Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡ್ರಾಮಾ ಜೂನಿಯರ್ಸ್‌ ಸೀಸನ್‌ 5ರ ವಿನ್ನರ್ ರಿಷಿಕಾ ಕುಂದೇಶ್ವರ
    Awards

    ಡ್ರಾಮಾ ಜೂನಿಯರ್ಸ್‌ ಸೀಸನ್‌ 5ರ ವಿನ್ನರ್ ರಿಷಿಕಾ ಕುಂದೇಶ್ವರ

    May 4, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಜೀ ಕನ್ನಡದ ಡ್ರಾಮಾ ಜೂನಿಯರ್ಸ್‌ ಸೀಸನ್‌ 5ರ ವಿನ್ನರ್‌ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಇವರು ಕುಣಿಗಲ್‌ನ ವಿಷ್ಣು ಜತೆ ಜಂಟಿಯಾಗಿ ಟ್ರೋಫಿ ಗೆದ್ದುಕೊಂಡಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ, ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳೊಂದಿಗೆ ರಿಷಿಕಾ ಫೈನಲ್‌ಗೆ ಲಗ್ಗೆ ಹಾಕಿದ್ದರು.

    31 ಜಿಲ್ಲೆಗಳಿಂದ ಸಹಸ್ರಾರು ಬಾಲ ಪ್ರತಿಭೆಗಳ ಶೋಧ ನಡೆಸಿ ಮೇಗಾ ಅಡಿಶನ್‌ ನಲ್ಲಿ 24 ಮಕ್ಕಳನ್ನು ಆಯ್ಕೆ ಮಾಡಲಾಗಿತ್ತು. 22 ವಾರದಲ್ಲಿ 24 ಮಕ್ಕಳು ಬರೋಬ್ಬರಿ 200ಕ್ಕೂ ಅಧಿಕ ಸ್ಕಿಟ್‌ಗಳನ್ನು ಮಾಡಿ ಮುಗಿಸಿದ್ದರು. ವಿಜೇತರಿಗೆ 30×40 ಸೈಟ್‌ ಬಹುಮಾನವಾಗಿ ಬಂದರೆ, ಮೊದಲ ರನ್ನರ್‌ ಅಪ್‌ ಗೆ 3 ಲಕ್ಷ ನಗದು, ಎರಡನೇ ರನ್ನರ್‌ ಅಪ್ ಗೆ 1 ಲಕ್ಷ ಬಹುಮಾನ ನೀಡಲಾಗಿದೆ. ಕಲರ್‌ಫುಲ್‌ ಕಾರ್ಯಕ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌, ಹಿರಿಯ ನಟಿ ಲಕ್ಷ್ಮೀ ಮತ್ತು ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಎಂದಿನಂತೆ ತೀರ್ಪುಗಾರರಾಗಿ ವೇದಿಕೆ ಮೇಲಿದ್ದರು. ಅರುಣ್‌ ಸಾಗರ್‌ ಮತ್ತು ರಾಜು ತಾಳಿಕೋಟೆ ಮಕ್ಕಳನ್ನು ತಿದ್ದಿ ತೀಡಿದರು.

    ರಿಷಿಕಾ ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ ದಂಪತಿಯ ಸುಪುತ್ರಿ. ಮೂಲತಃ ಕಾರ್ಕಳ ಕುಂದೇಶ್ವರದ ರಿಷಿಕಾ, ಮಂಗಳೂರು ಅಶೋಕನಗರ ಎಸ್‌ಡಿಎಂ ಸ್ಕೂಲ್‌ ವಿದ್ಯಾರ್ಥಿನಿ. ಬಾಲಯಕ್ಷಕೂಟ ಹಾಗೂ ಯಕ್ಷಮಾಧ್ಯಮ ತಂಡದ ಸದಸ್ಯೆ. ಮೆಗಾಅಡಿಶನ್‌ನಲ್ಲಿ ದಾಕ್ಷಾಯಿಣಿ ಮೂಲಕ ಮೂವರು ತೀರ್ಪುಗಾರರ ಒಕ್ಕೊರಲ ಮೆಚ್ಚುಗೆ ಗಳಿಸಿ 24 ಮಂದಿ ಸ್ಪರ್ಧಿಗಳಲ್ಲಿ ಒಬ್ಬಳಾಗಿ ಆಯ್ಕೆಯಾಗಿದ್ದಳು. ದೇವರ ಪಾತ್ರಗಳಲ್ಲಿ ಸಿದ್ಧಿ ತೋರಿದ್ದ ರಿಷಿಕಾ ವಚನಕಾರ ಅಲ್ಲಮಪ್ರಭು ನಾಟಕದಲ್ಲಿ ಭಕ್ತಿ ಭಾವನಾತ್ಮಕ ವಚನಗಳನ್ನು ಹೇಳುತ್ತಾ ಭಕ್ತಿಯ ಪರಾಕಾಷ್ಠೆ ಪ್ರದರ್ಶಿಸಿದ್ದಳು. ತೀರ್ಪುಗಾರರು ಸ್ಟ್ಯಾಂಡಿಂಗ್‌ ಒವೇಶನ್‌ ನೀಡಿ, ಎಲ್ಲರೂ ವೇದಿಕೆಗೆ ಬಂದು ವಚನಗಳನ್ನು ಹಾಡಿದ್ದರು.

