Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಭವನದ ‘ರಜತ ಸಂಭ್ರಮ’ ನಾಡು ನುಡಿ ಹಬ್ಬ, ವಿವಿಧ ಪ್ರಶಸ್ತಿ ಪ್ರದಾನ | ಜನವರಿ 18

    January 16, 2026

    ಮಕರ ಸಂಕ್ರಮಣದ ಅಂಗವಾಗಿ ‘ಶಾಂಭವಿ ವಿಲಾಸ’ ತಾಳಮದ್ದಳೆ

    January 16, 2026

    ನಾರಿ ಚಿನ್ನಾರಿಯಿಂದ ಪದ್ಮಗಿರಿ ಕಲಾಕುಟೀರದಲ್ಲಿ ‘ಶ್ರುತಿ ಸುಗಂಧ’ ವಾದ್ಯ ಸಂಗೀತ | ಜನವರಿ 17    

    January 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಮಾರೋಪಗೊಂಡ ಯಕ್ಷ ಸಿದ್ದಿಸಂಭ್ರಮದ ‘ಸಿದ್ಧಿ ದಶಯಾನ’
    Awards

    ಸಮಾರೋಪಗೊಂಡ ಯಕ್ಷ ಸಿದ್ದಿಸಂಭ್ರಮದ ‘ಸಿದ್ಧಿ ದಶಯಾನ’

