Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಹಸ್ತಪ್ರತಿ ಶಾಸ್ತ್ರದ ಭೀಷ್ಮ – ಬಿ. ಎಸ್. ಸಣ್ಣಯ್ಯ

    June 18, 2025

    ಮುಂಡಾಜೆಯಲ್ಲಿ ‘ದರ್ಪಣ’ ಕವನ ಸಂಕಲನದ ಲೋಕಾರ್ಪಣೆ | ಜೂನ್ 19

    June 18, 2025

    ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21

    June 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉದಯಭಾನು ಕಲಾಸಂಘದ ವೇದಿಕೆಯಲ್ಲಿ ವಿಜ್ರಂಭಣೆಯಿಂದ ಜರಗಿದ ‘ಕಾಳಿಂಗ ನಾವಡ ಪ್ರಶಸ್ತಿ’ ಪ್ರದಾನ ಸಮಾರಂಭ
    Awards

    ಉದಯಭಾನು ಕಲಾಸಂಘದ ವೇದಿಕೆಯಲ್ಲಿ ವಿಜ್ರಂಭಣೆಯಿಂದ ಜರಗಿದ ‘ಕಾಳಿಂಗ ನಾವಡ ಪ್ರಶಸ್ತಿ’ ಪ್ರದಾನ ಸಮಾರಂಭ

    October 31, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಬೆಂಗಳೂರಿನ ‘ಕಲಾಕದಂಬ ಆರ್ಟ್ ಸೆಂಟರ್’ ಸಂಸ್ಥೆಯ 2024ನೇ ಸಾಲಿನ ‘ಕಾಳಿಂಗ ನಾವಡ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 27 ಅಕ್ಟೋಬರ್ 2024ರಂದು ಬೆಂಗಳೂರಿನ ಚಾಮರಾಜಪೇಟೆಯ ಉದಯಭಾನು ಕಲಾಸಂಘದ ವೇದಿಕೆಯಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಹಿರಿಯ ಚಂಡೆ ವಾದಕ ಶ್ರೀ ಶಿವಾನಂದ ಕೋಟ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಖ್ಯಾತ ಸಂಗೀತ ವಿದ್ವಾಂಸರಾದ ಡಾ. ಆರ್.ಕೆ. ಪದ್ಮನಾಭ ಮಾತನಾಡಿ “ಪ್ರಶಸ್ತಿಗೆ ಕಲಾವಿದ ಅರ್ಜಿ ಹಾಕುವುದಲ್ಲ. ಪ್ರಭಾವದಿಂದ ಕೊಂಡುಕೊಳ್ಳುವುದಲ್ಲ. ಪ್ರತಿಭೆಯನ್ನು ನೋಡಿ ಗುರುತಿಸಿ ಕೊಡುವುದೇ ನಿಜವಾದ ಪ್ರಶಸ್ತಿ. ನಮ್ಮ ನಾಡಿನ ಹೆಮ್ಮೆಯ ಯಕ್ಷಗಾನ ಕಲೆಯನ್ನು ಜೀವಂತವಿರಿಸಿ ಮುಂದಿನ ಪೀಳಿಗೆಗೆ ದಾಟಿಸುತ್ತಿರುವ ಕಲಾಕದಂಬ ಸಂಸ್ಥೆ ಹಿರಿಯ ಪ್ರತಿಭಾನ್ವಿತ ಕಲಾವಿದರನ್ನು ಗುರುತಿಸಿ ಗೌರವಿಸುವ ಮೂಲಕ ಮಹತ್ತರ ಕೆಲಸ ಮಾಡುತ್ತಿದೆ. ನಮ್ಮ ಈ ಜಾನಪದ ಸಾಂಪ್ರದಾಯಿಕ ಕಲೆಗಳು ತಮ್ಮ ಮೂಲ ಸ್ವರೂಪದಲ್ಲೇ ಇರಬೇಕು. ಪಾಶ್ಚಾತ್ಯ ಸಂಗೀತ ಬೆರೆಸದೆ ಶುದ್ದ ರೂಪದಲ್ಲಿರಿಸಿ ಕೊಳ್ಳುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

    ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶ್ರೀ ಶಿವಾನಂದ ಕೋಟ “ತಮ್ಮನ್ನು ಮೇಳದಲ್ಲಿ ಈ ಮಟ್ಟಕ್ಕೆ ಬೆಳೆಯುವುದಕ್ಕೆ ಕಾರಣರಾದವಾರು ನಾವಡರು. ಇಂದು ಅವರ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ತಮ್ಮ ಭಾಗ್ಯ. ತಮ್ಮ ಇಂದಿನ ಸಾಧನೆಗೆ ತಂದೆ ತಾಯಿಯರ ಪ್ರೋತ್ಸಾಹ ಮತ್ತು ಯಕ್ಷಗಾನ ಗುರುಗಳಾದ ಎಂ. ಎನ್. ಮದ್ಯಸ್ಥರು ಕೊಟ್ಟ ಯಕ್ಷಶಿಕ್ಷಣ ಕಾರಣ.” ಎಂದು ಸ್ಮರಿಸಿಕೊಂಡರು. ಈ ಪ್ರಶಸ್ತಿಯು ಬೆಳ್ಳಿ ತಟ್ಟೆ, 15,000 ಸಾವಿರ ನಗದು ಸೇರಿದಂತೆ ಪ್ರಶಸ್ತಿ ಪತ್ರ ಒಳಗೊಂದಿತ್ತು.

