Subscribe to Updates

    Get the latest creative news from FooBar about art, design and business.

    What's Hot

    ಅಂತರರಾಷ್ಟ್ರೀಯ ಸಂಗೀತ ದಿನ – 2025 ಮತ್ತು ಕಾರ್ಮೆಲಿಟಾರಿಗೆ ಗೌರವ ಘೋಷಣೆ | ಅಕ್ಟೋಬರ್ 2025

    October 4, 2025

    ಮಂಗಳಾದೇವಿಯಲ್ಲಿ ಬಹುಭಾಷಾ ಕವಿಗೋಷ್ಠಿ

    October 4, 2025

    ಬಾಗಲಕೋಟೆಯಲ್ಲಿ ‘ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ -2025’ | ಅಕ್ಟೋಬರ್ 05

    October 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಪಾತಾಳ ಕಲಾ ಮಂಗಳ ಪ್ರಶಸ್ತಿ’ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ | ಏಪ್ರಿಲ್ 26
    Awards

    ‘ಪಾತಾಳ ಕಲಾ ಮಂಗಳ ಪ್ರಶಸ್ತಿ’ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ | ಏಪ್ರಿಲ್ 26

    April 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಿನಂಗಡಿ : ಶ್ರೀ ಪಾತಾಳ ಯಕ್ಷ ಪ್ರತಿಷ್ಠಾನ, ಪಾತಾಳ ಇವರಿಂದ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ‘ಪಾತಾಳ ಕಲಾ ಮಂಗಳ ಪ್ರಶಸ್ತಿ’ಯನ್ನು ಈ ಬಾರಿ ಶ್ರೀ ಸಂಜಯ್ ಕುಮಾ‌ರ್ ಗೋಣಿಬೀಡು, ಶ್ರೀ ಸರವು ರಮೇಶ್ ಭಟ್ ಮತ್ತು ಶ್ರೀ ರಮೇಶ ಕುಲಶೇಖರ ಅವರಿಗೆ ನೀಡಿ ಗೌರವಿಸಲಾಗುವುದೆಂದು ಪ್ರತಿಷ್ಠಾನದ ಸಂಸ್ಥಾಪಕ ಪಾತಾಳ ವೆಂಕಟರಮಣ ಭಟ್ ತಿಳಿಸಿದ್ದಾರೆ. ದಿನಾಂಕ 26-04-2024ರಂದು ರಾತ್ರಿ ಉಪ್ಪಿನಂಗಡಿಯ ಪಾತಾಳ ಶ್ರೀ ದುರ್ಗಾಗಿರಿ ಭಜನಾ ಮಂದಿರದಲ್ಲಿ ಸುಂಕದಕಟ್ಟೆ ಮೇಳದ ವೇದಿಕೆಯಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಪ್ರದೀಪ್ ಕುಮಾರ್ ಕಲ್ಕೂರ, ಶ್ರೀ ಕೆ. ಶ್ರೀಪತಿ ಭಟ್ ಮೂಡಬಿದ್ರೆ, ಶ್ರೀ ಜನಾರ್ಧನ ಹಂದೆ ಮಂಗಳೂರು ಅವರ ಗೌರವ ಉಪಸ್ಥಿತಿಯಲ್ಲಿ ಉಜಿರೆ ಅಶೋಕ್ ಭಟ್ ಅವರ ಅಭಿನಂದನಾ ನುಡಿಯೊಂದಿಗೆ ‘ಪಾತಾಳ ಕಲಾ ಮಂಗಳ ಪ್ರಶಸ್ತಿ’ಯನ್ನು ಪ್ರಧಾನ ಮಾಡಲಾಗುವುದು. ಇದೇ ವೇಳೆ ಸ್ಥಳೀಯ ಸಮಾಜಸೇವಕರಾದ ಕಂಗ್ವೆ ವಿಶ್ವನಾಥ ಶೆಟ್ಟಿ, ಬೆತ್ತೋಡಿ ಲೋಕೇಶ್ ಪೂಜಾರಿ ಮತ್ತು ನೂಜಿ ಪದ್ಮನಾಭ ಗೌಡರಿಗೂ ಗೌರವ ಸಮರ್ಪಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಸುಂಕದಕಟ್ಟೆ ಬಜ್ಪೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ದೇವಿ ಮಹಾತ್ಮೆ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ಸಭಿಕರನ್ನು ರಂಜಿಸಿದ ‘ಸುದರ್ಶನ ಗರ್ವಭಂಗ’ ಯಕ್ಷಗಾನ
    Next Article ರಂಗಚೇತನದ ‘ಚಿತ್ತಾರ ರಂಗ ಶಿಬಿರ’ ಸಮಾಪ್ತಿ
    roovari

    Add Comment Cancel Reply


    Related Posts

    ಬಾಗಲಕೋಟೆಯಲ್ಲಿ ‘ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ -2025’ | ಅಕ್ಟೋಬರ್ 05

    October 4, 2025

    ಬೆಂಗಳೂರು ಮಹಾನಗರದಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ | ಅಕ್ಟೋಬರ್ 08ರಿಂದ 14

    October 4, 2025

    ಹಿರಿಯ ಸಾಹಿತಿ ಸತ್ಯವತಿ ಭಟ್ ಕೊಳಚಪ್ಪು ಇವರಿಗೆ ಕ.ಸಾ.ಪ.ದಿಂದ ಅಭಿನಂದನೆ

    October 4, 2025

    ಶ್ರೀ ಲಕ್ಷ್ಮೀಜನಾರ್ದನ ಸ್ವಾಮಿ ಸಭಾಭವನದಲ್ಲಿ ‘ಯಕ್ಷಗಾನ ತಾಳಮದ್ದಲೆ’ | ಅಕ್ಟೋಬರ್ 07

    October 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.