    August 15, 2024Updated:August 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ರಕ್ಷಿತ್ ಶೆಟ್ಟಿ ಪಡ್ರೆ ಶಿಷ್ಯ ವೃಂದದ ಯಕ್ಷ ಸಿದ್ದಿಸಂಭ್ರಮ ‘ಸಿದ್ಧಿ ದಶಯಾನ’ ಕಾರ್ಯಕ್ರಮದ ಸಮಾರೋಪ ಸಮಾರಂಭವು 11 ಆಗಸ್ಟ್ 2024ರಂದು ಉರ್ವಸ್ಟೋರ್‌ ಇಲ್ಲಿನ ಡಾ. ಬಿ. ಆ‌ರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.
    ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಮಾತನಾಡಿ “ಯಕ್ಷಗಾನ ಕಲೆಯು ಜಾಗತಿಕ ಮಟ್ಟದಲ್ಲಿ ವಿಸ್ತರಿಸುತ್ತಿರುವ ಶ್ರೇಷ್ಠ ಕಲೆಯಾಗಿದ್ದು ಇದನ್ನು ರಾಜ್ಯ ಕಲೆ ಎಂದು ಘೋಷಣೆ ಮಾಡಬೇಕು. ರಾಜ್ಯದ 22 ಜಿಲ್ಲೆಗಳಲ್ಲಿ ವಿವಿಧ ಪ್ರಕಾರಗಳಲ್ಲಿ ಪ್ರಮುಖವಾಗಿರುವ ಯಕ್ಷಗಾನ ರಾಜ್ಯದ ಕಲೆಯಾಗಬೇಕು. ಯಕ್ಷಗಾನ ಕ್ಷೇತ್ರದಲ್ಲಿ ಬದಲಾವಣೆ ಬಂದರೂ ಕಲೆಗೆ ಕೊನೆ ಇಲ್ಲ. ಪ್ರಸ್ತುತ ಶಿಕ್ಷಣದ ಜತೆ ಯಕ್ಷಗಾನ ಬೆಸೆದುಕೊಂಡಿರುವುದು ಯಕ್ಷಗಾನದ ಉಳಿವು ಹಾಗೂ ಬೆಳವಣಿಗೆಗೆ ಪೂರಕವಾಗಿದೆ.” ಎಂದರು.
    ಕಟೀಲು ದೇವಸ್ಥಾನದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಮಾತನಾಡಿ “ಯಕ್ಷಗಾನದಿಂದ ಮಕ್ಕಳಿಗೆ ಪೌರಾಣಿಕ ಜ್ಞಾನ ಸಿಗುತ್ತದೆ. ಒಳಿತು ಕೆಡುಕುಗಳು ಹಾಗೂ ನ್ಯಾಯ ಅನ್ಯಾಯದ ಬಗ್ಗೆ ಅರಿವು ಮೂಡುತ್ತದೆ. ಇದು ಉತ್ತಮ ಜೀವನ ಶೈಲಿಯ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕವಾಗಲಿದೆ.” ಎಂದು ಹೇಳಿದರು.
    ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ “ಯಕ್ಷಗಾನವನ್ನು ಉಳಿಸಿ, ಬೆಳೆಸುವಲ್ಲಿ ಯಕ್ಷ ಶಿಕ್ಷಣ ಮಹತ್ತರ ಪಾತ್ರ ವಹಿಸಿದೆ. ಉತ್ತಮ ಕಲಾವಿದರನ್ನು ರೂಪಿಸುವ ರಕ್ಷಿತ್ ಶೆಟ್ಟಿ ಅವರ ಪ್ರಯತ್ನ ಅಭಿನಂದನೀಯ.” ಎಂದರು.
    ರಾಮನಗರದ ಪೊಲೀಸ್ ಉಪ ಅಧೀಕ್ಷಕ ದಿನಕರ ಶೆಟ್ಟಿ ಮಾತನಾಡಿ “ಯಕ್ಷಗಾನ ಸಮೃದ್ಧ ಕಲೆಯಾಗಿದ್ದು, ಜಗದಗಲ ಪಸರಿಸಿದೆ. ರಕ್ಷಿತ್ ಉನ್ನತ ಶಿಕ್ಷಣ ಪಡೆದರೂ ಯಕ್ಷಗಾನದಲ್ಲಿ ತೊಡಗಿಸಿರುವುದು ಸಂತಸವಾಗಿದೆ.” ಎಂದರು.
    ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿ ಪಡ್ರೆ ರಚನೆಯ ‘ಯಕ್ಷ ಶಿಕ್ಷಣ’ ಪುಸ್ತಕ ಲೋಕಾರ್ಪಣೆಗೊಂಡಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ‘ಯಕ್ಷಸಿದ್ಧಿ ಪ್ರಶಸ್ತಿ’-ಸಮ್ಮಾನ ಹಾಗೂ 300ಕ್ಕೂ ಮಿಕ್ಕಿ ಯಕ್ಷ ವಿದ್ಯಾರ್ಥಿಗಳಿಂದ ವಿವಿಧ ಯಕ್ಷಗಾನ ಪ್ರದರ್ಶನ ನಡೆಯಿತು. ಪ್ರಕಾಶ್ ಮೂಡಿತ್ತಾಯ ಸ್ವಾಗತಿಸಿ, ರವಿ ಪ್ರಸಾದ್‌ ಶೆಟ್ಟಿ ನಿರೂಪಿಸಿ, ಉಮೇಶ್ ಆಚಾರ್ಯ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ಸವಿಗಾನ’ | ಆಗಸ್ಟ್ 15
    Next Article ಮಂಗಳೂರು ಸಂಸ್ಕೃತ ಸಂಘ ಮತ್ತು ಕೆನರಾ ಪ್ರೌಢಶಾಲೆ ಉರ್ವ ಇದರ ಜಂಟಿ ಆಶ್ರಯದಲ್ಲಿ ‘ಸಂಸ್ಕೃತೋತ್ಸವಃ’ | ಆಗಸ್ಟ್ 31
    roovari

    Comments are closed.

    Related Posts

    ಕನ್ನಡ ಭವನದ ‘ರಜತ ಸಂಭ್ರಮ’ ನಾಡು ನುಡಿ ಹಬ್ಬ, ವಿವಿಧ ಪ್ರಶಸ್ತಿ ಪ್ರದಾನ | ಜನವರಿ 18

    January 16, 2026

    ಮಕರ ಸಂಕ್ರಮಣದ ಅಂಗವಾಗಿ ‘ಶಾಂಭವಿ ವಿಲಾಸ’ ತಾಳಮದ್ದಳೆ

    January 16, 2026

    ದಯಾನಂದ ಬಳೆಗಾರ ನಾಗೂರು ಇವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ

    January 16, 2026

    ಕೋಟ ಪಟೇಲರ ಮನೆ ಅಂಗಣದಲ್ಲಿ ಉಡುಪ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ಜನವರಿ 18

    January 15, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.