Subscribe to Updates

    Get the latest creative news from FooBar about art, design and business.

    What's Hot

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪಣಂಬೂರು ಬೀಚ್ ನಲ್ಲಿ ‘ಜಾನಪದ ಕಡಲೋತ್ಸವ’ | ಮಾರ್ಚ್ 1ರಿಂದ 3ರವರೆಗೆ
    Awards

    ಪಣಂಬೂರು ಬೀಚ್ ನಲ್ಲಿ ‘ಜಾನಪದ ಕಡಲೋತ್ಸವ’ | ಮಾರ್ಚ್ 1ರಿಂದ 3ರವರೆಗೆ

    February 28, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಸಾರಥ್ಯದಲ್ಲಿ ರೋಹನ್ಸ್ ಕಾರ್ಪೋರೇಶನ್ ಸಹಯೋಗದಲ್ಲಿ ದಿನಾಂಕ 01-03-2024ರಿಂದ 03-03-2024ರವೆರೆಗೆ ಪಣಂಬೂರು ಬೀಚ್ ನಲ್ಲಿ ‘ಜಾನಪದ ಕಡಲೋತ್ಸವ’ವನ್ನು ಆಯೋಜಿಸಲಾಗಿದೆ.

    ದಿನಾಂಕ 01-03-2024ರಂದು ಸಂಜೆ 6.30ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಾನಪದ ಕಡಲೋತ್ಸವ ಉದ್ಘಾಟಿಸಲಿದ್ದಾರೆ. ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ವಿವಿಧ ಪ್ರದರ್ಶನ ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಇದೇ ವೇಳೆ ‘ಜಾನಪದ ಕಡಲೋತ್ಸವ ಪ್ರಶಸ್ತಿ’ ಪ್ರದಾನ ಮತ್ತು ಹದಿಮೂರು ಮಂದಿ ಜಾನಪದ ಕಲಾವಿದರಿಗೆ ಗೌರವಾರ್ಪಣೆ ನಡೆಯಲಿದೆ. ಸಂಜೆ 7.30ರಿಂದ ಡಾ. ರಮೇಶ್ಚಂದ್ರ ಹಾಗೂ ಕಲಾವತಿ ದಯಾನಂದ ಬಳಗದಿಂದ ‘ಜಾನಪದ ರಸ ಸಂಜೆ’ ಕಾರ್ಯಕ್ರಮ ಜರಗಲಿದೆ.

    ದಿನಾಂಕ 02-03-2024ರಂದು ಸಂಜೆ 5.30ರಿಂದ ವಿಚಾರ ಸಂಕಿರಣ ಮತ್ತು ಜಾನಪದ ಪರಿಷತ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದೆ. ಶಾಸಕ ಅಶೋಕ್ ಕುಮಾರ್ ರೈ ಮತ್ತು ಕ.ಜಾ.ಪ. ಬೆಂಗಳೂರು ಆಡಳಿತಾಧಿಕಾರಿ ನಂದಕುಮಾರ್ ಹೆಗ್ಡೆ ಭಾಗವಹಿಸಲಿದ್ದಾರೆ. ಜಾನಪದ ವಿದ್ವಾಂಸ ಡಾ. ಚಿನ್ನಪ್ಪ ಗೌಡ ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ಡಾ. ಸಾಯಿಗೀತಾ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಮೈಮ್ ರಾಮ್‌ ದಾಸ್ ವಿಷಯ ಮಂಡಿಸಲಿದ್ದಾರೆ. ಸಂಜೆ ಗಂಟೆ 7.30ಕ್ಕೆ ಅಜಯ್ ವಾರಿಯರ್ ತಂಡದಿಂದ ‘ಸಂಗೀತ ರಸ ಸಂಜೆ’ ನಡೆಯಲಿದೆ.

    ದಿನಾಂಕ 03-03-2024ರಂದು ಸಂಜೆ 3ಕ್ಕೆ ಶಾಸಕ ಡಿ. ವೇದವ್ಯಾಸ್ ಕಾಮತ್ ಗಾಳಿಪಟ ಉತ್ಸವ ಉದ್ಘಾಟಿಸುವರು. 5.30ಕ್ಕೆ ಸಮಾರೋಪ ಸಮಾರಂಭ ಮತ್ತು ಜಾನಪದ ಪರಿಷತ್ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಸಮಾರಂಭ ಆತ್ಮಶಕ್ತಿ ವಿವಿದೊದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಉದ್ಘಾಟಿಸಲಿದ್ದು, ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಯೋಧ್ಯೆಯ ಬಾಲ ರಾಮನ ವಿಗ್ರಹ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ‘ಅಮರ ಶಿಲ್ಪಿ’ ಬಿರುದು ಪ್ರದಾನ ಮಾಡಲಾಗುತ್ತದೆ. ಬಳಿಕ ಮಣಿಕಾಂತ್ ಕದ್ರಿ ಬಳಗದವರಿಂದ ‘ಕಡಲಗೀತೆ’ ಮ್ಯೂಸಿಕಲ್ ನೈಟ್ ನಡೆಯಲಿದೆ. ಪ್ರತೀ ದಿನ ಸಂಜೆ 4 ಗಂಟೆಯಿಂದ ‘ಜಾನಪದ ಮತ್ತು ಸಾಂಸ್ಕೃತಿಕ’ ಪ್ರದರ್ಶನಗಳು ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleನಾರಿ ಚಿನ್ನಾರಿಯಿಂದ ‘ಗೃಹ ಸಲ್ಲಾಪ’ ಪ್ರಥಮ ಸರಣಿ ಕಾರ್ಯಕ್ರಮ 
    Next Article ಬೆಳ್ತಂಗಡಿಯ ಪುತ್ರಬೈಲಿನಲ್ಲಿ ತಾಳಮದ್ದಳೆ
    roovari

    Add Comment Cancel Reply


    Related Posts

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಯೋಗೀಶ ಶರ್ಮಾ ಬಳ್ಳಪದವು ಇವರಿಗೆ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯ ಗೌರವ

    May 19, 2025

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.