Subscribe to Updates

    Get the latest creative news from FooBar about art, design and business.

    What's Hot

    ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವಿಶ್ವನೇತ ಡಿ. ಇವರ ಭರತನಾಟ್ಯ ರಂಗಪ್ರವೇಶ

    February 27, 2026

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸಮಾರೋಪಗೊಂಡ ‘ಸರಯೂ ಸಪ್ತಾಹ’
    Yakshagana

    ಸಮಾರೋಪಗೊಂಡ ‘ಸರಯೂ ಸಪ್ತಾಹ’

    June 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಕೋಡಿಕಲ್ಲಿನ ಸರಯೂ ಮಕ್ಕಳ ಮೇಳದ ‘ಸರಯೂ ಸಪ್ತಾಹ-2024’ ಸಾಧಕ ಸನ್ಮಾನ, ಬಯಲಾಟಗಳು ಮತ್ತು ಮಹಿಳಾ ತಾಳ ಮದ್ದಳೆ ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 31-05-2024ರಂದು ಮಂಗಳೂರಿನ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಳದ ರಾಜಾಂಗಣದಲ್ಲಿ ನಡೆಯಿತು.


    ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣ ಮಾಡಿದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು “ವಿಶ್ವವ್ಯಾಪಕವಾಗಿರುವ ಹಾಗೂ ನೈತಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಕಾರ್ಯವನ್ನು ಸಾವಿರ ವರ್ಷಗಳಿಂದ ನಿರಂತರವಾಗಿ ಮಾಡಿಕೊಂಡು ಬರುತ್ತಿರುವ ಯಕ್ಷಗಾನವನ್ನು ನಮ್ಮ ಮುಂದಿನ ಪೀಳಿಗೆಗೆ ಸಕಾರಾತ್ಮಕವಾಗಿ ತಲಪಿಸೋಣ.” ಎಂದು ಶುಭ ಹಾರೈಸಿದರು.

    ಯಕ್ಷಗಾನ ಭಾಗವತ ಹಾಗೂ ಕಲಾವಿದರಾದ ತೋನ್ಸೆ ಪುಷ್ಕಳ ಕುಮಾರ್ ಪ್ರಸ್ತಾವಿಸಿದರು. ಕಲಾವಿದ ಡಾ. ಪೂವಪ್ಪ ಶೆಟ್ಟಿ ಅಳಿಕೆ ಹಾಗೂ ಹವ್ಯಾಸಿ ಭಾಗವತ ದೇವಿ ಪ್ರಕಾಶ್ ರಾವ್ ಕಟೀಲ್ ಇವರನ್ನು ಗೌರವಿಸಲಾಯಿತು. ಕೃಪಾ ಖಾರ್ವಿ ಹಾಗೂ ಶೋಭಾ ಪೇಜಾವರ ಸನ್ಮಾನ ಪತ್ರ ವಾಚಿಸಿದರು. ಕೇಶವ ಹೆಗ್ಡೆ, ಡಾ. ಪ್ರಖ್ಯಾತ್ ಶೆಟ್ಟಿ, ಮಾಧವ ನಾವಡ, ವೇದ ಮೂರ್ತಿ ಡಿ. ವಿ. ರಮೇಶ್ ತಂತ್ರಿ, ಲಿಖಿತಾ, ಧೃಶಾಲ್, ಪ್ರತೀಕ್ ರಾವ್, ಕಾವ್ಯಾ ಹಾಗೂ ಕೃತಿ ಉಪಸ್ಥಿತರಿದ್ದರು.

    ಸುಧಾಕರ ರಾವ್ ಪೇಜಾವರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ, ಸಂಸ್ಥೆಯ ಅಧ್ಯಕ್ಷ ವರ್ಕಾಡಿ ಮಧುಸೂದನ ಅಲೆವೂರಾಯ ಧನ್ಯವಾದವಿತ್ತರು. ಸಭಾ ಕಾರ್ಯಕ್ರಮದ ಬಳಿಕ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ನಾರಾಯಣ ಕಂಗಿಲರ ‘ಶಬ್ದ ಮತ್ತು ನೂಪುರ’
    Next Article ಯಕ್ಷಗಾನ ನಾಟ್ಯ ಮತ್ತು ಹಿಮ್ಮೇಳ ತರಗತಿ
    roovari

    Add Comment Cancel Reply


    Related Posts

    ಮಂಗಳೂರು ವಿ.ವಿ.ಯ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರಕಟ

    February 26, 2026

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ

    February 25, 2026

    ಯಶಸ್ವೀ ಕಲಾವೃಂದದ ವಾರ್ಷಿಕೋತ್ಸವ ಸಮಾರಂಭ

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.