Subscribe to Updates

    Get the latest creative news from FooBar about art, design and business.

    What's Hot

    ಯುವ ನೃತ್ಯೋತ್ಸವ-2025| ಜೂನ್ 08

    June 4, 2025

     ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈಗಳಿಗೆ ಅಭಿವಂದನೆ

    June 4, 2025

    ಕಲಾಂಗಣದಲ್ಲಿ ಕೊಂಕಣಿ ಕಾರ್ಯಕ್ರಮಗಳು

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಾನಸಗಂಗೋತ್ರಿಯ ಲಲಿತ ಕಲಾ ಕಾಲೇಜಿನಲ್ಲಿ ಪ್ರಸಾಧನ ಹಾಗೂ ಮುಖವಾಡ ತಯಾರಿಕಾ ಕಾರ್ಯಗಾರ
    Theatre

    ಮಾನಸಗಂಗೋತ್ರಿಯ ಲಲಿತ ಕಲಾ ಕಾಲೇಜಿನಲ್ಲಿ ಪ್ರಸಾಧನ ಹಾಗೂ ಮುಖವಾಡ ತಯಾರಿಕಾ ಕಾರ್ಯಗಾರ

    October 27, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ವಿಶ್ವವಿದ್ಯಾನಿಲಯ ಲಲಿತ ಕಲಾ ಕಾಲೇಜು ಮಾನಸಗಂಗೋತ್ರಿ ಮೈಸೂರು ಇಲ್ಲಿ ಶ್ರೀ ಗುಬ್ಬಿ ವೀರಣ್ಣ ಪೀಠದ ವತಿಯಿಂದ ಕಾಲೇಜು ವಿದ್ಯಾರ್ಥಿಗಳು ಹಾಗೂ ರಂಗಾಸಕ್ತರಿಗಾಗಿ ಒಂದು ದಿನದ ಪ್ರಸಾಧನ ಹಾಗೂ ಮುಖವಾಡ ತಯಾರಿಕಾ ಕಾರ್ಯಗಾರ ದಿನಾಂಕ 26 ಅಕ್ಟೋಬರ್ 2024 ರಂದು ನಡೆಯಿತು.


    ಶ್ರೀ ಗುಬ್ಬಿ ವೀರಣ್ಣ ಪೀಠದ ರಂಗತಜ್ಞರಾದ ಅರಸೀಕೆರೆ ಯೋಗಾನಂದ ಇವರು ಪ್ರಾಸ್ತಾವಿಕವಾಗಿ ಮಾತನಾಡುಡಿ “ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಕಲಿಯಲು ಇಂತಹ ಕಾರ್ಯಾಗಾರಗಳ ಅಗತ್ಯವಿದ್ದು, ಮುಂದಿನ ಪ್ರತಿ ಶನಿವಾರದಂದು ಅಭಿನಯ, ವಾಚಿಕ, ರಂಗಸಂಗೀತ, ವಸ್ತ್ರಾಲಂಕಾರ ಮುಂತಾದ ವಿಷಯಗಳ ಕುರಿತು ಕಾರ್ಯಾಗಾರಗಳು ನೆಡೆಯಲಿವೆ.” ಎಂದು ತಿಳಿಸಿದರು.


    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಅನಿಟ ಬ್ರಾಗ್ಸ್ ಮಾತನಾಡಿ ಲಲಿತ ಕಲಾ ಕಾಲೇಜು 60ನೇ ವರ್ಷಕ್ಕೆ ಕಾಲಿಟ್ಟಿದ್ದು, ಇಂದು ಓಪನ್ ಎಲೆಕ್ಟೀವ್ ಇದರ ಸ್ನಾತಕೋತ್ತರ ಹಾಗೂ ಸ್ನಾತಕಪೂರ್ವ ಅಧ್ಯಯನ ನೆಡೆಸುತ್ತಿರುವ ಸುಮಾರು 80 ವಿದ್ಯಾರ್ಥಿಗಳು ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.” ಎಂದರು.


    ರಂಗಾಯಣದ ಹಿರಿಯ ಕಲಾವಿದರಾದ ಶ್ರೀ ಸಂತೋಷ್ ಕುಮಾರ್ ಕೂಸನೂರು ಇವರು ವಿವಿಧ ರೀತಿಯ ಮುಖವರ್ಣಿಕೆ ಮಾಡಿ ತೋರಿಸಿದರು. ಕಾಗದ ಹಾಗೂ ಪಿ. ಓ. ಪಿ. ಯಿಂದ ಮುಖವಾಡಗಳನ್ನು ಮಾಡುವ ವಿಧಾನ ಕಲಿಸಿಕೊಟ್ಟರು. ವಿದ್ಯಾರ್ಥಿಗಳು ಸ್ವತಃ ಒಬ್ಬರಿಗೊಬ್ಬರು ಪ್ರಸಾಧನ ಮಾಡಿ ಸಂಭ್ರಮಿಸಿದರು. ಮುಖವಾಡಗಳನ್ನು ತಯಾರಿಸಿ ಪ್ರದರ್ಶಿಸಿದರು. ಕಾಲೇಜಿನ ಅಧ್ಯಾಪಕರಾದ ಸುಬ್ಬುಲಕ್ಷ್ಮಿ, ಗೀತಾ, ಸೂರ್ಯಪ್ರಭ, ಮೇಘ ಸಮೀರ, ನಾಗೇಂದ್ರ, ರಂಗ ಕರ್ಮಿಗಳಾದ ಶ್ರೀನಿವಾಸ ಪಾಲಹಳ್ಳಿ, ಕೆಂಪರಾಜು, ನಿಂಗರಾಜ ಹಾಗೂ ಚಿತ್ತಣ್ಣ ಮುಂತಾದವರು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಸಂಗೀತಾಸಕ್ತರನ್ನು ರಂಜಿಸಿದ ‘ಸಮರ್ಪಣ ಸಂಗೀತಂ’
    Next Article ಮಡಿಕೇರಿಯ ಪತ್ರಿಕಾ ಭವನದಲ್ಲಿ ಲೋಕಾರ್ಪಣೆಗೊಂಡ ‘ಗುಳೆ’ ಕಾದಂಬರಿ
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 3, 2025

    ಮಂಗಳೂರು ರೋಟರಿಯಲ್ಲಿ ಕಾಸರಗೋಡು ಚಿನ್ನಾರ ನಗೆಯ ಸಂಜೆ

    June 3, 2025

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications