Subscribe to Updates

    Get the latest creative news from FooBar about art, design and business.

    What's Hot

    ಮಾತಂಗಿ ಟೀಚರ್ ಮತ್ತು ಡಾಕ್ಟರ್ ನಂದಿನಿಯ ಸಂಗೀತದಲ್ಲಿ ಮುಳುಗಿದ ಗೋಶಾಲೆ

    October 27, 2025

    ಪುಸ್ತಕ ವಿಮರ್ಶೆ | ಗ್ರಾಮಭಾರತದ ಚಿತ್ರಣ ‘ನದಿ ದಾಟಿ ಬಂದವರು’ ಕಾದಂಬರಿ

    October 27, 2025

    ಪುತ್ತೂರಿನ ನಂದಗೋಕುಲ ವೇದಿಕೆಯಲ್ಲಿ ‘ಕನ್ನಡ ರಾಜ್ಯೋತ್ಸವ 2025’ | ನವೆಂಬರ್ 01

    October 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೆರೆಮನೆ ಯಕ್ಷಗಾನ ಸಂಸ್ಥೆಗೆ ವಿಶ್ವಸಂಸ್ಥೆಯ ಮಾನ್ಯತೆ
    Yakshagana

    ಕೆರೆಮನೆ ಯಕ್ಷಗಾನ ಸಂಸ್ಥೆಗೆ ವಿಶ್ವಸಂಸ್ಥೆಯ ಮಾನ್ಯತೆ

    October 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹೊನ್ನಾವರ : ಹೊನ್ನಾವರ ತಾಲೂಕಿನ ಗುಣವಂತೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಸಂಸ್ಥೆಗೆ ವಿಶ್ವಸಂಸ್ಥೆಯ ಮಾನ್ಯತೆ, ಗೌರವ ದೊರೆತಿದೆ ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ.

    2024ರ ಜೂನ್ ತಿಂಗಳಿನಲ್ಲಿ ಯುನೆಸ್ಕೊ ಮುಖ್ಯ ಕಚೇರಿಯಲ್ಲಿ ನಡೆದ 10ನೇ ಅಧಿವೇಶನದಲ್ಲಿ ಮಂಡಳಿಗೆ ಮಾನ್ಯತೆ ಘೋಷಿಸಲಾಗಿದೆ. ಯುನೆಸ್ಕೊ 2003ರ ಅಮೂರ್ತ ಸಾಂಸ್ಕೃತಿಕ ಪರಂಪರೆ, ಸಂರಕ್ಷಣೆ, ಆಂತರಿಕ ಸಮಿತಿಗೆ ಸಲಹೆ ಮಾಡಲು ಮಂಡಳಿ ಮಾನ್ಯತೆ ಪಡೆದಿದೆ ಎಂದು ತಿಳಿಸಿದ್ದಾರೆ.
    ಯಕ್ಷಗಾನ ಸಂಸ್ಥೆಯೊಂದು ವಿಶ್ವಸಂಸ್ಥೆಯ ಮಾನ್ಯತೆಗೆ ಪಾತ್ರರಾಗಿರುವುದು ಇದೇ ಪ್ರಥಮ ಬಾರಿ. ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದಿರುವ ಕೆರೆಮನೆ ಯಕ್ಷಗಾನ ಮಂಡಳಿ ಯಕ್ಷಗಾನ ರಂಗ ಭೂಮಿಯ ಇತಿಹಾಸವನ್ನು ಹಲವು ಸರ್ವ ಪ್ರಥಮಗಳ ದಾಖಲೆ ನಿರ್ಮಿಸಿದ್ದು, ವಿಶ್ವಸಂಸ್ಥೆಯ ಗೌರವ ಪಡೆದುಕೊಂಡಿದೆ.
    ಯುನೆಸ್ಕೋ ಮಾನ್ಯತೆಯು ಇಡಗುಂಜಿ ಮಂಡಳಿ ಸುಧೀರ್ಘವಾಗಿ ನಡೆಸುತ್ತಾ ಬಂದ ಯಕ್ಷಗಾನದ ಸಂವರ್ಧನೆ, ಪರಂಪರೆಯ ಪ್ರಸಾರ, ಪ್ರಚಾರ ಹಾಗೂ ದಾಖಲಾತಿ ಈ ಎಲ್ಲಾ ಪ್ರಯತ್ನ ಹಾಗೂ ಅಂತಾರಾಷ್ಟ್ರೀಯ ಸಾಧನೆಗೆ ಸಾಂಸ್ಕೃತಿಕ ಪರಂಪರೆಯ ಸಮುದಾಯದಲ್ಲಿ ಸಿಕ್ಕ ಗೌರವ ಎಂದು ಕೆರೆಮನೆ ಶಿವಾನಂದ ಹೆಗಡೆ ಸಂತಸ ವ್ಯಕ್ತಪಡಿಸಿದ್ದಾರೆ. 90ರ ಸಂಭ್ರಮದಲ್ಲಿರುವ ಕೆರೆಮನೆ ಯಕ್ಷಗಾನ ಮಂಡಳಿ ‘ನಾತ್ಯೋತ್ಸವ’, ‘ರಾಷ್ಟ್ರೀಯ ಅಧ್ಯಯನ’ ಕಾರ್ಯಾಗಾರ ಮುಂತಾದ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಟೀಲಿನ ಸರಸ್ವತೀ ಸದನದಲ್ಲಿ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಸಂಮಾನ
    Next Article ಕರ್ನಾಟಕ ಸುವರ್ಣ ಸಂಭ್ರಮ ಕನ್ನಡ ಜ್ಯೋತಿ ರಥಯಾತ್ರೆಗೆ ಪುತ್ತೂರಿನಲ್ಲಿ ಭವ್ಯ ಸ್ವಾಗತ ಮತ್ತು ಪುರ ಮೆರವಣಿಗೆ
    roovari

    Comments are closed.

    Related Posts

    ಶ್ರೀ ಎಡನೀರು ಮಠದಲ್ಲಿ ‘ಸಾವಿರದ ಗಾನಕೋಗಿಲೆಗೆ ಸಾವಿರದ ಗೌರವ’ | ಅಕ್ಟೋಬರ್ 28

    October 25, 2025

    ಕುತ್ಯಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಉದ್ಘಾಟನೆಗೊಂಡ ‘ರಜತ ರಂಗ’ ಅಭಿಯಾನ

    October 24, 2025

    ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ನಿಧನ

    October 24, 2025

    ಮಂಗಳೂರು ತುಳು ಭವನದಲ್ಲಿ ಶ್ರದ್ಧಾಂಜಲಿ ಸಭೆ ಹಾಗೂ ನುಡಿ ನಮನ ಸಲ್ಲಿಕೆ | ಅಕ್ಟೋಬರ್ 25

    October 24, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.