Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಭವನ ಪ್ರಕಾಶನದಿಂದ ‘ಮತ್ತೆ ಚಿಗುರಿದ ಭಾವ’ ಕವನ ಸಂಕಲನ ಲೋಕಾರ್ಪಣೆ | ಫೆಬ್ರವರಿ 22
    Book Release

    ಕನ್ನಡ ಭವನ ಪ್ರಕಾಶನದಿಂದ ‘ಮತ್ತೆ ಚಿಗುರಿದ ಭಾವ’ ಕವನ ಸಂಕಲನ ಲೋಕಾರ್ಪಣೆ | ಫೆಬ್ರವರಿ 22

    February 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಕಾಸರಗೋಡು ಕೋಟೆಕಣಿಯ ಭರವಸೆಯ ಕವಯತ್ರಿ ಚಂಚಲಾಕ್ಷಿ ಶ್ಯಾಮ್ ಪ್ರಕಾಶ್ ಇವರ ಕವನ ಸಂಕಲನ ‘ಮತ್ತೆ ಚಿಗುರಿದ ಭಾವ’ ದಿನಾಂಕ 22-02-2024ರಂದು ಅಪರಾಹ್ನ 2 ಗಂಟೆಗೆ ಕನ್ನಡ ಭವನ ಪ್ರಕಾಶನದಿಂದ ಕೃತಿ ಬಿಡುಗಡೆಗೊಳ್ಳಲಿದೆ. ಇದು ಕನ್ನಡ ಭವನ ಪ್ರಕಾಶನದಿಂದ ಬಿಡುಗಡೆಯಾಗುವ ನಾಲ್ಕನೇ ಕೃತಿಯಾಗಿದೆ.

    ಕಥಾಬಿಂದು ಪ್ರಕಾಶನದ ರೂವಾರಿ ಸಾಹಿತಿ ಪ್ರದೀಪ್ ಕುಮಾರ್, ಡಾ. ಕೊಳ್ಚಪೆ ಗೋವಿಂದ ಭಟ್, ಕವಯತ್ರಿ ರೇಖಾ ಸುದೇಶ್ ರಾವ್, ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಜಿಲ್ಲಾ ಮಹಿಳಾ ಸಂಘ ಗೌರವಾಧ್ಯಕ್ಷೆ ಕವಯತ್ರಿ ಆಶಾ ರಾಧಾಕೃಷ್ಣ, ನಿಕಟಪೂರ್ವ ಅಧ್ಯಕ್ಷೆ ಉಷಾಕಿರಣ್, ಲೇಖಕ ಪ್ರದೀಪ್ ಬೇಕಲ್, ಜಗದೀಶ್ ಕೂಡ್ಲು, ಕನ್ನಡ ಭವನದ ಕಾರ್ಯದರ್ಶಿ ವಸಂತ್ ಕೆರೆಮಮನೆ, ಪ್ರಕಾಶಕಿ ಸಂಧ್ಯಾರಾಣಿ ಟೀಚರ್ ಮುಂತಾದವರು ಉಪಸ್ಥಿತರಿರುವರು. ಕಲ್ಕೂರ ಪ್ರತಿಷ್ಠಾನ ಮಂಗಳೂರಿನ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಕೃತಿ ಬಿಡುಗಡೆಗೊಳಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಗಂಟೆ 2ರಿಂದ ಲಕ್ಷ್ಮಣಾನಂದ ಸರಸ್ವತಿ ಮಹಿಳಾ ಭಜನಾ ವೃಂದದವರಿಂದ ಸಂಕೀರ್ತನೆ ನಡೆಯಲಿದೆ.

    ಈ ಕೃತಿಗೆ ಮುನ್ನುಡಿ ಲೇಖಕ ಪ್ರದೀಪ್ ಬೇಕಲ್, ಶುಭನುಡಿ ಡಾ. ಮಲ್ಲಿಕಾರ್ಜುನ ನಾಸಿ ಉಪಾಧ್ಯಕ್ಷರು ಕೊಚ್ಚಿನ್ ಕನ್ನಡ ಸಂಘ, ಚೆನ್ನುಡಿ ಡಿ. ಶ್ರೀನಿವಾಸ ರಾವ್ ಅಧ್ಯಕ್ಷರು ಕೊಚ್ಚಿನ್ ಕನ್ನಡ ಸಂಘ, ನಲ್ನುಡಿ ಕರ್ನಾಟಕ ಜಾನಪದ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪಮ್ಮಿ ಕೊಡಿಯಾಲ್ ಬೈಲ್ ಹಾಗೂ ಬೆನ್ನುಡಿ ಎಜ್.ಆರ್. ಶಶಿದರ್ ನಾಯ್ಕ್ ಅಧ್ಯಕ್ಷರು ವಿಶ್ವರಾಮ ಕ್ಷತ್ರಿಯ ಮಹಾಸಂಘ (ರಿ.) ಕುಂದಾಪುರ ಇವರುಗಳು ಬರೆದು ಕೃತಿಯನ್ನು ಸಂಪನ್ನಗೊಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದಿಂದ ‘ಸಂದೇಶ ಪ್ರಶಸ್ತಿ’ ಪ್ರದಾನ
    Next Article ಉಡುಪಿ ಶ್ರೀ ಕೃಷ್ಣ ಮಠದಲ್ಲಿ ‘ಚಾಂದ್ರ ಮಧ್ವನವಮಿ’
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications