Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ ಕೇಂದ್ರ ಸಮಿತಿ ಅಸ್ತಿತ್ವಕ್ಕೆ
    Yakshagana

    ‘ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ ಕೇಂದ್ರ ಸಮಿತಿ ಅಸ್ತಿತ್ವಕ್ಕೆ

    June 22, 2024Updated:June 21, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಗಾನ ಚಿಕ್ಕಮೇಳ ತಿರುಗಾಟದಲ್ಲಿ ಶಿಸ್ತು ಮೂಡಿಸುವ ಉದ್ದೇಶದೊಂದಿಗೆ ‘ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ ಕೇಂದ್ರ ಸಮಿತಿ ದ .ಕ. ಜಿಲ್ಲೆ’ ಹೆಸರಿನ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ.

    ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ ಕೇಂದ್ರ ಸಮಿತಿಯ ಅಧ್ಯಕ್ಷ ಸರಪಾಡಿ ಅಶೋಕ ಶೆಟ್ಟಿ ದಿನಾಂಕ 17-06-2024ರ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ “ಈ ಹಿಂದೆ ಚಿಕ್ಕಮೇಳಗಳ ತಿರುಗಾಟದ ಸಂದರ್ಭದಲ್ಲಿ ಶಿಸ್ತು ಉಲ್ಲಂಘನೆ, ಯಕ್ಷಗಾನ ಕಲಿಯದವರಿಂದ ಚಿಕ್ಕಮೇಳ ತಿರುಗಾಟ ಹೀಗೆ ಅನೇಕ ದೂರುಗಳು ಕೇಳಿಬಂದಿತ್ತು. ಇದೇ ಕಾರಣಕ್ಕೆ ಸಮಾನ ಮನಸ್ಕರು ಒಟ್ಟುಸೇರಿ ಚಿಕ್ಕಮೇಳಗಳ ಒಕ್ಕೂಟ ರಚಿಸಿದ್ದೇವೆ. ಈಗಾಗಲೇ 45 ತಂಡಗಳು ಒಕ್ಕೂಟದಲ್ಲಿ ನೋಂದಣಿ ಮಾಡಿಕೊಂಡಿವೆ. ಇನ್ನೂ ಕೆಲವು ತಂಡಗಳು ನೋಂದಣಿ ಮಾಡಿಕೊಳ್ಳಲಿವೆ.” ಎಂದರು.
    ಚಿಕ್ಕಮೇಳಗಳು ನೋಂದಣಿಗೊಂಡ ನಂತರ ತಂಡಗಳು ಒಕ್ಕೂಟದ ಅಧಿಕೃತ ಪರವಾನಿಗೆ ಪಡೆದು ತಿರುಗಾಟ ನಡೆಸಲಿದ್ದಾರೆ. ಸಂಜೆ ಘಂಟೆ 6.00 ರಿಂದ ರಾತ್ರಿ 10.30ರ ವರೆಗೆ ಕನ್ನಡ ಅಥವಾ ತುಳುವಿನ ಯಾವುದಾದರೂ ಒಳ್ಳೆಯ ಸಂದೇಶ ಇರುವ ಸನ್ನಿವೇಶದ ಪ್ರದರ್ಶನವನ್ನು ಪ್ರದರ್ಶಿಸಲಿದೆ. ಈ ಪ್ರದರ್ಶನವು ಗರಿಷ್ಠ 20 ನಿಮಿಷ ಮೀರದಂತೆ ನಡೆಯಲಿದೆ.

    ಹಿಂದೂ ಹಬ್ಬಗಳ ಸಂದರ್ಭದಲ್ಲಿ ಯಕ್ಷಗಾನ ವೇದಿಕೆಯ ಪ್ರದರ್ಶನ ಹೊರತುಪಡಿಸಿ, ಇತರ ಹಬ್ಬಗಳಾದ ನವರಾತ್ರಿ, ದಸರಾ, ಗಣೇಶೋತ್ಸವ, ಅಷ್ಟಮಿ ಇತ್ಯಾದಿ ಸಂದರ್ಭಗಳಲ್ಲಿ ಯಕ್ಷಗಾನದ ವೇಷಭೂಷಣ ಧಾರಣೆ ಮಾಡಿ ಭಿಕ್ಷಾಟನೆ ಮಾಡುವುದನ್ನು ನಿಷೇಧಿಸುವಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
    ಪ್ರತಿ ಮನೆಯವರು ಒಕ್ಕೂಟದ ಪರವಾನಿಗೆ ಇದ್ದವರಿಗೆ ಮಾತ್ರ ಅವಕಾಶ ನೀಡಿ, ವ್ಯವಸಾಯಿ ಕಲಾವಿದರ ಬದುಕಿಗೆ ನೆರವಾಗಬೇಕು ಎಂದರು. ಒಕ್ಕೂಟ ಉಪಾಧ್ಯಕ್ಷರಾದ ರಮೇಶ ಕುಲಶೇಖರ, ಮೋಹನ ಕಲಂಬಾಡಿ, ಪ್ರಧಾನ ಕಾರ್ಯದರ್ಶಿ ಕುಮಾರ್ ಮಾಲೆಮಾರ್, ಕಾರ್ಯದರ್ಶಿ ದಿವಾಕರ ದಾಸ್ ಶ್ರುತಿ ಆರ್ಟ್ಸ್, ಜತೆ ಕಾರ್ಯದರ್ಶಿ ಕಡಬ ದಿನೇಶ ರೈ ಉಪಸ್ಥಿತರಿದ್ದರು.
    ಹೆಚ್ಚಿನ ಮಾಹಿತಿಗೆ ಒಕ್ಕೂಟದ ಕಚೇರಿ ಬಿ. ಸಿ. ರೋಡ್‌ನ ಶ್ರುತಿ ಆರ್ಟ್ಸ್, ಅಥವಾ ಕುಮಾರ್ ಮಾಲೆಮಾರ್ -9845412049 ಇವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಯಶಸ್ವಿಯಾದ ‘ದುಬೈ ಯಕ್ಷೋತ್ಸವ’
    Next Article ಖ್ಯಾತ ಸಾಹಿತಿ ನಾಡೋಜ ಕಮಲಾ ಹಂಪನಾ ನಿಧನ
    roovari

    Add Comment Cancel Reply


    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    ಪರಿಚಯ ಲೇಖನ | ‘ಬೆಳೆಯುವ ಯಕ್ಷಸಿರಿ’ ಸಚಿನ್ ಶೆಟ್ಟಿ ನಾಗರಕೊಡಿಗೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.