Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೆರೆಕಾಡಿನಲ್ಲಿ ಯಕ್ಷಗಾನ ಪ್ರದರ್ಶನ | ಜುಲೈ 27 ಮತ್ತು 28
    Awards

    ಕೆರೆಕಾಡಿನಲ್ಲಿ ಯಕ್ಷಗಾನ ಪ್ರದರ್ಶನ | ಜುಲೈ 27 ಮತ್ತು 28

    July 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಲ್ಕಿ : ಶ್ರೀ ವಿನಾಯಕ ಯಕ್ಷ ಕಲಾ ತಂಡ (ರಿ.) ಕೆರೆಕಾಡು ಮುಲ್ಕಿ ಇದರ ವತಿಯಿಂದ ‘ತೈತತಕತ’ ಕಾರ್ಯಕ್ರಮವು ದಿನಾಂಕ 27-07-2024 ಮತ್ತು 28-07-2024ರಂದು ಸಂಜೆ ಗಂಟೆ 4-00ರಿಂದ ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ನಡೆಯಲಿದೆ.

    ದಿನಾಂಕ 27-07-2024ರಂದು ಶ್ರೀ ಕ್ಷೇತ್ರ ಕಾರಿಂಜದ ಆಡಳಿತಾಧಿಕಾರಿ ಶ್ರೀ ಚಂದ್ರಶೇಖರ ಶೆಟ್ಟಿ ಇವರಿಂದ ಉದ್ಘಾಟನೆಗೊಳ್ಳಲಿರುವ ಈ ಕಾರ್ಯಕ್ರಮದಲ್ಲಿ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಶ್ರೀ ಶ್ರೀ ವೇದಮೂರ್ತಿ ಶ್ರೀ ಕೃಷ್ಣ ತಂತ್ರಿಯವರು ಆಶೀರ್ವಚನ ನೀಡಲಿದ್ದಾರೆ. ಮುಲ್ಕಿ ಸೀಮೆಯ ಅರಸರಾದ ಶ್ರೀ ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಲಿರುವರು. ಇದೇ ಸಂದರ್ಭದಲ್ಲಿ ಮೆಸ್ಕಾಂನ ಕಿರಿಯ ಇಂಜಿನಿಯರ್ ಶ್ರೀ ಬಿ. ರಾಜೇಶ್ ಇವರಿಗೆ ‘ಶ್ರೀ ವಿನಾಯಕ ಯಕ್ಷಕಲಾ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ನಡೆಯಲಿರುವ ‘ಸತ್ವ ಶೈಥಿಲ್ಯ’ ಪ್ರಸಂಗದ ಯಕ್ಷಗಾನ ಪ್ರದರ್ಶನದಲ್ಲಿ ಡಾ. ಪ್ರಖ್ಯಾತ್ ಶೆಟ್ಟಿ ಆಳಿಕೆ ಭಾಗವತರಾಗಿ, ಮಧೂರು ರಾಮಪ್ರಕಾಶ್ ಕಲ್ಲೂರಾಯ ಮತ್ತು ಯೋಗೀಶ್ ಉಳೆಪಾಡಿ ಇವರುಗಳು ಚೆಂಡೆ ಮದ್ದಳೆಯಲ್ಲಿ ಸಹಕರಿಸಲಿದ್ದಾರೆ.

    ದಿನಾಂಕ 28-07-2024ರಂದು ಶ್ರೀ ವಿಶ್ವನಾಥ ದೇವಸ್ಥಾನದ ಪಾಠೇಲ್ ಶ್ರೀ ವಾಸುದೇವ ರಾವ್ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಕಟೀಲು ಅನು ವಂಶಿಕ ಅರ್ಚಕರಾದ ಶ್ರೀ ಶ್ರೀನಿವಾಸ ಆಸ್ರಣ್ಣರವರು ಆಶೀರ್ವಚನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಕ.ವಿ. ನೌಕರರ ಸಂಘದ ಉಪಾಧ್ಯಕ್ಷರಾದ ಶ್ರೀ ಎಚ್.ಎಸ್. ಗುರುಮೂರ್ತಿ ಇವರಿಗೆ ‘ಶ್ರೀ ವಿನಾಯಕ ಯಕ್ಷಕಲಾ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ನಡೆಯಲಿರುವ ‘ಪಂಚಾಕ್ಷರ ಪಾರಮ್ಯ’ ಪ್ರಸಂಗದ ಯಕ್ಷಗಾನ ಪ್ರದರ್ಶನದಲ್ಲಿ ಶ್ರೀಮತಿ ಕಾವ್ಯಶ್ರೀ ಅಜೇರು ಭಾಗವತರಾಗಿ, ಮಧೂರು ರಾಮಪ್ರಕಾಶ್ ಕಲ್ಲೂರಾಯ ಮತ್ತು ಯೋಗೀಶ್ ಉಳೆಪಾಡಿ ಇವರುಗಳು ಚೆಂಡೆ ಮದ್ದಳೆಯಲ್ಲಿ ಸಹಕರಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಹಿಮ್ಮೇಳ ಕಲಾವಿದ ಸುರೇಶ್ ಕಾಮತ್ ಇವರಿಗೆ ನಾಗರಿಕ ಸನ್ಮಾನ
    Next Article ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ
    roovari

    Add Comment Cancel Reply


    Related Posts

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    ಸಿರಿಬಾಗಿಲಿನಲ್ಲಿ ಯಕ್ಷಗಾನ ಪ್ರಸಂಗ ರಚನಾ ಕಮ್ಮಟ | ಜುಲೈ 06

    June 7, 2025

    ಯಕ್ಷಗಾನ ವೃತ್ತಿ ಮೇಳದ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ | ಜುಲೈ 01

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.