Subscribe to Updates

    Get the latest creative news from FooBar about art, design and business.

    What's Hot

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಅರಳು 2024’ – ಮಕ್ಕಳ ವೃತ್ತಿಪರ ರಂಗಭೂಮಿ ಕಾರ್ಯಾಗಾರ ಉದ್ಘಾಟನೆ
    Camp

    ‘ಅರಳು 2024’ – ಮಕ್ಕಳ ವೃತ್ತಿಪರ ರಂಗಭೂಮಿ ಕಾರ್ಯಾಗಾರ ಉದ್ಘಾಟನೆ

    April 12, 2024Updated:April 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಲಾಭಿ (ರಿ) ಮಂಗಳೂರು ಹಾಗೂ ಕೆನರಾ ಕಲ್ಚರಲ್ ಅಕಾಡೆಮಿಯು ಜಂಟಿಯಾಗಿ ಆಯೋಜಿಸಿರುವ ‘ಅರಳು 2024’ರ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 11-04-2024ರಂದು ಮಂಗಳೂರಿನ ಕೆನರಾ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

    ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ರಾಜೇಶ್, ಕಲಾಭಿ ಸಂಸ್ಥೆಯ ಅಧ್ಯಕ್ಷರಾಗಿರುವ ಸುರೇಶ್ ನಾಯ್ಕ್, ಅರೆಹೊಳೆ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಅರೆಹೊಳೆ ಸದಾಶಿವ ರಾವ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ನಿನ ಪಿ. ಆರ್ . ಒ. ಉಜ್ವಲ್ ಮಲ್ಯ ಹಾಗೂ ಕೆನರಾ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಕವಿತಾ ಮೌರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಕಲಾಭಿ ಸಂಸ್ಥೆಯ ಸ್ಥಾಪಕ ಹಾಗೂ ಕೆನರಾ ಕಲ್ಚರಲ್ ಅಕಾಡೆಮಿಯ ಸಂಯೋಜಕರಾದ ಉಜ್ವಲ್ ಯು.ವಿ. ಸಂಸ್ಥೆಯ ಪರಿಚಯವನ್ನು ಮಾಡಿದರು. ‘ಅರಳು 2024’ ಕಾರ್ಯಗಾರದ ನಿರ್ದೇಶಕರಾಗಿರುವ ಭುವನ್ ಮಣಿಪಾಲ್ ವಂದಿಸಿದರು. 10 ದಿನಗಳ ಈ ಕಾರ್ಯಾಗಾರದಲ್ಲಿ ನಿರ್ದೇಶಕರುಗಳಾಗಿ ರಾಜು ಮಣಿಪಾಲ್ ಮತ್ತು ರಮೇಶ್ ಕೆ. ಹಾಗೂ ಸಹ ನಿರ್ದೇಶಕರಾಗಿ ಕೆನರಾ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

    ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಕ್ಕಳನ್ನು ತಂಡಗಳಾಗಿ ವಿಭಜಿಸಿ, ಕಾರ್ಯಾಗಾರದ ನಿರ್ದೇಶಕರುಗಳು ಮಕ್ಕಳನ್ನು ವಿವಿಧ ರಂಗ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಿದರು. ವಿವಿಧ ಆಟಗಳನ್ನು ಆಡುತ್ತಾ, ಕಲಿಯುತ್ತಾ ಮಕ್ಕಳು ಮೊದಲ ದಿನದ ಶಿಬಿರವನ್ನು ಆನಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉದ್ಘಾಟನೆಗೊಂಡ ‘ಬಾಲ ಲೀಲಾ’ ಚಿಣ್ಣರ ಬೇಸಿಗೆ ಶಿಬಿರ
    Next Article ಸಿದ್ದ ಸುಧೆ ವಾರ್ಷಿಕ ಪತ್ರಿಕೆ ಲೋಕಾರ್ಪಣೆ
    roovari

    Add Comment Cancel Reply


    Related Posts

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ನೃತ್ಯ ಸುಧಾರ್ಪಣಂ -2026’ | ಜನವರಿ 11

    January 7, 2026

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.