Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆಯ ಹಯಗ್ರೀವದಲ್ಲಿ ಬಿ. ಎಮ್. ರಾಮಕೃಷ್ಣ ಹತ್ವಾರ್ ಸಂಸ್ಮರಣೆ 
    Yakshagana

    ತೆಕ್ಕಟ್ಟೆಯ ಹಯಗ್ರೀವದಲ್ಲಿ ಬಿ. ಎಮ್. ರಾಮಕೃಷ್ಣ ಹತ್ವಾರ್ ಸಂಸ್ಮರಣೆ 

    August 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ತೆಕ್ಕಟ್ಟೆ: ಯಶಸ್ವೀ ಕಲಾವೃಂದ (ರಿ.)ಕೊಮೆ, ತೆಕ್ಕಟ್ಟೆ ಸಂಸ್ಥೆಯ ‘ಸಿನ್ಸ್ 1999 ಶ್ವೇತಯಾನ-48’ ಕಾರ್ಯಕ್ರಮದಡಿಯಲ್ಲಿ ರೋಟರಿ ಕ್ಲಬ್ ತೆಕ್ಕಟ್ಟೆ ಸಹಯೋಗದೊಂದಿಗೆ ಬಿ. ಎಮ್. ರಾಮಕೃಷ್ಣ ಹತ್ವಾರ್ ಸಂಸ್ಮರಣೆ ಕಾರ್ಯಕ್ರಮವು 04 ಆಗಸ್ಟ್ 2024 ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ  ಭಾಗವಹಿಸಿದ ‘ಸಿನ್ಸ್ 1999 ಶ್ವೇತಯಾನ’ದ ಉಪ ಕಾರ್ಯಾಧ್ಯಕ್ಷ ಕೊಮೆ ಗೋಪಾಲ ಪೂಜಾರಿ ಮಾತನಾಡಿ “ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಜಗತ್ತಿಗೆ ಬಹು ದೊಡ್ಡ ಕೊಡುಗೆ ಇತ್ತ ಬಿ. ಎಮ್. ರಾಮಕೃಷ್ಣ ಹತ್ವಾರ್‌ರ ಕಾಯ ಅಳಿದು ಕೀರ್ತಿ ಉಳಿದಿದೆ. ಅದೆಷ್ಟೋ ಶಾಲಾ ಕಾಲೇಜುಗಳ ಕೊಠಡಿಗಳು ಹತ್ವಾರರ ಹೆಸರಿನಲ್ಲಿ ಉಳಿದಿವೆ. ಸಾಂಸ್ಕೃತಿಕವಾಗಿ ತೆಕ್ಕಟ್ಟೆಯ ಬೆಟ್ಟಿನ ಮನೆಯಲ್ಲಿ ವರ್ಷಂಪ್ರತೀ ಪ್ರಸಿದ್ಧ ಕಲಾವಿದರನ್ನು ಜಮಾಯಿಸಿ, ಅದ್ದೂರಿಯ ತಾಳಮದ್ದಳೆ ಏರ್ಪಡುವಂತೆ ಮಾಡಿದ ಕಲಾ ಪ್ರೇಮಿಗಳು ಹತ್ವಾರರು. ಗತ ಕಾಲದಲ್ಲಿ ತೆಕ್ಕಟ್ಟೆಯಲ್ಲಿ ತಾಳಮದ್ದಳೆಯ ಸಂಘಟಕರಾಗಿ ಹೆಸರಾದ ಹತ್ವಾರರು ಜೀವಿತ ಕಾಲದಲ್ಲಿ ತೆಂಕು ಬಡಗಿನ ಅನೇಕ ಯಕ್ಷಗಾನವನ್ನು ಆ ಕಾಲದಲ್ಲಿ ಏರ್ಪಡಿಸಿ ಜನಾನುರಾಗಿಯಾಗಿದ್ದರು. ಇಂತಹ ಹತ್ವಾರರು ಸಮಾಜದ ಎಲ್ಲಾ ವಿಭಾಗದಲ್ಲೂ ತಮ್ಮ ಕೊಡುಗೆಯನ್ನಿತ್ತು ಸರ್ವ ಶ್ರೇಷ್ಠರಾದರು. ದಾನಿಗಳ ನೆರವನ್ನು ಸಂಘ ಸಂಸ್ಥೆಗಳು ನೆನಪಿಸಿಕೊಳ್ಳಬೇಕಾದದ್ದು ಆದ್ಯ ಕರ್ತವ್ಯ.” ಎಂದರು.
    ಕಾರ್ಯಕ್ರಮದಲ್ಲಿ ಹತ್ವಾರ್ ಸಹೋದರ ಬೆಟ್ಟಿನ ಮನೆ ವಾದಿರಾಜ ಹತ್ವಾರ್, ರೋಟರಿ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್, ಉಪನ್ಯಾಸಕ ಮೋಹನಚಂದ್ರ ಪಂಜಿಗಾರು, ಯಶಸ್ವೀ ಕಲಾ ವೃಂದದ ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು. ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು. ಸಭಾಕಾರ್ಯಕ್ರಮದ ಬಳಿಕ ಕೇಂದ್ರದ 24 ವಿದ್ಯಾರ್ಥಿಗಳು ‘ಶ್ವೇತಕುಮಾರ ಚರಿತ್ರೆ’ ಯಕ್ಷಗಾನ ಪ್ರಸಂಗವನ್ನು ‘ಗಾನ ತಾಳಮದ್ದಳೆ’ಯಾಗಿ ರಂಗದಲ್ಲಿ ಪ್ರದರ್ಶಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿದ್ಯಾರ್ಥಿಗಳಿಗೆ ಯುವವಾಹಿನಿ ವತಿಯಿಂದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ | 11 ಆಗಸ್ಟ್
    Next Article ನಾಟಕ ವಿಮರ್ಶೆ | “ಇ ತಿ ಹ ಯ” – ಅನಿಸಿಕೆ
    roovari

    Comments are closed.

    Related Posts

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಸಮಾರೋಪಗೊಂಡ ಪುತ್ರಕಾಮೇಷ್ಠಿ ತಾಳಮದ್ದಲೆ ಸಪ್ತಾಹ

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.