Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ‘ಓ ಮನಸೇ ತುಸು ನಿಧಾನಿಸು’ ಕೃತಿ ಲೋಕಾರ್ಪಣೆ | ಆಗಸ್ಟ್ 24

    August 21, 2025

    ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಸ್ತರಣಾ ಉಪನ್ಯಾಸ ಮಾಲಿಕೆ 2025’ | ಆಗಸ್ಟ್ 25

    August 21, 2025

    ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ’ | ಆಗಸ್ಟ್ 22

    August 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷ ದುಂದುಭಿ-2024, ಕಾರಂತ ಯಕ್ಷಾಂತರಂಗ ಪ್ರಶಸ್ತಿ ಪ್ರದಾನ  
    Awards

    ಯಕ್ಷ ದುಂದುಭಿ-2024, ಕಾರಂತ ಯಕ್ಷಾಂತರಂಗ ಪ್ರಶಸ್ತಿ ಪ್ರದಾನ  

    June 25, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ತೆಕ್ಕಟ್ಟೆಯ ಹಯಗ್ರೀವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಶಸ್ವೀ ಕಲಾವೃಂದದ ಸಹಕಾರದೊಂದಿಗೆ ಯಕ್ಷಾಂತರಂಗ-ವ್ಯವಸಾಯೀ ಯಕ್ಷ ತಂಡದ ಯಕ್ಷ ದುಂದುಭಿ-2024ರಲ್ಲಿ ‘ಕಾರಂತ ಯಕ್ಷಾಂತರಗ ಪ್ರಶಸ್ತಿ ಪ್ರದಾನ’ ಸಮಾರಂಭವು ದಿನಾಂಕ 23-06-2024 ರಂದು ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ “ಹಿರಿಯರಾಗಿ ಸಾಕಷ್ಟು ಅನುಭವವುಳ್ಳ ಕೃಷ್ಣಮೂರ್ತಿ ಉರಾಳರು ಅನುಭವೀ ಕಲಾವಿದರ ತಂಡವನ್ನು ಕಟ್ಟಿಕೊಂಡು ‘ಯಕ್ಷಾಂತರಂಗ’ ಸಂಘಟನೆಯ ಮೂಲಕ ಸಾಂಪ್ರದಾಯಿಕ ಯಕ್ಷ ನಡೆಯನ್ನೇ ಸಾರ್ವತ್ರಿಕವಾಗಿ ಮತ್ತೆ ಮತ್ತೆ ನೆನಪಿಸುತ್ತಾ ಸಮಾಜದಲ್ಲಿ ಪ್ರಶಂಸೆಗೆ ಪಾತ್ರವಾಗುವಂತೆ ಮಾಡಿದ್ದಾರೆ. ಸಂಸ್ಥೆಯು ಮತ್ತೆ ಮತ್ತೆ ಸಾಂಸ್ಕೃತಿಕವಾಗಿ ಬೆಳಗುತ್ತಾ ಇನ್ನಷ್ಟು ಕಾಲ ಕಾಂತಿಯನ್ನು ನೀಡಲಿ.” ಎಂದು ಹಾರೈಸಿದರು.

    ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದ ಖ್ಯಾತ ಪ್ರಸಂಗಕರ್ತ ಪ್ರಸಾದ್ ಕುಮಾರ್ ಮೊಗೆಬೆಟ್ಟು “ಯಕ್ಷಗಾನದ ಸರ್ವಾಂಗವನ್ನು ಬಲ್ಲ ಅನೇಕರ ಪರಂಪರೆಯ ಕೊಂಡಿ ಬಡಗು ತಿಟ್ಟಿನ ಹಿರಿಯ ಭಾಗವತ ಸಾಧಕ ಶ್ರೇಷ್ಠರು ಹೆರೆಂಜಾಲು ಗೋಪಾಲ ಗಾಣಿಗರು. ಯಕ್ಷರಂಗದಲ್ಲಿ ಹಂತ ಹಂತವಾಗಿ ಮೇಲೆ ಬಂದ ಗಾಣಿಗರು ಭಾಗವತಿಗೆ ಕಲಿತು ಮೇಳ ಸೇರಿಕೊಂಡವರು. ಮರವಂತೆಯ ಭೋರ್ಗೆರೆಯುವ ಕಡಲಿನ ಭಾಗವತರಾದ ನರಸಿಂಹ ದಾಸರ ಒಡನಾಟಿಕೆಯನ್ನು ಹೊಂದಿ ಸಾರ್ಥಕ್ಯವನ್ನು ಕಂಡುಕೊಂಡವರು. ಸಾಮಾಜಿಕ, ಪೌರಾಣಿಕ ಹಾಗೂ ಐತಿಹಾಸಿಕ ಪ್ರಸಂಗಗಳ ಮೂರು ಘಟಕದಲ್ಲಿಯೂ ತನ್ನ ಛಾಪನ್ನು ಮೂಡಿಸಿದ ಹೆಗ್ಗಳಿಕೆ ಹೆರೆಂಜಾಲರದ್ದು.  ‘ನಾಚುತ ನುಡಿದನು ಆ ಕ್ಷಣಪೂರ್ವನು | ಓ ಚೆಲುವೆ ನೀನ್ಯಾರೆನುತಾ’ ಎನ್ನುವ ಪದ್ಯ ಹೆರೆಂಜಾಲರ ಕಂಠದಲ್ಲಿ ಸುಶ್ರಾವ್ಯವಾಗಿ ಬರುತ್ತಿದ್ದಾಗ ಹಿರಿಯ ಪ್ರಸಂಗಕರ್ತ ಡಾ. ವೈ. ಚಂದ್ರಶೇಖರ ಶೆಟ್ಟಿಯವರು ಯಾವಾಗಲೂ ಮನದುಂಬಿ ಪ್ರಶಂಸಿಸುತ್ತಿದ್ದರು. ಕವಿಗೆ ಹಾಡುಗಾರಿಕೆಯಿಂದ ಸಂತೃಪ್ತಿಯನ್ನು ತಂದೊದಗಿಸಿದ ಕಲಾವಿದ ಹೆರೆಂಜಾಲರು. ಮುಮ್ಮೇಳ ಕಲಾವಿದರು ಹಾಗೂ ಹಿಮ್ಮೇಳ ಕಲಾವಿದರೂ ಗೋಪಾಲ ಗಾಣಿಗರೊಂದಿಗಿನ ರಂಗ ಸುಖವನ್ನು ಮತ್ತೆ ಮತ್ತೆ ನೆನಪಿಸಿ ಅನುಭವಿಸುವ ಪ್ರಶಂನೆಯ ನುಡಿಗೆ ಪಾತ್ರರಾದವರು ಹೆರೆಂಜಾಲರು.” ಎಂದರು.

    ಇದೇ ಸಂದರ್ಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿಯವರನ್ನು ಗೌರವಿಸಿ ಅಭಿನಂದಿಸಲಾಯಿತು. ವಿಜಯಾ ಬ್ಯಾಂಕಿನ ನಿವೃತ್ತ ಪ್ರಭಂದಕರಾದ ಭುವನಪ್ರಸಾದ್ ಹೆಗ್ಡೆ, ಪ್ರೊ. ಸಿ. ಉಪೇಂದ್ರ ಸೋಮಯಾಜಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ಸ್ಥಾಪಕ ವಿಶ್ವನಾಥ ಶಣೈ ಉಡುಪಿ, ಮಣೂರು ಸುಬ್ರಾಯ ಆಚಾರ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಕೃಷ್ಣಮೂರ್ತಿ ಉರಾಳರು ಸ್ವಾಗತಿಸಿ, ಕೃಷ್ಣಮೂರ್ತಿ ಬ್ರಹ್ಮಾವರ ಕೃತಜ್ಞತಾ ನುಡಿಗಳನ್ನಾಡಿದರು. ಸಭಾಕಾರ್ಯಕ್ರಮದ ಬಳಿಕ  ಯಕ್ಷಾಂತರಂಗದ ಕಲಾವಿದರಿಂದ ಯಕ್ಷಗಾನ ಪ್ರಸಂಗ ‘ಶರಸೇತುಬಂಧ ಮತ್ತು ಸುಭದ್ರಾ ಕಲ್ಯಾಣ’ ರಂಗದಲ್ಲಿ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಟಿಪಳ್ಳದ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯಲ್ಲಿ ‘ಸಾಹಿತ್ಯ ಸಿರಿ’ ಕಾರ್ಯಕ್ರಮ
    Next Article ಮಣಿಪಾಲದಲ್ಲಿ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮ | ಜೂನ್ 30
    roovari

    Add Comment Cancel Reply


    Related Posts

    ಉಡುಪಿಯಲ್ಲಿ ‘ಸೇಡಿಯಾಪು ಪ್ರಶಸ್ತಿ’ ಹಾಗೂ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    August 21, 2025

    ಎಡನೀರಿನಲ್ಲಿ ಗಿರಿಜಾಕಲ್ಯಾಣ ಯಕ್ಷಗಾನ ಪ್ರದರ್ಶನ

    August 20, 2025

    ‘ಟೊಟೊ ಪುರಸ್ಕಾರ’ಕ್ಕೆ ಕೃತಿಗಳ ಆಹ್ವಾನ

    August 20, 2025

    ಎಡನೀರು ಶ್ರೀಮಠದಲ್ಲಿ ಯಕ್ಷಗಾನ ತಾಳಮದ್ದಲೆ

    August 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.