    ನಾವಡರ ನೆನಪು ಉಳಿಸುವ ಒಂದು ಪುತ್ಥಳಿ ಸ್ಥಾಪನೆಯಾಗಬೇಕೆಂಬ ಮುರಳೀಧರ ನಾವಡರ ಆಶಯಕ್ಕೆ ಸ್ಪಂಧಿಸಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ ಕುಮಾರ್ ಕೊಡ್ಗಿ “ಸೂಕ್ತ ಯೋಜನೆಯನ್ನ ಸಿದ್ಧಪಡಿಸಿಕೊಂಡು ಮುನ್ನಡೆಯೋಣ.” ಎಂಬ ಭರವಸೆಯ ಮಾತನಾಡಿದರು. ಚಲನಚಿತ್ರ ಪತ್ರಕರ್ತರಾದ ಶ್ರೀ ಗಣೇಶ್ ಕಾಸರಗೋಡು ಮಾತನಾಡಿ “ಚಲನಚಿತ್ರದಲ್ಲಿ ಶಂಕರ್ ನಾಗರಂತೆ ನಾವಡರು ಕಿರಿಯ ವಯಸ್ಸಿನಲ್ಲೇ ಮಹತ್ತರ ಸಾಧನೆ ಮಾಡಿದ ಮೇರುಕಂಠದ ಭಾಗವತರು.” ಎಂದರು.

    ಕಲಾ ಕದಂಬ ಆರ್ಟ್ ಸೆಂಟರ್ ನ ನಿರ್ದೇಶಕರಾದ ಡಾ. ರಾಧಾಕೃಷ್ಣ ಉರಾಳರು ಪ್ರಾಸ್ತಾವಿಕ ಮಾತನಾಡಿದರು. ಯುವ ವಿಪ್ರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ ಅಡಿಗ, ಕಾಳಿಂಗ ನಾವಡರ ಸಹೋದರ ಗಣಪಯ್ಯ ನಾವಡ, ಸಹೋದರಿ ಸುಶೀಲ ಉರಾಳ, ಕಲಾ ಕದಂಬ ಆರ್ಟ್ ಸೆಂಟರ್ ಇದರ ಗೌರವ ಅಧ್ಯಕ್ಷರಾದ ಶ್ರೀ ದೇವರಾಜ ಕರಬ ವಿಶ್ವನಾಥ ಉರಾಳ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಸಭಾ ಕಾರ್ಯಕ್ರಮದ ಬಳಿಕ ಮುರಳೀಧರ ನಾವಡರ ಶಿಷ್ಯರ ಹಾಡುಗಳು, ಕುಮಾರಿ ಮಧುಮಿತ ರವೀಂದ್ರ ಹಾಗೂ ಭೂಮಿ ಶೆಟ್ಟಿ ಇವರ ಭರತನಾಟ್ಯ, ಹೊಸ್ತೋಟ ಮಂಜುನಾಥ ಭಾಗವತರ ತೀರಾ ಅಪರೂಪದ ರಾಮಾಯಣ ಯಕ್ಷಗಾನ ಪ್ರಸಂಗ “ಕಾಲನೇಮಿ ಕಾಳಗ” ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಜ್ಯೋತಿ ರಥಕ್ಕೆ ತೀರ್ಥಹಳ್ಳಿಯಲ್ಲಿ ಸ್ವಾಗತ
    Next Article ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ತಿಂಗಳಿಡೀ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕಗಳ ವಿಶೇಷ ರಿಯಾಯಿತಿ ಮಾರಾಟ
    roovari

    Add Comment Cancel Reply


    Related Posts

    ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21

    June 18, 2025

    ಕೊಯ್ಯೂರು ಪಂಚದುರ್ಗಾಪರಮೇಶ್ವರಿ ದೇವಾಲಯದಲ್ಲಿ ಯಕ್ಷಗಾನ ತಾಳಮದ್ದಳೆ

    June 18, 2025

    ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ‘ಯಕ್ಷ ಸಿಂಧೂರ’ | ಜೂನ್ 21 

    June 18, 2025

    ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ‘ಲಂಕಾ ದಹನ’ ಯಕ್ಷಗಾನ | ಜೂನ್ 21

    June 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.