Subscribe to Updates

    Get the latest creative news from FooBar about art, design and business.

    What's Hot

    ‘ಶಾಂತಕವಿ ಸಕ್ಕರಿ ಬಾಳಾಚಾರ್ಯ ಶಾಂತರಂಗ ನಾಟಕಕಾರ ಪ್ರಶಸ್ತಿ’ಗೆ ನಾಟಕ ಕೃತಿಗಳ ಆಯ್ಕೆ

    January 13, 2026

    ‘ಮಂತ್ರ ಪುಷ್ಪ’ – ಕಥಾ ಸಂಕಲನ ‘ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ’ಗೆ ಆಯ್ಕೆ

    January 13, 2026

    ಕಾಸರಗೋಡಿನ ಕರಂದಕ್ಕಾಡಿನಲ್ಲಿ ‘ಸಂವಾದ ಕಾರ್ಯಕ್ರಮ’ | ಜನವರಿ 16

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ
    Camp

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

    May 23, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಗುತ್ತಿಗಾರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ದಿನಾಂಕ 02-05-2024ರಂದು ಪ್ರಾರಂಭವಾಗಿ 15 ದಿನಗಳ ಕಾಲ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮವು ದಿನಾಂಕ 16-05-2024ರಂದು ನಡೆಯಿತು.

    ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಂದ ಬೇಸಿಗೆಯಲ್ಲಿ ಮಕ್ಕಳ ಆರೋಗ್ಯ, ಅಭಿನಯ ಗೀತೆ/ನೃತ್ಯ, ನಿಧಿ ಶೋಧ, ಚಿತ್ರಕಲೆ, ವಿನೋದ ವಿಜ್ಞಾನ, ಮಕ್ಕಳು ಮತ್ತು ಪ್ರಕೃತಿ ಬಾಂಧವ್ಯ, ಯೋಗ ಮತ್ತು ಧ್ಯಾನ, ಮೋಜಿನ ಗಣಿತ, ಪರಿಸರ ಸ್ವಚ್ಛತಾ ಗೀತೆ, ಚದುರಂಗ ಆಟ, ಸ್ವರಚಿತ ಕವನ/ಕಥೆ, ಕಸದಿಂದ ರಸ, ಅರಿವು ಮೂಡಿಸುವ ಚಟುವಟಿಕೆಗಳು ಮಾತ್ರವಲ್ಲದೆ ಅಧ್ಯಯನ ಪ್ರವಾಸದಲ್ಲಿ ಸುಬ್ರಹ್ಮಣ್ಯ ಪೋಲೀಸ್ ಠಾಣೆ, ಸುಬ್ರಹ್ಮಣ್ಯ ವಲಯ ಅರಣ್ಯ ಕಛೇರಿ, ಸಾಲು ಮರದ ತಿಮ್ಮಕ್ಕ ಪಾರ್ಕ್, ಕಲ್ಲಾಜೆ ನರ್ಸರಿ ವೀಕ್ಷಣೆ ಮಾಡಲಾಯಿತು.

    ಅಧ್ಯಯನ ಪ್ರವಾಸಕ್ಕೆ ಸುಬ್ರಹ್ಮಣ್ಯ ಆರಕ್ಷಕ ಠಾಣಾಧಿಕಾರಿಗಳಾದ ಕಾರ್ತಿಕ್ ಹಾಗೂ ಸಿಬ್ಬಂದಿ ವರ್ಗದವರು, ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿಗಳಾದ ವಿಮಲ್ ಬಾಬು ಹಾಗೂ ಸಿಬ್ಬಂದಿ ವರ್ಗದವರು, ಮನೋಜ್ ಕುಮಾರ್, ಸದಾಶಿವ ಸಿಂದಿಗಾ‌ರ್ ಅವರು ಸಹಕರಿಸಿದರು.

