Subscribe to Updates

    Get the latest creative news from FooBar about art, design and business.

    What's Hot

    ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮದಲ್ಲಿ ರಕ್ಷಿತ್ ಪಡ್ರೆಗೆ ಸನ್ಮಾನ

    June 4, 2025

    ಅಂತರರಾಷ್ಟ್ರೀಯ ‘ಬೂಕರ್ ಪ್ರಶಸ್ತಿ’ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ

    June 4, 2025

    ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ‘ಕೂಸಿನ ಕಂಡೀರ’ ಪ್ರಥಮ ಪ್ರದರ್ಶನ

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಆಗಸ್ಟ್ 24
    Kannada

    ಮೈಸೂರಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಆಗಸ್ಟ್ 24

    August 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಸುವರ್ಣ ಕರ್ನಾಟಕ : ನಾಟಕ 50 ರಾಷ್ಟ್ರೀಯ ವಿಚಾರ ಸಂಕಿರಣವನ್ನು ದಿನಾಂಕ 24 ಆಗಸ್ಟ್ 2024ರಂದು ಬೆಳಗ್ಗೆ 10-00 ಗಂಟೆಗೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜ ಮೂರ್ತಿ ಇದರ ಅಧ್ಯಕ್ಷತೆಯಲ್ಲಿ ಮಾನ್ಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹಾದೇವಪ್ಪ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿರುವರು. ಬೆಳಗ್ಗೆ 11-00 ಗಂಟೆಗೆ ನಡೆಯಲಿರುವ ಗೋಷ್ಠಿ 1ರಲ್ಲಿ ರಂಗ ನಿರ್ದೇಶಕರಾದ ಡಾ. ಸಿ. ಬಸವಲಿಂಗಯ್ಯ ಇವರು ಅಧ್ಯಕ್ಷತೆ ವಹಿಸಲಿದ್ದು, ‘ಚಳಿವಳಿಯ ರೂಪವಾಗಿ ರಂಗಭೂಮಿ’ ಎಂಬ ವಿಷಯದ ಬಗ್ಗೆ ಮೈಸೂರಿನ ಡಾ. ಎಸ್.ಆರ್. ರಮೇಶ್, ‘ಆಧುನಿಕ ರಂಗಭೂಮಿಯ ಅಭಿನಯ ವೈವಿಧ್ಯತೆ’ ಎಂಬ ವಿಷಯದ ಬಗ್ಗೆ ಬೆಂಗಳೂರಿನ ಡಾ. ಉದಯ ಸೋಸಲೆ, ‘ಭಾರತೀಯ ರಂಗಭೂಮಿಯಲ್ಲಿ ಕನ್ನಡ ನಾಟಕಗಳ ಪ್ರಭಾವ’ ಎಂಬ ವಿಷಯದ ಬಗ್ಗೆ ಹೈದ್ರಾಬಾದ್ ಡಾ. ತಾರಕೇಶ್ವರ್ ಹಾಗೂ ‘ಕನ್ನಡ ರಂಗ–ಸಂಗೀತ ವೈವಿಧ್ಯತೆ’ ಎಂಬ ವಿಷಯದ ಬಗ್ಗೆ ಮೈಸೂರಿನ ಡಾ. ಟಿ.ಸಿ. ಪೂರ್ಣಿಮಾ ಪ್ರಸಾದ್ ಇವರುಗಳು ವಿಷಯ ಮಂಡನೆ ಮಾಡಲಿದ್ದಾರೆ.

    ಮಧ್ಯಾಹ್ನ 2-00 ಗಂಟೆಯಿಂದ ನಡೆಯಲಿರುವ ಗೋಷ್ಠಿ 2ರಲ್ಲಿ ರಂಗ ವಿಮರ್ಶಕರಾದ ಶ್ರೀ ಜಿ.ಎನ್. ಮೋಹನ್ ಇವರು ಅಧ್ಯಕ್ಷತೆ ವಹಿಸಲಿದ್ದು, ಶ್ರೀರಂಗಪಟ್ಟಣದ ಶ್ರೀ ಶ್ರೀಪಾದ ಭಟ್ ಇವರು ‘ರಂಗಕೃತಿಗಳಲ್ಲಿ ವೈಚಾರಿಕ ಪ್ರಜ್ಞೆ’, ಶಿವಮೊಗ್ಗದ ಶ್ರೀ ಸಾಸ್ವೇಹಳ್ಳಿ ಸತೀಶ್ ಇವರು ‘ರಂಗಭೂಮಿಯಲ್ಲಿ ಪುರಾಣ ಮತ್ತು ಜಾನಪದೀಯ ಪ್ರಜ್ಞೆ’ ಮತ್ತು ಪಾಂಡಿಚೆರಿ ಡಾ. ಪವಿತ್ರ ಇವರು ‘ರಂಗಶಿಕ್ಷಣ – ಐದು ದಶಕ’ ಎಂಬ ವಿಷಯಗಳ ಮಾಡನಾಡಲಿದ್ದಾರೆ. ಸಂಜೆ 4-30 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಹಿರಿಯ ನಾಟಕಕಾರರಾದ ಡಾ. ಹೆಚ್.ಎಸ್. ಶಿವಪ್ರಕಾಶ್ ಇವರು ಸಮಾರೋಪ ಭಾಷಣ ಮಾಡಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ
    Next Article ಉಡುಪಿಯ ರಾಜಾಂಗಣದಲ್ಲಿ ‘ರಾಗರತ್ನ ಮಾಲಿಕೆ- 27’ | ಆಗಸ್ಟ್ 31 
    roovari

    Comments are closed.

    Related Posts

    ಅಂತರರಾಷ್ಟ್ರೀಯ ‘ಬೂಕರ್ ಪ್ರಶಸ್ತಿ’ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ

    June 4, 2025

    ಗಮಕಕಲಾ ಪ್ರತಿಷ್ಠಾನದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 07

    June 4, 2025

    ಕೊಂಡೆವೂರಿನಲ್ಲಿ ತುಲುವೆರೆ ಕಲ ಸಂಘಟನೆಯ ಎರಡನೇ ‘ವರ್ಸೋಚ್ಚಯ’

    June 3, 2025

    ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿಯವರಿಗೆ ಗೃಹ ಸನ್ಮಾನ

    June 3, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.