Subscribe to Updates

    Get the latest creative news from FooBar about art, design and business.

    What's Hot

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮಾರೀಕಾಡು’ | ಜೂನ್ 17   

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಗಮಕ ಶ್ರಾವಣ’ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭ
    Gamaka

    ‘ಗಮಕ ಶ್ರಾವಣ’ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭ

    September 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಜೇಶ್ವರ : ಕರ್ನಾಟಕ ಗಮಕ ಕಲಾ ಪರಿಷತ್ ಮತ್ತು ಸಿರಿಗನ್ನಡ ವೇದಿಕೆ ಸಂಸ್ಥೆಗಳ ಕೇರಳ ಗಡಿನಾಡು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಶ್ರಾವಣ ಮಾಸದ ಗಮಕ ಶ್ರಾವಣ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ದಿನಾಂಕ 4 ಸೆಪ್ಟೆಂಬರ್ 2024ರಂದು ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಗಾಯತ್ರಿ ಸಭಾಂಗಣದಲ್ಲಿ ನಡೆಯಿತು.

    ಈ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಮಾತನಾಡಿ “ಕಲೆ ಮತ್ತು ಸಾಹಿತ್ಯಗಳು ಸರಸ್ವತೀ ದೇವಿಯು ಮನುಜರಿಗೆ ಕರುಣಿಸುವ ಮಹೋನ್ನತವಾದ ವರಗಳು. ಅವುಗಳು ಭಾರತೀಯ ಸಂಸ್ಕೃತಿಯ ಕಣ್ಣುಗಳು. ಗಮಕ ಕಲಾ ಪರಿಷತ್ ಮತ್ತು ಸಿರಿಗನ್ನಡ ವೇದಿಕೆಗಳು ಸಂಯುಕ್ತವಾಗಿ ನಡೆಸಿಕೊಂಡು ಬರುತ್ತಿರುವ ಸಾಹಿತ್ಯ ಸಮಾರಾಧನೆಗಳು ಸಂಪೂರ್ಣ ಯಶಸ್ವಿಯಾಗಿ ನೆರವೇರುತ್ತಿವೆ” ಎಂದು ಹೇಳಿದ್ದಾರೆ.

    ಗಮಕ ಕಲಾ ಪರಿಷತ್‌ನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೇಕೆರೆ ಶಂಕರನಾರಾಯಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ, ಸಿರಿಗನ್ನಡ ವೇದಿಕೆಯ ಗಡಿನಾಡ ಘಟಕದ ಅಧ್ಯಕ್ಷ ವಿ.ಬಿ. ಕುಳಮರ್ವ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಗಮಕ ಶ್ರಾವಣದ ಮಹತ್ವನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಮುಖ್ಯೋಪಾಧ್ಯಾಯ ಕಮಲಾಕ್ಷ ಎಂ. ಶುಭಹಾರೈಸಿದರು.

    ಕುಳಮರ್ವ ಶಂಕರ ಶರ್ಮರು ಭಾಮಿನಿ ಷಟ್ಟದಿಯಲ್ಲಿ ರಚಿಸಿದ ‘ಉತ್ತರ ಕಾಂಡ ಕಾವ್ಯಧಾರಾ’ ಮಹಾಕಾವ್ಯದಿಂದಾಯ್ದ ‘ಲಕ್ಷ್ಮಣ ಮಹೋತ್ಸರ್ಗ’ ಎಂಬ ಭಾಗವನ್ನು ದಿವ್ಯಾ ಕಾರಂತ ಸುಶ್ರಾವ್ಯವಾಗಿ ವಾಚಿಸಿದರು. ಗಮಕಿ ಜಯಲಕ್ಷ್ಮೀ ಕಾರಂತ ಮಂಗಲ್ಪಾಡಿ ಭಾವಪೂರ್ಣವಾಗಿ ವ್ಯಾಖ್ಯಾನ ಮಾಡಿದರು. ಉತ್ತರ ಕಾಂಡ ಕಾವ್ಯಧಾರಾ ಮಹಾಕಾವ್ಯವನ್ನು ರಚಿಸಿದ ಕುಳಮರ್ವ ಶಂಕರ ಶರ್ಮ ಇವರನ್ನು ಕೊಂಡೆವೂರು ಶ್ರೀಗಳು ಮತ್ತು ವಿ.ಬಿ. ಕುಳಮರ್ವ ಇವರುಗಳು ಪ್ರತ್ಯೇಕವಾಗಿ ಶಾಲು ಹೊದೆಸಿ ಹಾರ ಹಾಕಿ ಗೌರವಿಸಿದರು. ದಿನೇಶ್ ಜಾದೂಗಾರ್ ಕಾರ್ಯಕ್ರಮ ನಿರೂಪಿಸಿ, ಅಶೋಕ್ ಬಾಡೂರು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ ನಲ್ಲಿ ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನ – ‘ಮಕ್ಕಳ ಧ್ವನಿ 2024’ | ಸೆಪ್ಟೆಂಬರ್ 14
    Next Article ಸದಾನಂದ ರಂಗಮಂಟಪದಲ್ಲಿ ಶ್ರೀ ಪುಂಡಲೀಕ ಹಾಲಂಬಿ ದತ್ತಿ ಕಾರ್ಯಕ್ರಮ | ಸೆಪ್ಟೆಂಬರ್ 15
    roovari

    Comments are closed.

    Related Posts

    ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿಯವರಿಗೆ ಗೌರವ ಸಮರ್ಪಣೆ

    June 12, 2025

    ಕವನ | ಮುಂಗಾರು ಮಳೆ

    June 12, 2025

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    ನಾಟಕ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 11, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.