    ದ.ರಾ. ಬೇಂದ್ರೆ ನಾಟಕದಲ್ಲಿ ಪುಟ್ಟ ಮಗುವಿನ ಸಾವಿನ ನೋವೇ ಹಾಡಾಗಿ ಹೊರಬರುವ ಹೃದಯ ಕಲಕುವ ಭಾವಾಭಿನಯ, ದಂಡನೆಗೆ ಒಳಗಾಗುವ ಏಸು ಕ್ರಿಸ್ತನ ಪಾತ್ರ, ಬೋಧನೆಗಳು, ಶಿವನ ಉಗ್ರರೂಪ, ದಾಕ್ಷಾಯಿಣಿಯ ಆತ್ಮಾಹುತಿ, ಶಿವಸತಿ ಪಾರ್ವತಿಯ ಪ್ರೇಮ ನಿವೇದನೆ, ಪೌಂಡ್ರಕ, ಪರಶುರಾಮನ ಉಗ್ರರೂಪ, ಭಕ್ತ ಆಂಜನೇಯನ ಭಕ್ತಿ ಪರವಶತೆಯ ಅಭಿನಯವು ತೀರ್ಪುಗಾರರು ಮತ್ತು ವೀಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿತ್ತು.

    ಯಕ್ಷಗಾನ ಮತ್ತು ಶಾಸ್ತ್ರೀಯ ಸಂಗೀತದ ವಿದ್ಯಾರ್ಥಿ ರಿಷಿಕಾ, ಕಂಚಿನ ಕಂಠದ ಮೂಲಕ ಶೋ ಉದ್ದಕ್ಕೂ ಹರಿಕಥೆ, ಸಾಂಪ್ರದಾಯಿಕ ಯಕ್ಷಗಾನದ ಭೀಮ, ಹಗಲುವೇಷದ ರಾಮ, ದೊಡ್ಡಾಟದ ಜಮದಗ್ನಿ ಹೀಗೆ ಜನಪದ, ಶಾಸ್ತ್ರೀಯ ವಿಭಾಗದಲ್ಲಿ ಸೈ ಎನಿಸಿಕೊಂಡಿದ್ದಳು. ಜಲಿಯನ್‌ ವಾಲಾಭಾಗ್‌ನಲ್ಲಿ ದೇಶ ಭಕ್ತರನ್ನು ಕೊಂದ ಕ್ರೂರಿ ಜನರಲ್‌ ಡಯರ್‌, ಹೊಯ್ಸಳ ವಂಶ ಸ್ಥಾಪಕ ಸಳದ ಕೆಚ್ಚು, ದೇಶಭಕ್ತ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್, ದಾಸ ಶ್ರೇಷ್ಠ ಪುರಂದರ ದಾಸ, ಯಕ್ಷಪ್ರಶ್ನೆಗೆ ಉತ್ತರಿಸುವ ಧರ್ಮರಾಯ ಪಾತ್ರಗಳು ಸದಾ ಕಾಲ ನೆನಪಲ್ಲಿ ಉಳಿಯುವಂತೆ ಮಾಡಿದೆ. ಬಾಲ್ಡಿ ಇನ್‌ಸ್ಪೆಕ್ಟರ್‌, ಝೂ ಲೇಡಿ ಆಫೀಸರ್‌, ಬೆಗ್ಗರ್‌ ಪೇರೆಂಟ್ಸ್, ಸ್ವಯಂವರ ಕಾಮಿಡಿ ಡ್ರಾಮಗಳಲ್ಲಿ ನಗೆಯ ಹೊನಲು ಹರಿಸಿ, ಜನಮನ ಮೆಚ್ಚುಗೆ ಪಡೆದಿದ್ದಳು.

    ತಂದೆ ಜತೆ ಯಕ್ಷಗಾನ, ಯಕ್ಷರೂಪಕ, ನಾಟಕಗಳಲ್ಲಿ ಅಭಿನಯಿಸುವ ರಿಷಿಕಾ, ಕೃಷ್ಣರಾಜ ನಂದಳಿಕೆ ಅವರಿಂದ ಕರ್ನಾಟಿಕ್‌ ಸಂಗೀತ, ಎಲ್ಲೂರು ರಾಮಚಂದ್ರ ಭಟ್‌ ಅವರಲ್ಲಿ ತೆಂಕುತಿಟ್ಟು ಯಕ್ಷಗಾನ ಅಭ್ಯಾಸ ಮಾಡುತ್ತಿದ್ದಾಳೆ. ಹಾಡು ನೀ ಹಾಡು ಗಾಯನ ರಿಯಾಲಿಟಿ ಶೋದಲ್ಲಿ ಸೆಕೆಂಡ್‌ ರನ್ನರಪ್‌ ಪ್ರಶಸ್ತಿ ಗೆದ್ದಿರುವ ರಿಷಿಕಾ, ವಿಶ್ವಕನ್ನಡಿಗ ಮಕ್ಕಳಿಗೆ ನಡೆದ ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಪ್ರತಿಭಾ ಕಾರಂಜಿಯ ಭಗವದ್ಗೀತೆ ಕಂಠಪಾಠ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಳು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ವಿಶ್ವವಿದ್ಯಾನಿಲಯದಲ್ಲಿ ಕವಿ ಸಮಯ ಕಾರ್ಯಕ್ರಮ
    Next Article ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಆಂಗಿಕ ಶೆಟ್ಟಿ ಕುದ್ಕಾಡಿ ಇವರ ನೃತ್ಯ ಪ್ರದರ್ಶನ | ಮೇ 6
    roovari

    Add Comment Cancel Reply


    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.