Subscribe to Updates

    Get the latest creative news from FooBar about art, design and business.

    What's Hot

    ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಅನಂತ ಪ್ರಭು ನಿಧನ

    September 6, 2025

    ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನ ಕುಮಾರ ಐತಾಳ್ ಆಯ್ಕೆ

    September 6, 2025

    ಕ.ಸಾ.ಪ.ದಲ್ಲಿ ಕವಿ ಲಕ್ಷ್ಮೀಶನ ಜೈಮಿನಿ ಭಾರತದ ಗಮಕ ವಾಚನ ವ್ಯಾಖ್ಯಾನ

    September 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ. ಹಿ. ಚಿ. ಬೋರಲಿಂಗಯ್ಯ ಆಯ್ಕೆ 
    Folk

    ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ. ಹಿ. ಚಿ. ಬೋರಲಿಂಗಯ್ಯ ಆಯ್ಕೆ 

    July 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಬೆಂಗಳೂರು : ಕರ್ನಾಟಕ ಜಾನಪದ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಪ್ರೊ. ಹಿ. ಚಿ. ಬೋರಲಿಂಗಯ್ಯ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಪ್ರೊ. ಹಿ.ಶಿ. ರಾಮಚಂದ್ರೇಗೌಡರ ರಾಜೀನಾಮೆಯಿಂದ ತೆರವಾಗಿದ್ದ ಈ ಸ್ಥಾನಕ್ಕೆ ಶ್ರೀಯುತರನ್ನು ಆಯ್ಕೆ ಮಾಡಲಾಗಿದೆ.
    ದಿನಾಂಕ 15-07-2024ರ ಸೋಮವಾರ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆದ 128ನೇ ಆಡಳಿತ ಮಂಡಳಿ ಸಭೆಯಲ್ಲಿ ಹಿ.ಚಿ. ಬೋರಲಿಂಗಯ್ಯ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
    ಪ್ರೊ. ಹಿ. ಚಿ. ಬೋರಲಿಂಗಯ್ಯ :
    ಲೇಖಕ, ಪ್ರಾಧ್ಯಾಪಕ, ಕುಲಸಚಿವ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಇವರು 25-10-1955ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಿತ್ತಲಪುರ ಗ್ರಾಮದಲ್ಲಿ ಜನಿಸಿದರು.
    ಹಿತ್ತಲಪುರ ಹಾಗೂ ಉಜ್ಜನಿಗಳಲ್ಲಿ ತನ್ನ ಪ್ರಾಥಮಿಕ ಶಿಕ್ಷಣವನ್ನು ನಡೆಸಿದ ಇವರು ತಮ್ಮ ಪ್ರೌಢಶಿಕ್ಷಣವನ್ನು ಹುಲಿಯೂರುದುರ್ಗದಲ್ಲಿ ಪೂರ್ತಿಗೊಳಿಸಿದರು. ಮುಂದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮುಂದುವರೆಸಿ 1981ರಲ್ಲಿ ಜಿ.ಪಿ.ರಾಜರತ್ನಂ ಚಿನ್ನದ ಪದಕದೊಂದಿಗೆ ಕನ್ನಡವಿಷಯದಲ್ಲಿ ಎಂ.ಎ. ಪದವಿ ಪಡೆದರು. ‘ವಿಸ್ಮೃತಿ ಮತ್ತು ಸಂಸ್ಕೃತಿ: ಒಂದು ಬುಡಕಟ್ಟಿನ ಲೋಕದೃಷ್ಟಿ ಹಿನ್ನೆಲೆಯಲ್ಲಿ ಸಂಸ್ಕೃತಿ ಚರ್ಚೆ’ ಎಂಬ ಸಂಪ್ರಬಂಧಕ್ಕಾಗಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದಿಂದ ಪಿ. ಎಚ್‍. ಡಿ. ಪದವಿ ಪಡೆದರು.
    ಇವರು ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಹಾಗೂ ನಾಟಕ ಅಕಾಡೆಮಿಯ ರಿಜಿಸ್ಟ್ರಾರ್ ಆಗಿ, ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ಮತ್ತು ಲಲಿತ ಕಲಾ ವಿಭಾಗ ಹಾಗೂ ಕುವೆಂಪು ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಡಾ. ರಾಮಮನೋಹರ ಲೋಹಿಯಾ ಅಧ್ಯಯನ ಪೀಠದ ಸಂಚಾಲಕರಾಗಿ ಹಾಗೂ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತಿ ನಾ. ಮೊಗಸಾಲೆಗೆ ‘ಸಿರಿಗನ್ನಡಂ ಗೆಲ್ಗೆ ರಾ. ಹ. ದೇಶಪಾಂಡೆ’ ಪ್ರಶಸ್ತಿ
    Next Article ತೆಕ್ಕಟ್ಟೆಯ ಹಯಗ್ರೀವದಲ್ಲಿ ‘ಅಂಬೆ’ ಯಕ್ಷಗಾನ ಪ್ರದರ್ಶನ
    roovari

    Add Comment Cancel Reply


    Related Posts

    ಬೀದಿನಾಟಕ ಕಲಾ ತಂಡಗಳಿಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 09

    September 4, 2025

    ಉಡುಪಿಯಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ರಜತ ಮಹೋತ್ಸವ

    September 1, 2025

    ತೀರ್ಥಹಳ್ಳಿಯ ಕನ್ನಡ ಭವನದಲ್ಲಿ ‘ವಿಶ್ವ ಜಾನಪದ ದಿನಾಚರಣೆ’ | ಆಗಸ್ಟ್ 25

    August 22, 2025

    ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ’ | ಆಗಸ್ಟ್ 22

    August 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.