    15 ದಿವಸಗಳ ಕಾಲ ನಡೆದ ಈ ಬೇಸಿಗೆ ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಗುರುಪ್ರಸಾದ್, ಚೈತನ್ಯ ವಳಲಂಬೆ, ಜೀವಿತಾ, ಪೂಜಾ, ಸುಬ್ರಹ್ಮಣ್ಯ ಏನೆಕಲ್ಲು, ಸವಿತಾ ಕುಮಾರಿ, ಅರವಿಂದ ಕುಡ್ಲ, ಸಂತೋಷ್ ಮುಂಡೋಕಜೆ, ಪೂರ್ಣಿಮಾ, ಕರ್ಣ ಸಾಲ್ತಾಡಿ, ರಮೇಶ್, ಯೋಗೀಶ್ ಹೊಸೊಳಿಕೆ, ಲಿಖಿತಾ ಹೊಸೊಳಿಕೆ ಹಾಗೂ ಎನ್.ಆರ್.ಎಲ್.ಎಂ. ತಂಡದವರು ಉಪಸ್ಥಿತರಿದ್ದರು.

    ಸಮಾರೋಪ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕರು ಹಾಗೂ ಹಿಂದಿ ಪಂಡಿತರಾದ ಶ್ರೀಮತಿ ರಾಜೇಶ್ವರಿ ಸಿ.ವಿ. ಉಪಸ್ಥಿತರಿದ್ದು, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಕ.ಸಾ.ಪ. ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಉಪಸ್ಥಿತರಿದ್ದರು.

    ಬೇಸಿಗೆ ಶಿಬಿರದ ಸಂಪನ್ಮೂಲ ವ್ಯಕ್ತಿಗಳಿಗೆ ಇಲಾಖೆಯ ವತಿಯಿಂದ ಅಭಿನಂದನಾ ಪತ್ರ ನೀಡಲಾಯಿತು. ಕ.ಸಾ.ಪ. ನಿರ್ದೇಶಕ ಯೋಗೀಶ್ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕರಾದ ಅಭಿಲಾಷಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು. 40 ಶಿಬಿರಾರ್ಥಿಗಳು, ಪೋಷಕರು ಹಾಗೂ ಸಂಜೀವಿನಿ ಸಂಘದವರು ಪಾಲ್ಗೊಂಡು ಬೇಸಿಗೆ ಶಿಬಿರವನ್ನು ಯಶಸ್ವಿಗೊಳಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಫೆಸ್ಟ್ ‘ಏಕತ್ರ -2024’
    Next Article ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ ಹಾಗೂ ತಾಳಮದ್ದಳೆ ಕಾರ್ಯಕ್ರಮ | ಮೇ 24
    roovari

    Add Comment Cancel Reply


    Related Posts

    ವಿಶ್ವ ಕೊಂಕಣಿ ಕೇಂದ್ರದಲ್ಲಿ ವಿದ್ಯಾರ್ಥಿವೇತನ ವಿತರಣೆ ಹಾಗೂ ‘ವಿಕಾಸ-2025’ ಕೌಶಲ್ಯ ತರಬೇತಿ

    December 30, 2025

    ಪರ್ಕಳದ ಸರಿಗಮ ಭಾರತಿ ಸಂಗೀತ ವಿದ್ಯಾಲಯದಲ್ಲಿ ‘ಸಂಗೀತ ಶಿಬಿರ’ | ಡಿಸೆಂಬರ್ 29ರಿಂದ 31

    December 22, 2025

    ಸವದತ್ತಿ ನಾಟಕ ಮನೆಯಲ್ಲಿ ‘ರಂಗ ತರಬೇತಿ ಶಿಬಿರ’ | ಡಿಸೆಂಬರ್ 01ರಿಂದ ಜನವರಿ 24

    December 1, 2025

    ಪರ್ಕಳದ ಶಾಲೆಯಲ್ಲಿ ನಾಟಕ ರಂಗ ತರಬೇತಿ ಶಿಬಿರ | ನವೆಂಬರ್ 23

    November 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.