Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಕ್ಷೇತ್ರ ಕದ್ರಿಯಲ್ಲಿ ‘ಸರಯೂ ಸಪ್ತಾಹ – 2024’ | ಮೇ 25ರಿಂದ 31
    Felicitation

    ಶ್ರೀ ಕ್ಷೇತ್ರ ಕದ್ರಿಯಲ್ಲಿ ‘ಸರಯೂ ಸಪ್ತಾಹ – 2024’ | ಮೇ 25ರಿಂದ 31

    May 21, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕೋಡಿಕಲ್‌ನ ಸರಯೂ ಬಾಲ ಯಕ್ಷ ವೃಂದದ ವತಿಯಿಂದ ಕದ್ರಿ ದೇವಳದ ಸಹಕಾರದಲ್ಲಿ 24ನೇ ವರ್ಷದ ‘ಸರಯೂ ಸಪ್ತಾಹ – 2024’ ಸಾಧಕ ಸಮ್ಮಾನ, ಬಯಲಾಟಗಳು ಮತ್ತು ಮಹಿಳಾ ತಾಳಮದ್ದಳೆ ಕಾರ್ಯಕ್ರಮಗಳನ್ನು ದಿನಾಂಕ 25-05-2024ರಿಂದ 31-05-2024ರವರೆಗೆ ಸಂಜೆ 5ರಿಂದ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಳದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 25-05-2024ರಂದು ಸಂಜೆ 5 ಗಂಟೆಗೆ ದೇರಳಕಟ್ಟೆಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ರವೀಂದ್ರ ಶೆಟ್ಟಿ ಉಳಿದೊಟ್ಟು ಇವರು ಸಪ್ತಾಹ ಉದ್ಘಾಟಿಸಲಿದ್ದಾರೆ. ಅಪರಾಹ್ನ 2.30ಕ್ಕೆ ಶ್ರೀ ದೇವಿ ಮಹಿಷ ಮರ್ದಿನಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

    ದಿನಾಂಕ 26-05-2024ರಂದು ಬೆಳಗ್ಗೆ 9ರಿಂದ ‘ಮಹಿಳಾ ಯಕ್ಷ ಸಂಭ್ರಮ’ ನಡೆಯಲಿದೆ. ಕೋಡಿಕಲ್‌ನ ಸರಯೂ ಮಹಿಳಾ ವೃಂದದಿಂದ ‘ವೀರ ವೀರೇಶ’, ಜಪ್ಪು ಶ್ರೀ ರಾಮ ಕ್ಷತ್ರಿಯ ಮಹಿಳಾ ವೃಂದದಿಂದ ‘ಶ್ರೀಕೃಷ್ಣ ಲೀಲಾರ್ಣವ’, ಸುರತ್ಕಲ್‌ನ ಯಕ್ಷಕಲಾ ಮಹಿಳಾ ತಂಡದಿಂದ ‘ಸುಧನ್ವ ಮೋಕ್ಷ’, ಕದ್ರಿ ಯಕ್ಷ ಮಂಜುಳಾ ತಂಡದಿಂದ ‘ಅತಿಕಾಯ ಮೋಕ್ಷ’ ಪ್ರಸಂಗದ ತಾಳಮದ್ದಳೆ ಪ್ರಸ್ತುತಗೊಳ್ಳಲಿದೆ. ಸಪ್ತಾಹದ ಭಾಗವಾಗಿ ‘ಗುರುದಕ್ಷಿಣ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

    ದಿನಾಂಕ 27-05-2024ರಂದು ಸಂಜೆ 5-00 ಗಂಟೆಗೆ ‘ವೀರ ಶತಕಂಠ’, ದಿನಾಂಕ 28-05-2024ರಂದು ‘ರತಿ ಕಲ್ಯಾಣ’, ದಿನಾಂಕ 29-05-2024ರಂದು ‘ರಾಜಾ ಸೌದಾಸ’, ದಿನಾಂಕ 30-05-2024ರಂದು ‘ತುಳುನಾಡ ಬಲಿಯೇಂದ್ರೆ’, ದಿನಾಂಕ 31-05-2024ರಂದು ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಬಯಲಾಟ ನಡೆಯಲಿದೆ.

    ಪ್ರತೀ ದಿನ ಸಾಧಕರಿಗೆ ಸಮ್ಮಾನ ನೆರವೇರಲಿದ್ದು, ಮೊದಲ ದಿನ ಸಾಂಸ್ಥಿಕ ನೆಲೆಯಲ್ಲಿ ನಗರದ ವಿ.ಟಿ. ರಸ್ತೆಯ ಚೇತನಾ ಬಾಲ ವಿಕಾಸ ಕೇಂದ್ರ, ಉಳಿದ ದಿನಗಳಲ್ಲಿ ಪಟ್ಲಗುತ್ತು ಮಹಾಬಲ ಶೆಟ್ಟಿ, ಡಾ. ಪೂವಪ್ಪ ಶೆಟ್ಟಿ ಅಳಿಕೆ, ಅರುಣ್ ಕುಮಾರ್, ದೇವಿಪ್ರಕಾಶ್ ರಾವ್ ಕಟೀಲು, ಮಹಾಬಲೇಶ್ವರ ಭಟ್ ಭಾಗಮಂಡಲ, ಪ್ರಶಾಂತ್ ಕೋಳ್ಯೂರು, ಕೆರೆಮನೆ ನರಸಿಂಹ ಹೆಗ್ಡೆ, ಕಥಾ ಸಂಗ್ರಹಕಾರ ಮಧುಕರ ಭಾಗವತ್ ಇವರುಗಳಿಗೆ ಸಮ್ಮಾನ ನೆರವೇರಲಿರುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಸ್ವಾಭಿಮಾನಿ ಪುಸ್ತಕ ಪ್ರಶಸ್ತಿಗೆ ಆಯ್ಕೆ
    Next Article ಸಮಾರೋಪಗೊಂಡ ‘ಮಂಚಿ ನಾಟಕೋತ್ಸವ’
    roovari

    Add Comment Cancel Reply


    Related Posts

    ಪುತ್ತೂರಿನ ವಿವೇಕಾನಂದ ಶಾಲೆಯಲ್ಲಿ ‘ನೃತ್ಯೋತ್ಕ್ರಮಣ’ ರಂಗಪ್ರವೇಶ ಸ್ಮೃತಿ ಸಂಧ್ಯಾ | ಜನವರಿ 11

    January 10, 2026

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.