Subscribe to Updates

    Get the latest creative news from FooBar about art, design and business.

    What's Hot

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡವ ಮಕ್ಕಡ ಕೂಟದ 87ನೇ ಕೃತಿ ಬಿಡುಗಡೆ
    Book Release

    ಕೊಡವ ಮಕ್ಕಡ ಕೂಟದ 87ನೇ ಕೃತಿ ಬಿಡುಗಡೆ

    March 22, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಡಿಕೇರಿ : ಕೊಡವ ಮಕ್ಕಡ ಕೂಟದ 87ನೇ ಪುಸ್ತಕ ಹಾಗೂ ಸಾಹಿತಿ ಹಂಚೆಟ್ಟರ ಫ್ಯಾನ್ಸಿ ಮುತ್ತಣ್ಣ ಅವರು ರಚಿಸಿರುವ 7ನೇ ಕೊಡವ ಪುಸ್ತಕ ‘ಕೂಪದಿ’ ಇದರ ಲೋಕಾರ್ಪಣಾ ಸಮಾರಂಭವು ದಿನಾಂಕ 20-03-2024ರ ಬುಧವಾರದಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು.
    ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದ 2024 ಹಾಕಿ ನಮ್ಮೆಯ ಅಧ್ಯಕ್ಷ ಕುಂಡ್ಕೋಳಂಡ ರಮೇಶ್ ಮುದ್ದಯ್ಯ “ಸಾಹಿತ್ಯ ಕೃಷಿ ಉಳಿದೆಲ್ಲ ಕೃಷಿಗಿಂತ ಕಠಿಣವಾದುದು. ಬೇರೆ ಕೃಷಿಯಲ್ಲಿ ತಪ್ಪಾದರೂ ಸರಿ ಮಾಡಿಕೊಳ್ಳುವ ಅವಕಾಶ ಇದೆ. ಆದರೆ ಸಾಹಿತ್ಯ ಕೃಷಿಯಲ್ಲಿ ತಪ್ಪಾಗದಂತೆ ಬರೆಯಬೇಕಿದೆ. ಅದೊಂದು ಬಗೆಯ ತಪಸ್ಸು ಇದ್ದಂತೆ.” ಎಂದು ಹೇಳಿದರು.
    ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮಾತನಾಡಿ “ಕೊಡಗಿನಲ್ಲಿ ಸಂಶೋಧನಾ ಕೃತಿಗಳು ರಚನೆಯಾಗಬೇಕಿದೆ. ಈ ಕುರಿತು ಲೇಖಕರು ಗಮನ ಹರಿಸಬೇಕು. ಕೊಡವ ಭಾಷೆಯಲ್ಲಿ ಪುಸ್ತಕ ಬರೆಯಲು ಯುವಪೀಳಿಗೆ ಮುಂದಾಗಬೇಕು.ವಿಶೇಷವಾಗಿ ಸಂಶೋಧನಾ ಕೃತಿಗಳು ಹೆಚ್ಚು ಹೆಚ್ಚು ಹೊರಬೇಕಾದ ಅನಿವಾರ್ಯತೆ ಇದೆ. ಕೊಡಗಿನಲ್ಲಿ ಸಂಶೋಧನೆಗೆ ವಿಫುಲವಾದ ಅವಕಾಶವೂ ಇದೆ. ಇವುಗಳನ್ನು ಅರಿತು ಯುವಪೀಳಿಗೆ ಸಂಶೋಧನೆಗೆ ಮುಂದಾಗಬೇಕು. ಬರೆಯುವುದು ಎಷ್ಟು ಮುಖ್ಯವೋ, ಅದನ್ನು ಪ್ರಕಟಿಸುವುದೂ ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ದಾನಿಗಳ ಸಹಕಾರ ತುಂಬಾ ಪ್ರಮುಖವಾದುದು.” ಎಂದು ಹೇಳಿದರು.
    ಲೇಖಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮಾತನಾಡಿ “ಬರಹಗಾರರಿಗೆ ದಾನಿಗಳ ಸಹಕಾರದ ಅಗತ್ಯವಿದೆ. ಇದು ನನ್ನ 7ನೇ ಪುಸ್ತಕ. ಪುಸ್ತಕವನ್ನು ಓದಿ ಅಭಿಪ್ರಾಯ ವ್ಯಕ್ತಪಡಿಸಿದರೆ ಮತ್ತಷ್ಟು ಪುಸ್ತಕಗಳನ್ನು ಬರೆಯಲು ಅದು ಪ್ರೇರಣೆ ನೀಡಿದಂತಾಗುತ್ತದೆ.” ಎಂದು ಹೇಳಿದರು.
    ಕೊಡವ ಮಕ್ಕಡ ಕೂಟದ ಸಲಹೆಗಾರ ಕುಲ್ಲೇಟಿರ ಅಜಿತ್ ನಾಣಯ್ಯ ಮಾತನಾಡಿ “ಬೊಳ್ಳಜಿರ ಬಿ. ಅಯ್ಯಪ್ಪ ಎಲ್ಲಿ ಸಿಗುತ್ತಾರೆ ಎಂದರೆ ಅದು ಪುಸ್ತಕ ಮುದ್ರಣಾಲಯದಲ್ಲಿ ಎಂಬ ಮಾತು ಜನಜನಿತವಾಗಿದೆ. ಪುಸ್ತಕ ಪ್ರಕಟಣೆಯಲ್ಲಿ ಅವರು ತಮ್ಮನ್ನು ಸರ್ವವಿಧದಲ್ಲೂ ತೊಡಗಿಸಿಕೊಂಡಿದ್ದು, ಕೊಡಗಿನ ಸಾಹಿತ್ಯ ಜಗತ್ತಿನಲ್ಲಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ನಾಲ್ಕು ಸಾವಿರ ಪುಸ್ತಕಗಳನ್ನು ಮಕ್ಕಳಿಗೆ ಉಚಿತವಾಗಿ ನೀಡಿರುವುದು, ಹೊಸ ಹೊಸ ಸಾಹಿತಿಗಳ ಪುಸ್ತಕಗಳನ್ನು ಬಿಡುಗಡೆಗೊಳಿಸುವುದು, 87 ಪುಸ್ತಕಗಳನ್ನು ಹೊರತಂದಿರುವುದು ಸಣ್ಣ ವಿಷಯವಲ್ಲ. ಕೊಡವ ಸಂಘಟನೆ ಮತ್ತು ಕೊಡವ ಸಮಾಜಗಳು ಮಾಡಬೇಕಾದ ಕಾರ್ಯಕ್ರಮಗಳನ್ನು ಕೊಡವ ಮಕ್ಕಡ ಕೂಟ ಮಾಡುತ್ತಿದೆ ಎಂದರೆ ಅದು ಅತಿಶಯೋಕ್ತಿ ಅಲ್ಲ.” ಎಂದರು.ದಾನಿಗಳಾದ ಚೀಯಕ ಪೂವಂಡ, ಸಚಿನ್ ಪೂವಯ್ಯ, ಪೊನ್ನಚೆಟ್ಟಿರ ಪ್ರದೀಪ್ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಅಮೋಘವಾಗಿ ಮೂಡಿಬಂದ ರಾಜ್ಯಮಟ್ಟದ ಮಹಿಳಾ ಕಲಾವಿದೆಯರ ಸಾಧನೆಯ ಸಂಭ್ರಮದ ಸಮ್ಮಿಲನ ‘ಯಕ್ಷ ಸುಮತಿ’
    Next Article ‘ಬಿರುವೆ‌ರ್ ಕುಡ್ಲ’ದಿಂದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಸನ್ಮಾನ
    roovari

    Add Comment Cancel Reply


    Related Posts

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.