Subscribe to Updates

    Get the latest creative news from FooBar about art, design and business.

    What's Hot

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ನೃತ್ಯ ಶಂಕರ ಸರಣಿಯ ‘ಶತ ಸಂಭ್ರಮ’

    June 10, 2025

    ಕಥೆ – ‘ತೊರೆದು ಹೋಗುವ ಮುನ್ನ’

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ‘ರಾಜ್ಯ ಮಟ್ಟದ ನೃತ್ಯೋತ್ಸವ’
    Dance

    ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ‘ರಾಜ್ಯ ಮಟ್ಟದ ನೃತ್ಯೋತ್ಸವ’

    February 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಬೆಂಗಳೂರು : ವಿರಾಜಪೇಟೆಯ ಅಪ್ಪಯ್ಯಸ್ವಾಮಿ ರಸ್ತೆಯಲ್ಲಿರುವ ಮಹಾಗಣಪತಿ ಆಂಜನೇಯ ದೇವಸ್ಥಾನದಲ್ಲಿ ನಡೆಸಲಾಗುತ್ತಿರುವ ‘ನಾಟ್ಯ ಮಯೂರಿ’ ನೃತ್ಯ ಶಾಲೆಯ ವತಿಯಿಂದ ‘ರಾಜ್ಯ ಮಟ್ಟದ ನೃತ್ಯೋತ್ಸವ’ವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ದಿನಾಂಕ 04-02-2024ರಂದು ನಡೆಯಿತು.
    ಕಾರ್ಯಕ್ರಮದ ಸಾನ್ನಿಧ್ಯವನ್ನು ಕುಂದಾಪುರದ ಶ್ರೀ ಶನೇಶ್ವರ ದೇವಸ್ಥಾನದ ಧರ್ಮದರ್ಶಿಯಾದ ಡಾ. ಅಶೋಕ್ ಶೆಟ್ಟಿ ವಹಿಸಿದ್ದರು. ನಟ ಸುಧೀರ್ ಅವರ ಪತ್ನಿ ಮಾಲತಿ ಸುಧೀರ್ ಕಾರ್ಯಕ್ರಮದ ಉದ್ಘಾಟನೆ ಮಾಡಿದರು. ‘ನಾಟ್ಯ ಮಯೂರಿ’ ನೃತ್ಯ ಶಾಲೆಯ ಸಂಸ್ಥಾಪಕರಾದ ವಿದುಷಿ ಪ್ರೇಮಾಂಜಲಿ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ‘ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ’ ಹಾಗೂ ‘ಸುವರ್ಣ ಶ್ರೀ ಕನ್ನಡ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಿತು.
    ಖ್ಯಾತ ಗಾಯಕರಾದ ಶಶಿಧರ್ ಕೋಟೆ, ಸಮಾಜ ಸೇವಕ ಸೋಮನ್ ಎನ್.ಕೆ., ಷಣ್ಮುಗಂ ಎಂ., ಡಾ. ಮಮತಾ ಅಶೋಕ್, ಡಾ. ಪಿ. ಶ್ರೀಧರ್, ಶ್ರೀ ಮಹೇಂದರ್ ಮುಣೋತ್, ಬಾಲ ಪ್ರತಿಭೆ ಅಮೋಘ ಕೃಷ್ಣ ವಿ., ಡಾ. ಕೆಂಚನೂರು ಶಂಕರ್, ರಾಜ್ ಸಂಪಾಜೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿರಾಜಪೇಟೆ, ಹುಣಸೂರು, ಪಿರಿಯಾಪಟ್ಟಣ ಸೇರಿದಂತೆ ವಿವಿಧ ಕಡೆಗಳಿಂದ ನೃತ್ಯ ತಂಡಗಳು ಪ್ರದರ್ಶನ ನೀಡಿದವು.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರು ಕ.ಸಾ.ಪ.ದಿಂದ ಕವನ ಸಂಕಲನ ಬಿಡುಗಡೆ ಸಮಾರಂಭ | ಫೆಬ್ರವರಿ 25
    Next Article ಬೆಂಗಳೂರಿನ ವಸಂತ ಆರ್ಟ್‌ ಆಯೋಜಿಸಿದ ಸಮೂಹ ಚಿತ್ರಕಲಾ ಪ್ರದರ್ಶನ ‘ಕಲರ್ಸ್ ಬ್ರಿಜ್’ 
    roovari

    Add Comment Cancel Reply


    Related Posts

    ಕಲಾರಸಿಕರ ರಂಜಿಸಿದ ‘ಯುವ ನೃತ್ಯೋತ್ಸವ-2025’

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಲೇಖನ | ಅಗಲಿದ ಎಚ್.ಎಸ್.ವಿ.ಯವರಿಗೆ ಸಂಭ್ರಮದ ಕವಿ ಕಾವ್ಯ ನಮನ

    June 10, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ | ಜೂನ್ 15

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications