Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬದುಕಿನ ಕೌಶಲವನ್ನು ಅಭಿವೃದ್ಧಿ ಪಡಿಸುವಲ್ಲಿ ನಾಟಕದ ಪಾತ್ರ ಹಿರಿದು: ಶೇಣಿಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ರಂಗ ಸಂಸ್ಕೃತಿ ಕಾರ್ಯಗಾರದಲ್ಲಿ ಕಾಸರಗೋಡು ಚಿನ್ನಾ
    Theatre

    ಬದುಕಿನ ಕೌಶಲವನ್ನು ಅಭಿವೃದ್ಧಿ ಪಡಿಸುವಲ್ಲಿ ನಾಟಕದ ಪಾತ್ರ ಹಿರಿದು: ಶೇಣಿಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ರಂಗ ಸಂಸ್ಕೃತಿ ಕಾರ್ಯಗಾರದಲ್ಲಿ ಕಾಸರಗೋಡು ಚಿನ್ನಾ

    August 9, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಶೇಣಿ : ರಂಗಚಿನ್ನಾರಿ ಕಾಸರಗೋಡು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಸಹಯೋಗದೊಂದಿಗೆ ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ದಿನಾಂಕ 8 ಆಗಸ್ಟ್ 2024ರಂದು ರಂಗ ಸಂಸ್ಕೃತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.
    ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ರಂಗಸಂಸ್ಕೃತಿಯ ನಿರ್ದೇಶಕ ಕಾಸರಗೋಡು ಚಿನ್ನಾ “ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಮತ್ತು ಬದುಕಿನ ಕೌಶಲಗಳನ್ನು ಅಭಿವೃಧ್ಧಿ ಪಡಿಸಲು ನಾಟಕವು ಉತ್ತಮ ಹಾದಿಯನ್ನು ನಿರ್ಮಿಸಿ, ತಮ್ಮನ್ನು ತಾವು ಮುಕ್ತವಾಗಿ ಅಭಿವ್ಯಕ್ತ ಪಡಿಸಲು ಸಹಕರಿಸುತ್ತದೆ. ನಾಟಕಕ್ಕೆ ಸಂಬಂಧಿಸಿದ ಚಟುವಟಿಕೆಗಳು ಕಲಾವಿದನಲ್ಲಿ ಭರವಸೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದರೊಂದಿಗೆ ಸಂವಹನ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು ದೇಹದ ಭಾಷೆ ಮತ್ತು ಭಾವಾಭಿವ್ಯಕ್ತಿಗಳು ನಿರ್ವಹಿಸುವ ನಿರ್ಣಾಯಕ ಪಾತ್ರಗಳ ಬಗ್ಗೆ ತಿಳುವಳಿಕೆಯನ್ನು ನೀಡುತ್ತದೆ” ಎಂದು ಅಭಿಪ್ರಾಯಪಟ್ಟರು.
    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಂಗಚಿನ್ನಾರಿ ನಿರ್ದೇಶಕ ಸತೀಶ್ಚಂದ್ರ ಭಂಡಾರಿಯವರು ಮಾತನಾಡಿ “ನಾಟಕವು ನಮಗೆ ವಿಶೇಷ ಅಸ್ತಿತ್ವವನ್ನು ನೀಡುತ್ತದೆ. ವ್ಯಕ್ತಿತ್ವದ ವಿಕಾಸಕ್ಕೆ ಕಾರಣವಾಗುತ್ತದೆ. ಇದಕ್ಕೆ ಅವಿಶ್ರಾಂತ ಶ್ರಮದ ಅಗತ್ಯವಿದೆ” ಎಂದರು.
    ಮುಖ್ಯ ಅತಿಥಿಗಳಾಗಿ ಆಗಮಿಸಿದ ಯುವ ರಂಗ ನಿರ್ದೇಶಕ ಉದಯ ಸಾರಂಗ್ ಮಾತನಾಡಿ “ಸ್ವಜನಾತ್ಮಕ ವ್ಯಕ್ತಿಯನ್ನಾಗಿ ರೂಪಿಸುವ ಅತಿ ದೊಡ್ಡ ಮಾಧ್ಯಮವೇ ರಂಗಭೂಮಿ. ಚಿಂತಿಸುವಂತೆ ಮಾಡುವುದು ಮಾತ್ರವಲ್ಲದೇ ಹೊಸತನ್ನು ಕಂಡು ಹುಡುಕಲು ಪ್ರೇರೇಪಿಸುವ ಶಕ್ತಿ ರಂಗಭೂಮಿಯಾಗಿದೆ. ಪ್ರಸ್ತುತ ನವ ಮಾಧ್ಯಮ ಅಬ್ಬರದ ಮುಂದೆ ವಿದ್ಯಾರ್ಥಿಗಳನ್ನು ರಂಗಭೂಮಿಗೆ ಆಪ್ತರನ್ನಾಗಿಸುವ ರಂಗ ಸಂಸ್ಕೃತಿ ಕಾಲೇಜು ರಂಗಭೂಮಿ ಪಯಣ ಪ್ರಶಂಸನೀಯ” ಎಂದು ನುಡಿದರು.
    ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯ ಪ್ರಿನ್ಸಿಪಾಲ್ ಶಾಸ್ತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅನುದಾನಿತ ಶಾಲೆಯ ಮ್ಯಾನೇಜರ್ ಶ್ರೀಮತಿ ಶಾರದಾ ವೈ ಮತ್ತು ಎಣ್ಮಕಜೆ ವಾರ್ಡಿನ ಸದಸ್ಯ ರಾಧಾಕೃಷ್ಣ ನಾಯಕ್ ಜೆ.ಎಸ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಶಿಕ್ಷಕ ಡಾ. ಸುಭಾಷ್ ಪಟ್ಟಾಜೆ ಸ್ವಾಗತಿಸಿ, ವಿದ್ಯಾರ್ಥಿ ಶತಾ ಆಳ್ವ ವಂದಿಸಿದರು. 54 ಮಂದಿ ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಆಶುರಚನೆ, ಮೂಕಾಭಿನಯ ಮತ್ತು ಸ್ವರಚಿತ ಪ್ರಹಸನದಲ್ಲಿ ಅಭಿನಯಿಸಿ ಮಿಂಚಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮೂಡುಬಿದಿರೆಯ ‘ಯಕ್ಷಸಂಗಮ’ ರಜತ ಸಂಭ್ರಮ | ಆಗಸ್ಟ್ 10
    Next Article ವಿದ್ವಾಂಸ ಗುರುರಾಜ ಮಾರ್ಪಳ್ಳಿ ನಿರ್ದೇಶನದಲ್ಲಿ ‘ಋತುಪರ್ಣ’ ಶಾಸ್ತ್ರೀಯ ಯಕ್ಷಗಾನ ಪ್ರದರ್ಶನ
    roovari

    Comments are closed.

    Related Posts

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 3, 2025

    ಮಂಗಳೂರು ರೋಟರಿಯಲ್ಲಿ ಕಾಸರಗೋಡು ಚಿನ್ನಾರ ನಗೆಯ ಸಂಜೆ

    June 3, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.