Subscribe to Updates

    Get the latest creative news from FooBar about art, design and business.

    What's Hot

    ರಾಜೇಶ್ವರಿ ಕುಡುಪು ಇವರ ‘ಕಲಾಸಂಪದ’ ಪುಸ್ತಕ ಬಿಡುಗಡೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ರಾಜ್ಯೋತ್ಸವ ಹಾಗೂ ಸಾಹಿತ್ಯ ಸಂಭ್ರಮ ಉದ್ಘಾಟನೆ 
    Literature

    ಕನ್ನಡ ರಾಜ್ಯೋತ್ಸವ ಹಾಗೂ ಸಾಹಿತ್ಯ ಸಂಭ್ರಮ ಉದ್ಘಾಟನೆ 

    November 6, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು, ಕನ್ನಡ ಸಾಹಿತ್ಯ ಪರಿಷತ್ ಪಂಜ ಹೋಬಳಿ ಘಟಕ, ನೆಹರು ಮೆಮೋರಿಯಲ್ ಕಾಲೇಜು ಐ.  ಕ್ಯೂ. ಎ. ಸಿ. ವಿಭಾಗ ಮತ್ತು ಕನ್ನಡ ಸಂಘ ಇದರ ಅಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ದಿನಾಂಕ 04 ನವಂಬರ್ 2024ರಂದು ನೆಹರು ಮೆಮೋರಿಯಲ್ ಕಾಲೇಜು ಆವರಣದಲ್ಲಿ ನಡೆಯಿತು. 

    ಕಾರ್ಯಕ್ರಮದಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿನಿಧಿ ಉಪನ್ಯಾಸ ನೀಡಲು ಆಗಮಿಸಿದ ಹಿರಿಯ ಸಾಹಿತಿ ಡಾ‌. ಪ್ರಭಾಕರ ಶಿಶಿಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಕರ್ನಾಟಕದಲ್ಲಿ ಕನ್ನಡ ನುಡಿ, ನೆಲ ಹಾಗೂ ಜಲದ ಪರಿಸ್ಥಿತಿ ಆತಂಕವನ್ನು ಎದುರಿಸುತ್ತಿದ್ದು, ನಮ್ಮ ಸಂಸ್ಕ್ರತಿ ಮತ್ತು ಸಾಹಿತ್ಯದ ಉಳಿವಿಗಾಗಿ ಕನ್ನಡಿಗರಾದ ನಾವೆಲ್ಲರೂ ಪ್ರಾಮಾಣಿಕ  ಪ್ರಯತ್ನ ಮಾಡಿ ನಮ್ಮತನವನ್ನು ಉಳಿಸಿಕೊಳ್ಳಬೇಕು.” ಎಂದರು.  

    ಕ. ಸಾ. ಪ. ಅದ್ಯಕ್ಷ ಚಂದ್ರಶೇಖರ್ ಪೇರಾಲು ಇವರ  ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪ್ರಾಂಶುಪಾಲ ಡಾ. ರುದ್ರಕುಮಾರ್ ಹಾಗೂ ಪಿ. ಯು. ಸಿ. ವಿಭಾಗದ  ಪ್ರಾಂಶುಪಾಲೆ ಶ್ರೀಮತಿ ಮಿಥಾಲಿ ರೈ, ವಿಧ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ, ಜಿಲ್ಲಾ ಸಾಹಿತ್ಯ ಪರಿಷತ್ ಇದರ ಪ್ರತಿನಿಧಿ ಶ್ರೀ ರಾಮಚಂದ್ರ ಪಲ್ಲತ್ತಡ್ಕ ಮತ್ತು ಕೋಶಾಧಿಕಾರಿ ಶ್ರೀ ದಯಾನಂದ ಆಳ್ವ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಯುಕ್ತ ನಡೆಸಿದ ಸಾಹಿತ್ಯ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಹಾಗು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ  ಗಾಯಕರಾದ ಕೆ. ಆರ್. ಗೋಪಾಲ ಕೃಷ್ಣ , ಕು. ಅಭಿಜ್ನಾ ಮತ್ತು ತಂಡ ಮತ್ತು ಕು. ಅಭಿಷೇಕ್ ಮತ್ತು ತಂಡದವರು ಕನ್ನಡ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು. ಪ್ರೊ. ಸಂಜೀವ ಕುದ್ಪಾಜೆ ಸ್ವಾಗತಿಸಿ, ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ನಿರೂಪಿಸಿ, ಶ್ರೀಮತಿ ಚಂದ್ರಾವತಿ ಬಡ್ಡಡ್ಕ ದನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleತಿಂಗಳ ಸರಣಿ ಕಾರ್ಯಕ್ರಮದಲ್ಲಿ ‘ಪಂಚವಟಿ’ ತಾಳಮದ್ದಳೆ
    Next Article ವಿದ್ವಾನ್ ಮಂಜುನಾಥ ಎನ್. ಪುತ್ತೂರು ಇವರಿಂದ ತಾಳ ಮತ್ತು ತಿಲ್ಲಾನ ಕಾರ್ಯಾಗಾರ | ನವೆಂಬರ್ 08 ರಿಂದ 10
    roovari

    Add Comment Cancel Reply


    Related Posts

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.