Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಿರ್ವದ ಸಂತ ಮೇರಿ ಕಾಲೇಜಿನಲ್ಲಿ ‘ವಿಶ್ವ ಪುಸ್ತಕ’ ದಿನಾಚರಣೆ
    Literature

    ಶಿರ್ವದ ಸಂತ ಮೇರಿ ಕಾಲೇಜಿನಲ್ಲಿ ‘ವಿಶ್ವ ಪುಸ್ತಕ’ ದಿನಾಚರಣೆ

    May 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿರ್ವ: ಸಂತ ಮೇರಿ ಕಾಲೇಜು ಶಿರ್ವ ಇಲ್ಲಿನ ಗ್ರಂಥಾಲಯ ವಿಭಾಗ ಮತ್ತು IQAC ಇವರ ಸಹಯೋಗದೊಂದಿಗೆ “ವಿಶ್ವ ಪುಸ್ತಕ ದಿನಾಚರಣೆ”ಯನ್ನು ದಿನಾಂಕ 23-04-2024ರಂದು ಆಚರಿಸಲಾಯಿತು.
    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾರ್ವಜನಿಕ ಗ್ರಂಥಾಲಯ ಕಾಪು ಪುರಸಭೆ ಇದರ ಗ್ರಂಥಾಲಯ ಮೇಲ್ವಿಚಾರಕಿಯಾದ ಶ್ರೀಮತಿ ಪೂರ್ಣಿಮಾ ಮಾತನಾಡಿ “ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು. ಇಂದು ಯಾರು ಕದಿಯಲು ಸಾಧ್ಯವಿಲ್ಲದ ಸಂಪತ್ತು ಇದ್ದರೆ ಅದು ಜ್ಞಾನ ಮಾತ್ರ. ‘ಮೈಯಲ್ಲಿ ಹರಿದ ಬಟ್ಟೆ ಇದ್ದರೂ ಚಿಂತೆಯಿಲ್ಲ, ಆದರೆ ಕೈಯಲ್ಲಿ ಒಂದು ಪುಸ್ತಕವಿರಲಿ’ ಎಂಬ ಅಂಬೇಡ್ಕರ್ ಅವರ ಇದೊಂದೇ ಮಾತು ಪುಸ್ತಕದ ಮಹತ್ವವನ್ನು ತಿಳಿಸಿಕೊಡುತ್ತದೆ.” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅತ್ಯುತ್ತಮ ಗ್ರಂಥಾಲಯ ಬಳಕೆದಾರರಿಗೆ ಬಹುಮಾನವನ್ನು ನೀಡಲಾಯಿತು.
    ತೃತೀಯ ಬಿ.ಎ ವಿದ್ಯಾರ್ಥಿನಿಯಾದ ಕುಮಾರಿ ಕೌಶಲ್ಯ, ತೃತೀಯ ಬಿ. ಸಿ. ಎ. ವಿದ್ಯಾರ್ಥಿನಿಯಾದ ಕುಮಾರಿ ಹೇಮಶ್ರೀ ಮತ್ತು ತೃತೀಯ ಬಿ. ಕಾಂ. ವಿದ್ಯಾರ್ಥಿನಿಯಾದ ಕುಮಾರಿ ಅಫ್ಸಾನ ಬಹುಮಾನವನ್ನು ಪಡೆದರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೊನಿಸ್‌ ಮಾತನಾಡಿ “ಮನೆಗಳಲ್ಲಿ ಶೋಕಿಗಾಗಿ ಪುಸ್ತಕವನ್ನು ಸಂಗ್ರಹಿಸಿದರೆ ಸಾಲದು, ಕೊನೆಯ ಪಕ್ಷ ತಿಂಗಳಿಗೆ ಒಂದು ಪಠ್ಯಕ್ಕೆ ಹೊರತಾದ ಪುಸ್ತಕವನ್ನು ವಿದ್ಯಾರ್ಥಿಗಳು ಓದಬೇಕು. ಓದು ನಮ್ಮನ್ನು ಬೆಳೆಸುತ್ತದೆ.” ಎಂದರು.
    ಕಾಲೇಜಿನ ಗ್ರಂಥಪಾಲಕರಾದ ಶ್ರೀಮತಿ ತನುಜಾ ಎನ್. ಸುವರ್ಣ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು. ಕಾರ್ಯಕ್ರಮದಲ್ಲಿ ತೃತೀಯ ಬಿ.ಸಿ.ಎ. ವಿದ್ಯಾರ್ಥಿನಿ ಕುಮಾರಿ ಅನಘ ಸ್ವಾಗತಿಸಿ, ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಅಫ್ಸಾನ ನಿರ್ವಹಿಸಿ, ತೃತೀಯ ಬಿ. ಎ. ವಿದ್ಯಾರ್ಥಿ ಶ್ರೀ ಸಮೀರ್ ಮಾಹಜೀ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರಿಗೆ ಪ್ರೆಸ್‌ಕ್ಲಬ್ ಗೌರವ
    Next Article ಮಧೂರು ವೆಂಕಟಕೃಷ್ಣರಿಗೆ ಕಸಾಪ ಗಡಿನಾಡ ಘಟಕದಿಂದ ಅಭಿನಂದನೆ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.