Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಮಲತ್ತಹಳ್ಳಿಯಲ್ಲಿ ‘ಕರ್ನಾಟಕ ಜಾನಪದ ಉತ್ಸವ’ | ಫೆಬ್ರವರಿ 19ರಿಂದ 21ರವರೆಗೆ
    Cultural

    ಬೆಂಗಳೂರಿನ ಮಲತ್ತಹಳ್ಳಿಯಲ್ಲಿ ‘ಕರ್ನಾಟಕ ಜಾನಪದ ಉತ್ಸವ’ | ಫೆಬ್ರವರಿ 19ರಿಂದ 21ರವರೆಗೆ

    February 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಪದ ಪ್ರಸ್ತುತ ಪಡಿಸುವ ‘ಕರ್ನಾಟಕ ಜಾನಪದ ಉತ್ಸವ’ ಜಾನಪದ ನಾಟಕ, ನೃತ್ಯ, ಗಾಯನ ಮತ್ತು ರಂಗ ಗೌರವ ಕಾರ್ಯಕ್ರಮಗಳು ದಿನಾಂಕ 19-02-2024ರಿಂದ 21-02-2024ರವರೆಗೆ ಬೆಂಗಳೂರಿನ ಮಲತ್ತಹಳ್ಳಿಯ ಕಲಾ ಗ್ರಾಮ ಸಮುಚ್ಚಯ ಭವನದಲ್ಲಿ ನಡೆಯಲಿದೆ.

    ದಿನಾಂಕ 19-02-2024ರಂದು ಸಂಜೆ 6.30ಕ್ಕೆ ರಂಗ ತಜ್ಞರಾದ ನರೇಂದ್ರ ಬಾಬು ಇವರ ಅಧ್ಯಕ್ಷತೆಯಲ್ಲಿ ಜಾನಪದ ವಿದ್ವಾಂಸರಾದ ಡಾ. ಹಿ.ಚಿ. ಬೋರಲಿಂಗಯ್ಯ ಇವರು ಈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಗೊ.ರು. ಚನ್ನಬಸಪ್ಪ ರಚನೆಯ ರಾಮಮೂರ್ತಿಯವರ ಸಂಗೀತ ಮತ್ತು ನಿರ್ದೇಶನದಲ್ಲಿ ಕರ್ನಾಟಕ ಜಾನಪದ ನಾಟಕ ‘ಸಾಕ್ಷಿ ಕಲ್ಲು’ ಪ್ರದರ್ಶನಗೊಳ್ಳಲಿದೆ.

    ದಿನಾಂಕ 20-02-2024ರಂದು ಸುಮಾ ಆರ್. ಕಂಠಿ ಇವರ ನೃತ್ಯ ನಿರ್ದೇಶನದಲ್ಲಿ ‘ಕರ್ನಾಟಕ ಜಾನಪದ ನೃತ್ಯ ವೈಭವ’ ಪ್ರಸ್ತುತಿಗೊಳ್ಳಲಿದೆ. ಈ ಸಂದರ್ಭದಲ್ಲಿ ಖ್ಯಾತ ಆಯುರ್ವೇದ ತಜ್ಞರಾದ ಡಾ. ಅಬ್ದುಲ್ ಖಾದರ್, ಹಿರಿಯ ರಂಗತಜ್ಞರು ಹಾಗೂ ಕವಿಗಳಾದ ಮಲ್ಲಿಕಾರ್ಜುನ ಸ್ವಾಮಿ ಮಹಾಮನೆ, ಹಿರಿಯ ಸಾಹಿತಿ ಮತ್ತು ಪ್ರಕಾಶಕರಾದ ಅವಿರತ ಹರೀಶ್ ಮತ್ತು ಅಂತರಾಷ್ಟ್ರೀಯ ಚಿತ್ರ ಕಲಾವಿದರಾದ ಓ. ವೆಂಕಟೇಶ್ ಇವರುಗಳು ವೇದಿಕೆ ಹಂಚಿಕೊಳ್ಳಲಿದ್ದಾರೆ.

    ದಿನಾಂಕ 21-02-2024ರಂದು ‘ಕರ್ನಾಟಕ ಜಾನಪದ ಗಾಯನ’ವನ್ನು ಗಾಯಕರಾದ ಡಿ. ದೇವರಾಜ್, ಅತಿಥಿ ಗಾಯಕರಾದ ಮಂಜುನಾಥ್ ಕೆ.ಎಸ್. ಮತ್ತು ತಂಡ ಹಾಗೂ ಶಂಕರ ಭಾರತಿಪುರ ಮತ್ತು ತಂಡದವರು ನಡೆಸಿಕೊಡಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಗಾಯಕರಾದ ಡಾ. ಅಪ್ಪಗೆರೆ ತಿಮ್ಮರಾಜು ಇವರು ಸಮಾರೋಪ ನುಡಿಗಳನ್ನಾಡಲಿದ್ದಾರೆ. ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡಮಿ ನಿಕಟಪೂರ್ವ ಸದಸ್ಯರಾದ ಆನಂದ ಮಾದಲಗೆರೆ ಅಧ್ಯಕ್ಷತೆ ವಹಿಸಲಿದ್ದು, ರವೀಂದ್ರ ಕಲಾಕ್ಷೇತ್ರ ಮತ್ತು ಕಲಾಗ್ರಾಮದ ವ್ಯವಸ್ಥಾಪಕರಾದ ನರೇಂದ್ರಬಾಬು ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleವಿರಾಜಪೇಟೆಯಲ್ಲಿ ಗಟ್ಟಿಮೇಳದೊಂದಿಗೆ ‘ಸಾಹಿತ್ಯ ಸಂಭ್ರಮ’ | ಫೆಬ್ರವರಿ 18
    Next Article ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ವಿಶ್ವ ಕೊಂಕಣಿ ಸಮಾರೋಹ’
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.