Subscribe to Updates

    Get the latest creative news from FooBar about art, design and business.

    What's Hot

    ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ‘ಸುವರ್ಣ ಪರ್ವ -13’ | ಸೆಪ್ಟೆಂಬರ್ 21

    September 17, 2025

    ಕಥೆಗಳು ಮನಸ್ಸಿನಲ್ಲಿ ಅನುರಣಿಸುವಂತೆ ಇರಬೇಕು – ಕಾಸರಗೋಡು ಚಿನ್ನ

    September 17, 2025

    ಮೈಸೂರಿನಲ್ಲಿ ‘ನೀರ್ಮಾದಳ ಹೂವಿನೊಂದಿಗೆ…’ ಏಕವ್ಯಕ್ತಿ ರಂಗ ಪ್ರಯೋಗ | ಸೆಪ್ಟೆಂಬರ್ 20  

    September 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಕಲಾವಿದೆ, ತಾಳಮದ್ದಳೆ ಅರ್ಥದಾರಿ ಜಯಶ್ರೀ ಶೆಟ್ಟಿಯವರಿಗೆ ಸನ್ಮಾನ
    Felicitation

    ಯಕ್ಷಗಾನ ಕಲಾವಿದೆ, ತಾಳಮದ್ದಳೆ ಅರ್ಥದಾರಿ ಜಯಶ್ರೀ ಶೆಟ್ಟಿಯವರಿಗೆ ಸನ್ಮಾನ

    March 15, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಕಳ ಹೊಸಸಂಜೆ ಬಳಗದ ವತಿಯಿಂದ ದಿನಾಂಕ 10-03-2024ರಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದೆ, ತಾಳಮದ್ದಳೆ ಅರ್ಥದಾರಿ ಜಯಶ್ರೀ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು “ಯಕ್ಷಗಾನ ಕಲೆ ಅತ್ಯಂತ ಶ್ರೀಮಂತ ಕಲೆ. ಬಯಲಾಟ ಮತ್ತು ತಾಳಮದ್ದಳೆ ಎರಡೂ ಪ್ರಕಾರಗಳಲ್ಲಿಯೂ ಕೂಡ ವಿಪುಲ ಸಾಹಿತ್ಯ ಜೊತೆಗೆ ಪುರಾಣ ಇತಿಹಾಸಗಳ ವಿಸ್ತೃತ ಪರಿಚಯ ದೊರಕುತ್ತದೆ. ವೇಷಗಾರಿಕೆ, ಸಂಗೀತ, ನಾಟ್ಯ, ವಾಙ್ಮಯ ಮುಂತಾದ ಎಲ್ಲವೂ ಒಳಗೊಂಡ ಸರ್ವಾಂಗೀಣ ಕಲೆಯಾಗಿದ್ದು ನೂರಾರು ವರ್ಷಗಳ ಸುದೀರ್ಘ ಇತಿಹಾಸವಿದೆ. ಯಕ್ಷಗಾನ ಕಲೆಯನ್ನು ಬೆಳೆಸಿ ಭವಿಷ್ಯದ ಪೀಳಿಗೆಗೂ ತಲುಪಿಸುವ ಕೆಲಸ ಕಲಾವಿದರಿಂದ ನಿರಂತರವಾಗಿ ನಡೆಯಬೇಕು” ಎಂದು ಹೇಳಿದರು.

    ರೋಟರಿ ಕ್ಲಬ್ ಮಾಜಿ ಅಧ್ಯಕ್ಷೆ ಸುವರ್ಣಾ ನಾಯಕ್, ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಅರುಣಾ ಎಸ್., ಹಿರಿಯ ನಾಗರಿಕ ಭಾಸ್ಕರ ಕಾರಂತ, ಕಾರ್ಕಳ ಪುರಸಭೆಯ ಮಾಜಿ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಯಕ್ಷಗಾನ ಗುರು ಹರೀಶ ಶೆಟ್ಟಿ ಸೂಡ, ವಿಜಯಾ ಬ್ಯಾಂಕ್ ನಿವೃತ್ತ ಸೀನಿಯರ್ ಮ್ಯಾನೇಜರ್ ಕೆ.ಎ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಸಾಹಿತ್ಯ ಸಂಘದ ಗೌರವಾಧ್ಯಕ್ಷ ತುಕಾರಾಮ ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಯಲಕ್ಷ್ಮಿ ಶೆಟ್ಟಿ ಸ್ವಾಗತಿಸಿ, ಹೊಸಸಂಜೆ ಬಳಗದ ಅಧ್ಯಕ್ಷ ಆರ್. ದೇವರಾಯ ಪ್ರಭು ಕಾರ್ಯಕ್ರಮ ಸಂಯೋಜಿಸಿ, ಬೇಬಿ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿದ್ವಾನ್ ಕೆ.ಎಸ್. ಮೋಹನ್ ಕುಮಾರ್ ಇವರಿಂದ ‘ಮಾಸಿಕ ಸಂಗೀತ ಕಾರ್ಯಕ್ರಮ’ | ಮಾರ್ಚ್ 16
    Next Article ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ‘ಯಕ್ಷ ಸುಮತಿ 2024’ | ಮಾರ್ಚ್ 16
    roovari

    Add Comment Cancel Reply


    Related Posts

    ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ‘ಸುವರ್ಣ ಪರ್ವ -13’ | ಸೆಪ್ಟೆಂಬರ್ 21

    September 17, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಂಕ್ರಾಂತಿ’ | ಸೆಪ್ಟೆಂಬರ್ 20

    September 17, 2025

    ಮೂಡುಬಿದಿರೆಯಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಸೆಪ್ಟೆಂಬರ್ 20

    September 17, 2025

    ಚಿಗುರುಪಾದೆಯಲ್ಲಿ ರಂಜಿಸಿದ ಶ್ರೀಗುರುನರಸಿಂಹ ಯಕ್ಷಬಳಗದ ‘ಯಕ್ಷಚಿಗುರು -2025’

    September 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.