Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೆನರಾ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮ
    Literature

    ಕೆನರಾ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮ

    March 21, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಯುವಜನತೆ ಮತ್ತು ರಾಷ್ಟ್ರ : ಸ್ವಾಮಿ ವಿವೇಕಾನಂದರ ರಾಷ್ಟ್ರೀಯ ಸಂದೇಶಗಳ ಮರುಶೋಧನೆ” ಎಂಬ ವಿಷಯದ ಕುರಿತು ದಿನಾಂಕ 12-03-2024ರಂದು ಮೂವತ್ತಮೂರನೇ ಉಪನ್ಯಾಸ ನಡೆಯಿತು. ಈ ಕಾರ್ಯಕ್ರಮವು ಬೆಂಜನಪದವು ಇಲ್ಲಿರುವ ಕೆನರಾ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್ ಸಂಸ್ಥೆಯ ಪ್ರೊ. ನಂದನ್ ಪ್ರಭು “ರಾಷ್ಟ್ರಕವಿ ರವೀಂದ್ರನಾಥ ಠಾಗೋರ್ ನುಡಿದಂತೆ, ಭಾರತವನ್ನು ತಿಳಿಯ ಬಯಸುವ ಯುವಕರು ಮೊಟ್ಟ ಮೊದಲು ಸ್ವಾಮಿ ವಿವೇಕಾನಂದರನ್ನು ಓದಬೇಕು. ಸ್ವಾಮೀಜಿ ಸಕಾರಾತ್ಮಕತೆಗಳ ಅಪರಿಮಿತ ಗಣಿ. ತ್ಯಾಗ ಮತ್ತು ಸೇವೆ ಈ ದೇಶದ ಅವಳಿ ಆದರ್ಶಗಳು. ಯುವಕರು ಕೇವಲ ಉದ್ಯೋಗಕ್ಕಾಗಿ ಸೀಮಿತಗೊಳ್ಳದೆ, ಸಾಮಾಜಿಕ ಸೇವೆಗಳಲ್ಲಿಯೂ ಭಾಗಿಯಾಗಬೇಕು. ‘ನಾನು ಸುಧಾರಣೆಯಲ್ಲಿ ನಂಬುವುದಿಲ್ಲ. ಬೆಳವಣಿಗೆಯಲ್ಲಿ ನಂಬುತ್ತೇನೆ. ನಾನು ದೇವರ ಸ್ಥಾನದಲ್ಲಿ ನಿಂತು ಸಮಾಜಕ್ಕೆ ನೀನು ಹೀಗೆ ಚಲಿಸಬೇಕು, ಹಾಗಲ್ಲ ಎಂದು ಕಟ್ಟಪ್ಪಣೆ ಮಾಡಲಾರೆ. ತನ್ನ ಪಾಲಿನ ಮರಳಿನ ಕಣವನ್ನೇ ಸೇತುವೆಯ ಮೇಲೆ ಹಾಕಿ ತೃಪ್ತವಾದ ಅಳಿಲಿನಂತೆ ಶ್ರೀರಾಮನ ಸೇತುವೆಯ ಅಳಿಲು ನಾನಾಗ ಬಯಸುತ್ತೇನೆ’ ಎಂಬ ಸ್ವಾಮಿ ವಿವೇಕಾನಂದರ ಸಂದೇಶವನ್ನು ನಾವೆಲ್ಲರೂ ಪಾಲಿಸಬೇಕಾಗಿದೆ” ಎಂದು ಹೇಳಿದರು.

    “ಯುವಜನತೆ ಭಾರತದ ಭವಿಷ್ಯವನ್ನು ರೂಪಿಸುವ ಅಗ್ರೇಸರರು. ಆಧುನಿಕ ಸಮಾಜದ ಸಮಸ್ಯೆಗಳಿಗೆ ಸ್ವಾಮಿ ವಿವೇಕಾನಂದರ ಚಿಂತನೆಗಳಲ್ಲಿ ಪರಿಹಾರವಿದೆ. ಯುವಕರು ಸ್ವಾಮಿ ವಿವೇಕಾನಂದರ ಜೀವನ ಸಂದೇಶಗಳ ಅಧ್ಯಯನವನ್ನು ನಡೆಸಿ ಸಮಾಜಮುಖಿ ಜೀವನವನ್ನು ನಡೆಸಬೇಕು. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ – ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಕಾರ್ಯಯೋಜನೆಗಳು ಅಭಿನಂದನಾರ್ಹ” ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಗೇಶ್ ಹೆಚ್. ಹೇಳಿದರು.

    ರಾಮಕೃಷ್ಣ ಮಿಷನ್ ಇದರ ಸಂಯೋಜಕರಾಗಿರುವ ಶ್ರೀ ರಂಜನ್ ಬೆಳ್ಳರ್ಪಾಡಿ ಸ್ವಾಗತಿಸಿ, ಪ್ರಾಧ್ಯಾಪಕಿ ಕುಮಾರಿ ಕ್ಯಾಲ್ ಡಿ’ಮೇಲ್ಲೋರವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧ ಶ್ರೀ ಬೆಲ್ಲಾಳ ಗೋಪಿನಾಥ ರಾವ್, ಕಾಲೇಜಿನ ಎನ್.ಎಸ್.ಎಸ್. ಘಟಕದ ಸಂಯೋಜಕರಾದ ಡಾ. ನಾರಾಯಣಸ್ವಾಮಿ, ಉಪನ್ಯಾಸಕ ವೃಂದ ಮತ್ತು ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳದಲ್ಲಿ ‘ಸಾಧಕರಿಗೆ ಸನ್ಮಾನ’ ಕಾರ್ಯಕ್ರಮ
    Next Article ಶ್ವೇತ ಸಂಜೆ 9ನೇ ಕಾರ್ಯಕ್ರಮದಲ್ಲಿ ‘ಯಕ್ಷಗಾನ ವೈಭವ’
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ಕೇಳು ಪಾಪಕ್ಕ’

    May 23, 2025

    ‘ಮಲೆಯಾಳದ ಆಧುನಿಕ ಸಣ್ಣ ಕಥೆಗಳು’ ಅನುವಾದಿತ ಕೃತಿ ಲೋಕಾರ್ಪಣೆ

    May 23, 2025

    ಉಡುಪಿಯ ರವೀಂದ್ರ ಮಂಟಪದಲ್ಲಿ ‘ಸಾಮರಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ | ಮೇ 24

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.