Subscribe to Updates

    Get the latest creative news from FooBar about art, design and business.

    What's Hot

    ತೆಕ್ಕಟ್ಟೆಯಲ್ಲಿ ಯಶಸ್ವಿ ಪ್ರದರ್ಶನಕಂಡ “ಸೂರ್ಯ ಚಂದ್ರ” ಮಕ್ಕಳ ನಾಟಕ

    June 6, 2025

    ಬೆಂಗಳೂರಿನ ಬಸವನಗುಡಿಯಲ್ಲಿ ‘ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ’ | ಜೂನ್ 07

    June 6, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್ ಶಾರದೋತ್ಸವದ ಸುವರ್ಣ ಸಂಭ್ರಮದ ಪ್ರಯುಕ್ತ ಭಜನಾ ಸ್ಪರ್ಧೆ
    Competition

    ಸುರತ್ಕಲ್ ಶಾರದೋತ್ಸವದ ಸುವರ್ಣ ಸಂಭ್ರಮದ ಪ್ರಯುಕ್ತ ಭಜನಾ ಸ್ಪರ್ಧೆ

    September 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ, ಶ್ರೀ ಶಾರದಾ ಸೇವಾ ಟ್ರಸ್ಟ್ (ರಿ.) ಮತ್ತು ಶ್ರೀ ಶಾರದಾ ಮಾತೃ ಮಂಡಳಿ ಸುರತ್ಕಲ್ ಇವರು ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಸುವರ್ಣ ವರ್ಷಾಚರಣೆಯ ಪ್ರಯುಕ್ತ ನಡೆಯುತ್ತಿರುವ ಸೆಪ್ಟೆಂಬರ್ ತಿಂಗಳ ಕಾರ್ಯಕ್ರಮವಾಗಿ ದಿನಾಂಕ 22 ಸೆಪ್ಟೆಂಬರ್ 2024ರಂದು ಸಾರ್ವಜನಿಕ ಭಜನಾ ಸ್ಪರ್ಧೆ ನಡೆಯಿತು.

    ಸುರತ್ಕಲ್ ಶಾರದಾ ಮಂದಿರದಲ್ಲಿ ನಡೆದ ಸ್ಪರ್ಧೆಯನ್ನು ಶ್ರೀ ಶಾರದಾ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ವೈ. ರಾಘವೇಂದ್ರ ರಾವ್ ವಿದ್ಯುಕ್ತವಾಗಿ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಕೃಷ್ಣ ಶೆಟ್ಟಿ, ಕಾರ್ಯದರ್ಶಿ ಶ್ರೀ ಸುರೇಶ್ ಶೆಟ್ಟಿ, ಶ್ರೀ ಶಾರದಾ ಮಾತೃ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಅನುರಾಧಾ ರಾಜೀವ್, ಗೌರವಾಧ್ಯಕ್ಷರಾದ ಶ್ರೀಮತಿ ವೀಣಾ ಟಿ. ಶೆಟ್ಟಿ, ಶ್ರೀಮತಿ ಸುನೀತಾ ಶೇಖರ್, ಶ್ರೀಮತಿ ತಾರಾ ಧನುರಾಜ್ ಉಪಸ್ಥಿತರಿದ್ದರು. ಭಜನಾ ಸ್ಪರ್ಧೆಯ ಸಂಚಾಲಕಿಯಾದ ವಿದುಷಿ ಶ್ರೀಮತಿ ಸುಮಂಗಲಾ ರತ್ನಾಕರ್ ರಾವ್ ಸಮಗ್ರವಾಗಿ ಕಾರ್ಯಕ್ರಮವನ್ನು ಮುನ್ನಡೆಸಿದರು. ಹದಿಮೂರು ತಂಡಗಳು ಭಾಗವಹಿಸಿದ್ದ ಭಜನಾ ಸ್ಪರ್ಧೆಯಲ್ಲಿ ಸ್ವರಶ್ರೀ ಭಜನಾ ಮಂಡಳಿ ಸುರತ್ಕಲ್ (ಪ್ರಥಮ), ಹಯವದನ ಸಂಗೀತ ಕಲಾ ಶಾಲೆ ಹೊಸಬೆಟ್ಟು (ದ್ವಿತೀಯ), ಆಶ್ರಯ ಮಹಿಳಾ ಮತ್ತು ಯುವ ವೇದಿಕೆ ಕಡಂಬೋಡಿ ಸುರತ್ಕಲ್ (ತೃತೀಯ) ಹಾಗೂ ಶ್ರೀ ದುರ್ಗಾಂಬಾ ಮಹಿಳಾ ಭಜನಾ ಮಂಡಳಿ ತಡಂಬೈಲ್ (ಪ್ರೋತ್ಸಾಹಕ) ಬಹುಮಾನ ಗಳಿಸಿದರು.
    ಶ್ರೀ ನರೇಶ್ ಸಸಿಹಿತ್ಲು ಮತ್ತು ಶ್ರೀ ರಮೇಶ್ ಕಲ್ಮಾಡಿ ತೀರ್ಪುಗಾರರಾಗಿ ಸಹಕರಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಲಾಗ್ರಾಮದಲ್ಲಿ ‘ಸ್ಪಷ್ಟ ಥಿಯೇಟರ್’ ಅರ್ಪಿಸುವ ‘ಕಾಡ್ ರೇಖೈ’ | ಸೆಪ್ಟೆಂಬರ್ 2024 
    Next Article ಕಲಾಭಿ (ರಿ.)ಯ ‘ಪುರ್ಸನ ಪುಗ್ಗೆ’ ಬೊಂಬೆಯಾಟ ದೆಹಲಿಯ ಶಾದಿಪುರ್ ನಾಟಕೋತ್ಸವದಲ್ಲಿ ಪ್ರದರ್ಶನ | ಸೆಪ್ಟೆಂಬರ್ 28
    roovari

    Comments are closed.

    Related Posts

    ಬೆಂಗಳೂರಿನ ಬಸವನಗುಡಿಯಲ್ಲಿ ‘ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ’ | ಜೂನ್ 07

    June 6, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಕೃಷ್ಣಗೀತೆ’ | ಜೂನ್ 08

    June 6, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.