರ ನೇತೃತ್ವ ವಹಿಸಿ, ನಿಟ್ಟೆ ಎಂಜಿನಿಯರಿಂಗ್‌ ವಿದ್ಯಾರ್ಥಿಗಳೇ ಹೆಚ್ಚಾಗಿ ಇರುವ ಅಪೂರ್ವ ತಂಡ ಕಟ್ಟಿದರು. ಅವರ ಅರ್ಹತೆಗೆ ಅನುಗುಣವಾಗಿಯೇ ಈ ಪ್ರಶಸ್ತಿ ಲಭಿಸಿದೆ.” ಎಂದರು.

    ಪ್ರಶಸ್ತಿ ಸ್ವೀಕರಿಸಿದ ರಕ್ಷಿತ್‌ ಶೆಟ್ಟಿ ಪಡ್ರೆ ಮಾತನಾಡಿ “ಯುವ ಕಲಾವಿದರು ಶಿಸ್ತಿನಿಂದ ತಮ್ಮ ಪಾತ್ರ ನಿರ್ವಹಿಸಿ, ಹಂತ ಹಂತವಾಗಿ ಮೇಲೆ ಬನ್ನಿ, ಯಾವತ್ತೂ ಅಹಂಕಾರ ತೋರಬೇಡಿ. ಇತ್ತೀಚೆಗೆ ಮಾನ, ಸನ್ಮಾನ ಪ್ರಶಸ್ತಿಗಳು ಸಿಗಬೇಕಾದರೆ ಪ್ರಭಾವ ಬೇಕಾಗುತ್ತದೆ, ಆದರೆ ಯಾವುದೇ ಭೇಟಿ, ಸಂಪರ್ಕ ಇಲ್ಲದೇ ಇದ್ದರೂ ಕುಂದೇಶ್ವರದವರು, ಯುವ ಕಲಾವಿದನನ್ನು ಗುರುತಿಸಿ ಈ ಶ್ರೇಷ್ಠ ಪ್ರಶಸ್ತಿ ನೀಡಿದ್ದು ಖುಷಿ ತಂದಿದೆ. ಹನುಮಗಿರಿ ಮೇಳದಲ್ಲಿ ಕಲಾವಿದನಾಗಿರುವಾಗಲೇ ಕಾಲೇಜು ವಿದ್ಯಾಭ್ಯಾಸ ಮಾಡುತ್ತಾ ಎಂ. ಎಸ್ಸಿ. ಮುಗಿಸಿದೆ. ಈ ಸಂದರ್ಭ ಸದಾ ಪ್ರೋತ್ಸಾಹಿಸಿದ ಮೇಳದ ಯಜಮಾನರಾದ ಟಿ. ಶ್ಯಾಮ್‌ ಭಟ್‌ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಮ್ಮಾನವನ್ನು ಹೆತ್ತ ತಾಯಿ, ಗುರುಗಳಾದ ಗಿರೀಶ್‌ ನಾವಡ, ಲೋಕೇಶ್‌, ದೇವಿಪ್ರಸಾದ್‌ ಮತ್ತು ಭರತನಾಟ್ಯ ಗುರು ಸುಮಂಗಲಾ ರತ್ನಾಕರ್‌ ಅವರಿಗೆ ಅರ್ಪಿಸುತ್ತೇನೆ.” ಎಂದರು.

    ಕಾರ್ಯಕ್ರಮ ಸಂಯೋಜಿಸಿದ ಕುಂದೇಶ್ವರ ಪ್ರತಿಷ್ಠಾನದ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಮಾತನಾಡಿ “ಕುಂದೇಶ್ವರ ಕ್ಷೇತ್ರದ ಧರ್ಮದರ್ಶಿ ದಿ. ರಾಘವೇಂದ್ರ ಭಟ್‌ ಅರ್ಥಧಾರಿಗಳಾಗಿದ್ದು, ಶೃಂಗೇರಿ ಮೇಳದ ಸಂಚಾಲಕರೂ ಆಗಿದ್ದರು. ಅವರ ನೆನಪಲ್ಲಿ ಕ್ಷೇತ್ರದ ವತಿಯಿಂದ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ನೀಡಲಾಗುತ್ತಿದೆ.” ಎಂದರು.

    ಹಿರ್ಗಾನ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಮಹಾವೀರ ಕಟ್ಟಡ, ಮಾಜಿ ಅಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ, ಕಲಾವಿದ ಕದ್ರಿ ನವನೀತ ಶೆಟ್ಟಿ ಹಾಗೂ ಅಜೆಕಾರ್‌ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

    ಸಭಾಕಾರ್ಯಕ್ರಮದ ಬಳಿಕ ರಕ್ಷಿತ್‌ ಪಡ್ರೆ ನೇತೃತ್ವದಲ್ಲಿ ನಡೆದ ಶ್ವೇತಕುಮಾರ ಚರಿತ್ರೆ ಯಕ್ಷ-ನಾಟಕ ಜನ ಮೆಚ್ಚುಗೆ ಗಳಿಸಿತು.

    Share. Facebook Twitter Pinterest LinkedIn Tumblr WhatsApp Email
    Previous Articleಪಂಜಿಕಲ್ಲು ಶಾಲೆಯಲ್ಲಿ ಅರಳುವ ಮೊಗ್ಗುಗಳು ಕಾರ್ಯಕ್ರಮ
    Next Article ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಮಾನಸ ಕುಲಾಲ್ ಇವರ ನೃತ್ಯ ಪ್ರದರ್ಶನ | ಜನವರಿ 29
    roovari

    Add Comment Cancel Reply


    Related Posts

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ತಾಳಮದ್ದಳೆ ಜ್ಞಾನಯಜ್ಞ’ | ಮೇ 26

    May 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.